ಶಾಸಕಿ ಅನಿತಾ ಕುಮಾರಸ್ವಾಮಿ ಬಾಯಿಂದ ಇದೆಂಥಾ ಮಾತು..!

Published : Nov 24, 2020, 02:48 PM IST
ಶಾಸಕಿ ಅನಿತಾ ಕುಮಾರಸ್ವಾಮಿ ಬಾಯಿಂದ ಇದೆಂಥಾ ಮಾತು..!

ಸಾರಾಂಶ

ಸ್ಥಳೀಯರು ಶಾಸಕಿ ಅನಿತಾ ಕುಮಾರಸ್ವಾಮಿ ಕೆಲಸಗಳಿ ಅಸಮಾಧನಗೊಂಡಿದ್ದು, ಈ ಬಗ್ಗೆ ರಾಮನಗರಕ್ಕಿಂದು ಆಗಮಸಿದ ಶಾಸಕಿ ಮಾಧ್ಯಮಗಳ ಮೇಲೆ ಬೇಸರಗೊಂಡಿದ್ದಾರೆ. 

ರಾಮನಗರ, (ನ.24): ನಾನು ರಾಜಕಾರಣ ಮಾಡಲು ಬಂದಿಲ್ಲ, ಸಮಾಜ ಸೇವೆ ಮಾಡಲು ಬಂದಿದ್ದೇನೆ ಎಂದು ರಾಮನಗರ ಜೆಡಿಎಸ್​ ಶಾಸಕಿ ಅನಿತಾ ಕುಮಾರಸ್ವಾಮಿ  ಹೇಳಿದ್ದಾರೆ.

ಮಂಗಳವಾರ ರಾಮನಗರದ ರಾಜೀವ್ ಗಾಂಧಿಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜಕಾರಣದ ಸಮಯದಲ್ಲಿ ರಾಜಕೀಯ ಆದರೆ ಬಡವರ ವಿಚಾರದಲ್ಲಿ ರಾಜಕೀಯ ಮಾಡಿಲ್ಲ. ಕೊರೋನಾ ಸಂದರ್ಭದಲ್ಲಿ ನಾನು, ಪತಿ ಕುಮಾರಸ್ವಾಮಿ, ಮಗ ನಿಖಿಲ್ ಜೊತೆಗೆ ಸೊಸೆಯೂ ಬಂದಿದ್ದರು ಎಂದರು.

ಬೇಸರವಾಗೋದು ಬೇಡ : ನಾನು ನನ್ನ ಮಗ, ಕುಮಾರಸ್ವಾಮಿ ಇದ್ದೇವೆ

ಇನ್ನು ಬಡವರಿಗೆ ಫುಡ್​ಕಿಟ್ ಜೊತೆಗೆ ಹೆಲ್ತ್ ಕಿಟ್ ಕೊಟ್ಟಿದ್ದೇವೆ. ರಾಮನಗರದ ಎಂಪಿಎಮ್​ಸಿ, ರೇಷ್ಮೆ ಮಾರ್ಕೆಟ್​ನಲ್ಲಿ ಸ್ಯಾನಿಟೈಜರ್ ಟನಲ್ ಹಾಕಿಸಿದ್ದೆವು. ಇಷ್ಟೆಲ್ಲಾ ಕೆಲಸ ಬೇರೆ ಯಾವ ತಾಲೂಕಿನಲ್ಲಿ ಆಗಿದೆ ಹೇಳಿ(?) ಸುಮ್ಮನೆ ನಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಒಬ್ಬ ಮಹಿಳೆ ಇದ್ದೇನೆ. ನನಗೂ ಸಹಕಾರ ಕೊಡಿ ಎಂದು ಮಾಧ್ಯಮದವರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರೆಲ್ಲರೂ ನಮ್ಮ ಮನೆಯವರು, ಯಾರು ಕೂಡ ಪಕ್ಷ ಬಿಡುವುದಿಲ್ಲ, ವಿಶ್ವಾಸವಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ