'ಬಿಜೆಪಿ ಬ್ಲ್ಯಾಕ್ಮೇಲ್‌ ಮಾಡಲು ರಮೇಶ್‌ರಿಂದ ಸಿದ್ದು ಭೇಟಿ'

Published : Dec 16, 2019, 08:01 AM IST
'ಬಿಜೆಪಿ ಬ್ಲ್ಯಾಕ್ಮೇಲ್‌ ಮಾಡಲು ರಮೇಶ್‌ರಿಂದ ಸಿದ್ದು ಭೇಟಿ'

ಸಾರಾಂಶ

ಬಿಜೆಪಿ ಬ್ಲ್ಯಾಕ್ಮೇಲ್‌ ಮಾಡಲು ರಮೇಶ್‌ರಿಂದ ಸಿದ್ದು ಭೇಟಿ| ರಮೇಶ್‌ ವಿರುದ್ಧ ಮುಂದೆಯೂ ಸ್ಪರ್ಧೆ

ಗೋಕಾಕ[ಡಿ.16]: ಉಪಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬಿಜೆಪಿಯವರನ್ನು ಬ್ಲ್ಯಾಕ್‌ಮೇಲ್‌ ಮಾಡುವ ತಂತ್ರವನ್ನು ಶಾಸಕ ರಮೇಶ್‌ ಜಾರಕಿಹೊಳಿ ಆರಂಭಿಸಿದ್ದಾರೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ ಎಂದು ಅವರ ಸೋದರ ಹಾಗೂ ಗೋಕಾಕ್‌ ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ್‌ನಲ್ಲಿ ಭಾನುವಾರ ನಡೆದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲೂ ರಮೇಶ್‌ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದರು.

‘ನೀರಾವರಿ ಮಂತ್ರಿ ಆಗುತ್ತಾರೆ, ಡಿಸಿಎಂ ಆಗುತ್ತಾರೆ ಅಂತಾ ಏನೇನೋ ಹೇಳಿದರು. ಈ ಮನುಷ್ಯನನ್ನು (ರಮೇಶ್‌ ಜಾರಕಿಹೊಳಿ) ನೀರಾವರಿ ಮಂತ್ರಿ ಮಾಡಿದರೆ ನಿಮ್ಮನ್ನು ನಡು ನೀರಲ್ಲೇ ಬಿಟ್ಟು ಬಿಡ್ತಾನೆ. ಪೌರಾಡಳಿತ ಮಂತ್ರಿ ಸ್ಥಾನ ಕೊಟ್ಟರೆ ಮಾತ್ರ ಗಪ್‌ ಇರೋ ಮನುಷ್ಯ ಇವನು’ ಎಂದು ಕಿಡಿಕಾರಿದರು.

ನಾವು ಮಾವ, ಅಳಿಯಂದಿರ ವಿರುದ್ಧ ಸೋತಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸೋತಿದ್ದೇವೆ. ಯಡಿಯೂರಪ್ಪನನ್ನು ನೋಡಿ ಮತ ಹಾಕಿ ಅಂತಾ ಯಡಿಯೂರಪ್ಪ ಹೇಳಿದ್ದರು. ಹೀಗಾಗಿ ರಮೇಶ್‌ ಜಾರಕಿಹೊಳಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ತಿಳಿಸಿದರು.

ವಾಮಮಾರ್ಗದಲ್ಲಿ ದುಡ್ಡಿನ ಹೊಳೆ ಹರಿಸಿ ಮೋಸ ಮಾಡಿದ್ದಾರೆ. ನಾವೆಲ್ಲಾ ಒಂದೇ ಎಂದು ಅಪಪ್ರಚಾರ ಮಾಡಿ, ಮುಗ್ಧ ಜನರಿಗೆ ಮೋಸ ಮಾಡಿ ಮತ ಹಾಕಿಸಿಕೊಂಡಿದ್ದಾರೆ ಎಂದು ದೂರಿದರು.

ಮುಂದಿನ ಚುನಾವಣೆಯಲ್ಲೂ ಸತೀಶಣ್ಣ ಟಿಕೆಟ್‌ ಕೊಡಿಸ್ತಾರೆ, ನಾನು ರಮೇಶ್‌ ವಿರುದ್ಧ ಸ್ಪರ್ಧಿಸುತ್ತೇನೆ. ರಮೇಶ್‌ನ ಮಗ ಸಂತೋಷ್‌ ನಾವೆಲ್ಲ ಒಂದೇ ಅಂತಾ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾನೆ. ರಾಜಕೀಯವಾಗಿ ನಾವು ಅವರ ಜೊತೆ ಎಂದಿಗೂ ಕೂಡಲ್ಲ. ಮುಂದಿನ ಚುನಾವಣೆ ವೇಳೆಯೂ ನಾನು ರಮೇಶ್‌ ವಿರುದ್ಧ ಸ್ಪರ್ಧಿಸುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!