ರಮೇಶ ಜಾರಕಿಹೊಳಿ ಆಸ್ತಿ 72.25 ಕೋಟಿ ಕುಸಿತ: ಸಾಹುಕಾರ್ ವಿರುದ್ಧ ಇದೆ ಲೈಂಗಿಕ ದೌರ್ಜನ್ಯ ಪ್ರಕರಣ..!

Published : Apr 21, 2023, 01:30 AM IST
ರಮೇಶ ಜಾರಕಿಹೊಳಿ ಆಸ್ತಿ 72.25 ಕೋಟಿ ಕುಸಿತ: ಸಾಹುಕಾರ್ ವಿರುದ್ಧ ಇದೆ ಲೈಂಗಿಕ ದೌರ್ಜನ್ಯ ಪ್ರಕರಣ..!

ಸಾರಾಂಶ

ರಮೇಶ ಜಾರಕಿಹೊಳಿ ಅಫಿಡವಿಟ್‌ನಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಒಂದು ಕ್ರಿಮಿನಲ್ ಮೊಕದ್ದಮೆ ಇದೆ ಎಂದು ಉಲ್ಲೇಖಿಸಿದ್ದಾರೆ.  ವಿಶೇಷ ತನಿಖಾ ತಂಡವು ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದೆ. ಆದರೆ ಎದುರಾಳಿಗಳು ಎಸ್‌ಐಟಿಯ ಸಂವಿಧಾನವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಬೆಳಗಾವಿ(ಏ.21): ಮಾಜಿ ಸಚಿವ ಹಾಗೂ ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಆಸ್ತಿ ಐದು ವರ್ಷಗಳಲ್ಲಿ 72.25 ಕೋಟಿ ಕುಸಿತಗೊಂಡಿದೆ. ನಿನ್ನೆ(ಗುರುವಾರ) ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಸಂಗತಿ ಬೆಳಕಿಗೆ ಬಂದಿದೆ. 

2018ರಲ್ಲಿ ಒಟ್ಟು 122 ಕೋಟಿ ಆಸ್ತಿ ಘೋಷಿಸಿಕೊಂಡಿದ್ದ ಶಾಸಕ ರಮೇಶ್ ಈ ಬಾರಿ 49.25 ಕೋಟಿ ಆಸ್ತಿ ಹೊಂದಿದ್ದಾಗಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ವಿಶೇಷ ಅಂದ್ರೆ ಆಸ್ತಿ ಇಳಿಕೆಗೆ ಕಾರಣವನ್ನು ರಮೇಶ್ ಜಾರಕಿಹೊಳಿ ಉಲ್ಲೇಖಿಸಿಲ್ಲ. ರಮೇಶ ಜಾರಕಿಹೊಳಿ 2018ರಲ್ಲಿ ತಮ್ಮ, ಪತ್ನಿ ಜಯಶ್ರೀ ಹಾಗೂ ಇಬ್ಬರು ಪುತ್ರರಾದ ಅಮರನಾಥ ಹಾಗೂ ಸಂತೋಷ ಅವರ ಆಸ್ತಿ ವಿವರ ನೀಡಿದ್ದರು. ಆದರೆ ಈ ಬಾರಿ ತಮ್ಮ, ಪತ್ನಿ ಹಾಗೂ ಒಬ್ಬ ಪುತ್ರನ ಆಸ್ತಿ ಮಾತ್ರ ಘೋಷಿಸಿದ್ದಾರೆ. ಇನ್ನೊಬ್ಬ ಪುತ್ರ ಸಂತೋಷ ಆಸ್ತಿ ವಿವರ ನೀಡಿಲ್ಲ. 2013ರ ಚುನಾವಣೆ ವೇಳೆ ಒಟ್ಟು 57 ಕೋಟಿ ಘೋಷಿಸಿದ್ದರು. ಸದ್ಯ ಘೋಷಿಸಿದ ಆಸ್ತಿ ಅದಕ್ಕಿಂತಲೂ ಕಡಿಮೆ ಆಗಿದೆ. ಪುತ್ರ ಸಂತೋಷ್ ಜಾರಕಿಹೊಳಿ, ಈಗ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. 

ಅಥಣಿಯಲ್ಲಿ ಸವದಿ VS ಕುಮಟಳ್ಳಿ: ಹೇಗಿದೆ ರಣಕಣ?

ರಮೇಶ ಜಾರಕಿಹೊಳಿ ಅಫಿಡವಿಟ್‌ನಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಒಂದು ಕ್ರಿಮಿನಲ್ ಮೊಕದ್ದಮೆ ಇದೆ ಎಂದು ಉಲ್ಲೇಖಿಸಿದ್ದಾರೆ.  ವಿಶೇಷ ತನಿಖಾ ತಂಡವು ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದೆ. ಆದರೆ ಎದುರಾಳಿಗಳು ಎಸ್‌ಐಟಿಯ ಸಂವಿಧಾನವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ