ಡಿಕೆಶಿ ಮೇಲಿನ ಜಿದ್ದಿಗೆ BSY ಬಳಿ ರಮೇಶ್ ಜಾರಕಿಹೊಳಿ ಪಟ್ಟು

Kannadaprabha News   | Asianet News
Published : Feb 08, 2020, 07:46 AM IST
ಡಿಕೆಶಿ ಮೇಲಿನ ಜಿದ್ದಿಗೆ BSY ಬಳಿ ರಮೇಶ್ ಜಾರಕಿಹೊಳಿ ಪಟ್ಟು

ಸಾರಾಂಶ

ಡಿಕೆ ಶಿವಕುಮಾರ್ ಮೇಲಿನ ಜಿದ್ದಿಗೆ ನನಗೆ ಜಲಸಂಪನ್ಮೂಲ ಖಾತೆಯೇ ಬೇಕು ಎಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಇದೊಂದು ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.

ಬೆಂಗಳೂರು [ಫೆ.08]:  ತಮಗೆ ಜಲಸಂಪನ್ಮೂಲ ಖಾತೆ ನೀಡುವ ಬಗ್ಗೆ ಇದುವರೆಗೆ ಸ್ಪಷ್ಟ ಭರವಸೆ ನೀಡದಿರುವ ಕುರಿತು ಮತ್ತು ತಮ್ಮ ಪರ ಮಾಪ್ತ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ನೂತನ ಸಚಿವ ರಮೇಶ್ ಜಾರಕಿಹೊಳಿ ಅವರ ಮುನಿಸು ಮುಂದುವರೆದಿದೆ. ಸಂಪುಟ ವಿಸ್ತರಣೆಗೆ
ದಿನಾಂಕ ನಿಗದಿಯಾದ ದಿನದಿಂದಲೂ ಯಾರೊಂದಿಗೂ ಹೆಚ್ಚು ಮಾತ ನಾಡದೆ ಮೌನಕ್ಕೆ ಜಾರಿರುವ ರಮೇಶ್ ಅವರು ಶುಕ್ರವಾರ ಸಂಜೆ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು.

ಮುಂದಿನ ಸಾರಿಯೂ ಅಧಿಕಾರಕ್ಕೇರಲು ಬಿಎಸ್‌ವೈಗೆ ಹಿರಿಯ ಶಾಸಕ ಕೊಟ್ಟ ಮಾಸ್ಟರ್ ಪ್ಲಾನ್!...

ಅವರೊಂದಿಗೆ ಶಾಸಕ ಮಹೇಶ್ ಕುಮಟಳ್ಳಿ ಅವರೂ ಇದ್ದರು. ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಂತರವೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ರಮೇಶ್ ಜಾರಕಿಹೊಳಿ ಅವರ ಮುಖದಲ್ಲಿ ಗಂಭೀರತೆಯೇ ಕಂಡು ಬಂತು. 

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಜಿದ್ದಿನಿಂದಾಗಿ ತಮಗೆ ಜಲಸಂಪನ್ಮೂಲ ಖಾತೆಯನ್ನೇ ನೀಡಬೇಕು ಎಂಬ ಪಟ್ಟನ್ನು ಜಾರಕಿಹೊಳಿ ಅವರು ಮುಂದುವರೆಸಿದ್ದರೂ ಮುಖ್ಯಮಂತ್ರಿಗಳು ಈವರೆಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ನೋಡೋಣ ಎಂದಷ್ಟೇ ಹೇಳುತ್ತಿದ್ದಾರೆ. ಪ್ರಮುಖ ಖಾತೆಯಾಗಿದ್ದರಿಂದ ಮುಂದೆ ಹೆಚ್ಚೂ ಕಡಮೆಯಾದರೆ ಹೇಗೆ ಎಂಬ ಚಿಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಡುತ್ತಿದೆ ಎಂದು ತಿಳಿದು ಬಂದಿದೆ. 

ಇದೇ ವೇಳೆ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಬೇಸರ ವ್ಯಕ್ತಪಡಿಸಿರುವ ಜಾರಕಿಹೊಳಿ, ಮುಂದಿನ ಜೂನ್ ಬಳಿಕ ಮತ್ತೊಮ್ಮೆ ವಿಸ್ತರಣೆ ಅಥವಾ ಪುನಾರಚನೆ ಕೈಗೊಳ್ಳುವ ವೇಳೆ ಸಚಿವ ಸ್ಥಾನದ ಬೇಡಿಕೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!