ಸಿ.ಡಿ.ಕೇಸ್: ಯುವತಿಯ ಮತ್ತೊಂದು ಆಡಿಯೋ ಬಹಿರಂಗ, ಮಹಾನಾಯಕನ ಹೆಸ್ರು ಪ್ರಸ್ತಾಪ!

Published : Mar 26, 2021, 07:46 PM ISTUpdated : Mar 26, 2021, 08:14 PM IST
ಸಿ.ಡಿ.ಕೇಸ್: ಯುವತಿಯ ಮತ್ತೊಂದು ಆಡಿಯೋ ಬಹಿರಂಗ, ಮಹಾನಾಯಕನ ಹೆಸ್ರು ಪ್ರಸ್ತಾಪ!

ಸಾರಾಂಶ

ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಹುದೊಡ್ಡ ತಿರುವು ಸಿಕ್ಕಿದೆ. ಸಿಡಿ ಪ್ರಕರಣದ ಮಹತ್ವದ ಆಡಿಯೋ ಬಹಿರಂಗವಾಗಿದೆ.

ಬೆಂಗಳೂರು, (ಮಾ.26): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ಮಹತ್ವದ ಬೆಳವಣಿಗೆಗಳು ನಡೆದಿವೆ.

ಹೌದು...ಯುವತಿಯ ಎರಡನೇ ವಿಡಿಯೋ ರಿಲೀಸ್ ಆಯ್ತು. ಬಳಿಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಯ್ತು. ಇಷ್ಟೆಲ್ಲಾ ಬೆಳವಣಿಗೆಗಗಳ ಮಧ್ಯೆ ಈ ಕೇಸ್‌ಗೆ ಮತ್ತೊಂದು ಬಹುದೊಡ್ಡ ಟ್ವಿಸ್ಟ್ ಸಿಕ್ಕಿದೆ.

ಯೆಸ್..ಸಿ.ಡಿ. ಲೇಡಿಯ ಮತ್ತೊಂದು ಆಡಿಯೋ ಬಹಿರಂಗವಾಗಿದೆ. ಈ ಆಡಿಯೋದಲ್ಲಿ ಯುವತಿ ತಮ್ಮ ಕುಟುಂಬದ ಸದಸ್ಯರ ಜೊತೆ ಮಾತನಾಡಿದ್ದಾರೆ. ಈ ವೇಳೆ ಕರ್ನಾಟಕದ ಪ್ರಭಾವಿಶಾಲಿ ರಾಜಕಾರಣಿಯ ಹೆಸರು ಪ್ರಸ್ತಾಪವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿದೆ.

'ಸಿ.ಡಿ.ಕೇಸ್‌ ಬಗ್ಗೆ ನಾಳೆಯಿಂದ ನನ್ನ ಆಟ ಶುರು ಎಂದ ಜಾರಕಿಹೊಳಿಯನ್ನು ಬಂಧಿಸಿ' 

ಕುಟುಂಬದವರೊಂದಿಗೆ ಯುವತಿ ಮಾತನಾಡುವಾಗ ಮಹಾನಾಯಕನ ಹೆಸರು ಪ್ರಸ್ತಾಪಿಸಿದ್ದಾಳೆ.  ವಿಡಿಯೋ ಚಾನೆಲ್ ನಲ್ಲಿ ಲೀಕ್ ಆಗಿ ಟಿವಿಯಲ್ಲಿ ಬರ್ತಿದೆ ಎಂದು ಆಕೆಯ ಕುಟುಂಬದವರು ಹೇಳಿದ್ದು, ನಾನ್ಯಾಕೆ ಅಂತಹ ಕೆಲಸ ಮಾಡಲಿ? ಬೇರೆ ಹುಡುಗಿ ವಿಡಿಯೋ ಅದು. 

ನಾನಲ್ಲ. ಯಾರೂ ನಂಬುತ್ತಿಲ್ಲ ಎಂದು ಯುವತಿ ಹೇಳಿರುವ 6 ನಿಮಿಷ 59 ಸೆಕೆಂಡ್ ಗಳ ಆಡಿಯೋದಲ್ಲಿ ಡಿಕೆ ಶಿವಕುಮಾರ್ ಅವರ ಹೆಸರು ಹೇಳಿದ್ದು, ಬಹುದೊಡ್ಡ ಸಾಕ್ಷ್ಯ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಇದು ತೀವ್ರ ಸ್ವರೂಪ ಪಡೆದುಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ.

ಈ ರಾಸಲೀಲೆ ಸಿ.ಡಿ. ಹಿಂದೆ ರಾಜ್ಯದ ಒಬ್ಬ ಮಹಾನ್ ನಾಯಕ ಇದ್ದಾನೆ ಎಂದು ಸ್ವತಃ ಜಾರಕಿಹೊಳಿ ಬ್ರದರ್ಸ್ ಹೇಳಿದ್ದರು. ಯಾರು ಆ ಮಹಾನ್ ನಾಯಕ ಎನ್ನುವ ಚರ್ಚೆಗಳು ಸಹ ನಡೆದಿವೆ. ಇದೀಗ ಯುವತಿ ಬಾಯಲ್ಲಿ ಡಿಕೆ ಶಿವಕುಮಾರ್ ಕೇಳಿಬಂದಿದ್ದು, ಅವರೇ ಆ ಮಹಾನ್ ನಾಯಕನಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?
ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!