ಟೀಂ ಲೀಡರ್ ರಾಜೀನಾಮೆ.. ಸಿಎಂ ಮನೆಗೆ ಮಿತ್ರಮಂಡಳಿ ದೌಡು!

Published : Mar 04, 2021, 04:28 PM ISTUpdated : Mar 04, 2021, 04:43 PM IST
ಟೀಂ ಲೀಡರ್ ರಾಜೀನಾಮೆ.. ಸಿಎಂ ಮನೆಗೆ ಮಿತ್ರಮಂಡಳಿ ದೌಡು!

ಸಾರಾಂಶ

ರಮೇಶ್ ಜಾರಕಿಹೊಳಿ‌ ರಾಜೀನಾಮೆ/ ಇಂದು ಸಿಎಂ ಬಿಎಸ್ ವೈ ಭೇಟಿ ಮಾಡಿದ ಮಿತ್ರಮಂಡಳಿಯ ಸಚಿವರು/ ಮಧ್ಯಾಹ್ನ ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ ಮಿತ್ರಮಂಡಳಿಯ ಸಚಿವರು/

ಬೆಂಗಳೂರು(ಮಾ.  04)  ಒಂದು ಕಡೆ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಸೆಕ್ಸ್ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ‌ ರಾಜೀನಾಮೆ  ನಂತರ ರಾಜಕೀಯ ಬೆಳವಣಿಗೆಗಳು ನಡೆದಿದ್ದು ಮಿತ್ರಮಂಡಳಿ ಸಚಿವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಗುರುವಾರ ಮಧ್ಯಾಹ್ನ ಸಿಎಂ ಭೇಟಿಯಾಗಿ ಮಿತ್ರಮಂಡಳಿಯ ಸಚಿವರು ಮಾತುಕತೆ ನಡೆಸಿದ್ದಾರೆ. ಮಧ್ಯಾಹ್ನ ಕಾವೇರಿ ನಿವಾಸದಲ್ಲಿ ಸುಧಾಕರ್, ಎಸ್ ಟಿ ಸೋಮಶೇಖರ್, ನಾರಾಯಣಗೌಡ, ಎಂಟಿ ಬಿ ನಾಗರಾಜ್, ಬಿಸಿ ಪಾಟೀಲ್ ಸಿಎಂ ಭೇಟಿಯಾಗಿದ್ದಾರೆ.

ಯಾರು ಈ ದಿನೇಶ್ ಕಲ್ಲಹಳ್ಳಿ? ರಮೇಶ್‌ಗೆ ಮಾತ್ರ ಅಲ್ಲ ಡಿಕೆಶಿಗೂ ಕಾಡಿದ್ದರು!...

ಮಧ್ಯಾಹ್ನ ಭೋಜನ ವಿರಾಮದ ವೇಳಿ ಸಿಎಂ ನಿವಾಸಕ್ಕೆ ತೆರಳಿ ಸಿಎಂ ಜೊತೆ ಚರ್ಚೆ ಮಾಡಿ ಬಂದಿದ್ದಾರೆ. ರಮೇಶ್ ಜಾರಕಿಹೊಳಿ‌ ಪ್ರಕರಣದ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.

ರಮೇಶ್ ಜಾರಕಿಹೊಳಿ‌ ರಾಜೀನಾಮೆ ಬಳಿಕ ಇದೇ ಮೊದಲು ಬಾರಿಗೆ ಎಲ್ಲಾ ಮಿತ್ರ ಮಂಡಳಿಯ ಸಚಿವರು ಸಿಎಂ ಭೇಟಿಯಾಗಿ ಚರ್ಚೆ ಮಾಡಿ ಬಂದಿರುವುದು ಸಾಕಷ್ಟು ಕೂತಹಲ ಮೂಡಿಸಿದೆ.  

ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಇದ್ದಕ್ಕಿದ್ದಂತೆ ಹದಿನೇಳು ಜನ ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದರು. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿಯೇ ಟೀಂ ಪ್ರಯಾಣ ಮಾಡಿತ್ತು. ಅದಾದ ಮೇಲೆ ಬದಲಾದ ರಾಜಕಾರಣದ ಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಷಗಳು ಉರುಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!