ಸಿಡಿ ಹಿಂದೆ ಇವರಿದ್ದಾರೆ! ಶ್ರೀರಾಮುಲುಗೆ ದೊಡ್ಡ ಅನುಮಾನ

Published : Mar 11, 2021, 03:35 PM IST
ಸಿಡಿ ಹಿಂದೆ ಇವರಿದ್ದಾರೆ! ಶ್ರೀರಾಮುಲುಗೆ ದೊಡ್ಡ ಅನುಮಾನ

ಸಾರಾಂಶ

ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಶ್ರೀರಾಮುಲುಗೆ ಕಾಂಗ್ರೆಸ್ ಮೇಲೆ ಅನುಮಾನವಂತೆ/ ಬಳ್ಳಾರಿಯಲ್ಲಿ ಸಿಡಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು/ ಕಾಂಗ್ರೆಸ್ ಬಿಟ್ಟು ಬಂದು ನಮ್ಮ ಸರ್ಕಾರ ರಚನೆಗೆ ಕಾರಣರಾದ ಎಲ್ಲ ಶಾಸಕರನ್ನ ಟಾರ್ಗೆಟ್ ಮಾಡಲಾಗುತ್ತಿದೆ/ ಇದೊಂದು ಪೋಲಿಟಿಕಲ್ ಷಡ್ಯಂತ್ರ

ಬಳ್ಳಾರಿ (ಮಾ.  11)  ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಶ್ರೀರಾಮುಲುಗೆ ಕಾಂಗ್ರೆಸ್ ಮೇಲೆ ಅನುಮಾನ ಬಂದಿದೆ. ಬಳ್ಳಾರಿಯಲ್ಲಿ ಸಿಡಿ ಬಗ್ಗೆ  ಸಚಿವ ಶ್ರೀರಾಮುಲು ಮಾತನಾಡಿದ್ದಾರೆ.

ಕಾಂಗ್ರೆಸ್ ಬಿಟ್ಟು ಬಂದು ನಮ್ಮ ಸರ್ಕಾರ ರಚನೆಗೆ ಕಾರಣರಾದ ಎಲ್ಲ ಶಾಸಕರನ್ನ ಟಾರ್ಗೆಟ್ ಮಾಡಲಾಗ್ತಿದೆ. ಇದೊಂದು ಪೋಲಿಟಿಕಲ್ ಷಡ್ಯಂತ್ರ ಎನ್ನುವ ಸಂಧರ್ಭ ಇದಾಗಿದೆ. ಹೀಗಾಗಿ ನನಗೆ ಅನುಮಾನ. ಸರ್ಕಾರ ಎಸ್ ಐ ಟಿ ರಚನೆ ಮಾಡಿದೆ.  ಶಿಘ್ರದಲ್ಲೇ ಎಸ್ ಐ ಟಿ ವರದಿ ಕೊಡಲಿದೆ ಎಂದರು.

ಖೆಡ್ಡಾಕ್ಕೆ ಕೆಡವಿದ ಮಾಯಾಂಗನೆ

ಸಿಡಿ ವಿಚಾರದಲ್ಲಿ ಎಲ್ಲರಿಗೂ ನೋವಾಗಿದೆ.  ಹೀಗಾಗಿ ಎಸ್.ಟಿ. ಸೋಮಶೇಖರ ‌ಕೂಡ ಕಾಂಗ್ರೆಸ್ ಬಗ್ಗೆ ಹೇಳಿದ್ದಾರೆ. ಅನುಮಾನ ವ್ಯಕ್ತಪಡಿಸುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆ ಕಾರಣಕ್ಕೆ ನಾನು ಅನುಮಾನ ವ್ಯಕ್ತಪಡಿಸಿದ್ದೇನೆ ಎಂದಿದ್ದಾರೆ. 

ಸಚಿವರಾಗಿದ್ದ ರಮೇಶ್ ಜಾರಿಹೊಳಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಸಾಮಾಜಿಕ ಹೋರಾಟಗಾರ ಸೆಕ್ಸ್ ಸಿಡಿಯೊಂದನ್ನು ಬಿಡುಗಡೆ ಮಾಡಿದ್ದರು. ಇದಾದ ಮೇಲೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಬದಲಾದ ಸನ್ನಿವೇಶದಲ್ಲಿ ದಿನೇಶ್ ದೂರು ಹಿಂದಕ್ಕೆ ಪಡೆದುಕೊಂಡರು. ಇನ್ನೊಂದು ಕಡೆ ನನ್ನ ಮೇಲೆ  ದ್ವೇಷ ಸಾಧಿಸುತ್ತಿದ್ದು ಇದು ನಕಲಿ ಸಿಡಿ ಎಂದಿರುವ ರಮೇಶ್ ತನಿಖೆಗಾಗಿ ಗೃಹ ಸಚಿವರಿಗೆ ಮನವಿ ಮಾಡಿಕೊಂಡ ನಂತರ ಸರ್ಕಾರ  ವಿಶೇಷ ತನಿಖಾ ದಳಕ್ಕೆ ಪ್ರಕರಣ ನೀಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ