ಸಂಪುಟ ವಿಸ್ತರಣೆಗಾಗಿ ಸಿಎಂ ದೆಹಲಿಗೆ; ಸಾಹುಕಾರ್ ಜಾರಕಿಹೊಳಿ ದೇವೇಂದ್ರನ ಆಸ್ಥಾನಕ್ಕೆ.!

Published : Sep 18, 2020, 01:07 PM ISTUpdated : Sep 18, 2020, 01:59 PM IST
ಸಂಪುಟ ವಿಸ್ತರಣೆಗಾಗಿ ಸಿಎಂ ದೆಹಲಿಗೆ; ಸಾಹುಕಾರ್ ಜಾರಕಿಹೊಳಿ ದೇವೇಂದ್ರನ ಆಸ್ಥಾನಕ್ಕೆ.!

ಸಾರಾಂಶ

ಜಾರಕಿಹೊಳಿ ಸಾಹುಕಾರರು ಏನೇ ಮಾಡಿದರೂ ಅದು ಸುದ್ದಿ ಆಗುತ್ತದೆ. ಇತ್ತ ದಿಲ್ಲಿಯಲ್ಲಿ ಯಡಿಯೂರಪ್ಪ ಸಂಪುಟ ವಿಸ್ತರಣೆಗಾಗಿ ಬಂದಿರುವಾಗ ಅತ್ತ ಮುಂಬೈನಲ್ಲಿ ಜಾರಕಿಹೊಳಿ ಅವರು ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿದ್ದಾರೆ. 

ನವದೆಹಲಿ (ಸೆ. 18): ಜಾರಕಿಹೊಳಿ ಸಾಹುಕಾರರು ಏನೇ ಮಾಡಿದರೂ ಅದು ಸುದ್ದಿ ಆಗುತ್ತದೆ. ಇತ್ತ ದಿಲ್ಲಿಯಲ್ಲಿ ಯಡಿಯೂರಪ್ಪ ಸಂಪುಟ ವಿಸ್ತರಣೆಗಾಗಿ ಬಂದಿರುವಾಗ ಅತ್ತ ಮುಂಬೈನಲ್ಲಿ ಜಾರಕಿಹೊಳಿ ಅವರು ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆಗಾಗಿ ಹೋಗಿದ್ರಾ ಎಂದು ಕೇಳಿದರೆ ರಮೇಶ್‌, ‘ಇಲ್ರಿ.. ನಾನು ಡೆಪ್ಯೂಟಿ ಸಿಎಂ ಎಂದೂ ಕೇಳಿಯೇ ಇಲ್ಲ. ದೇವೇಂದ್ರಜೀ ನಮಗೆ ಬಹಳ ಆತ್ಮೀಯರು, ಹಾಗಾಗಿ ಭೇಟಿ ಆಗಿದ್ದೆ’ ಎನ್ನುತ್ತಾರೆ. ಕಳೆದ ತಿಂಗಳು ಪ್ರಹ್ಲಾದ್‌ ಜೋಶಿ ಅವರನ್ನು ಬೆಂಗಳೂರಿನ ಮನೆಗೆ ಕರೆದುಕೊಂಡು ಹೋಗಿದ್ದ ಜಾರಕಿಹೊಳಿ ಏನೋ ಆಗುತ್ತಿದೆ ಎಂಬ ಸುದ್ದಿಗೆ ಕಾರಣರಾಗಿದ್ದರು. ಕುಮಾರಸ್ವಾಮಿ, ರೆಡ್ಡಿ, ಜಾರಕಿಹೊಳಿ ಕುಟುಂಬಗಳು ಏನೇ ಮಾಡಿದರೂ ಸಂಚಲನ ಮಾತ್ರ ಪಕ್ಕಾ ನೋಡಿ.

-ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!