ಸಿಎಂ ಬದಲಾವಣೆ ಬಗ್ಗೆ ಬಾಯಿ ಬಿಟ್ರೆ ಹುಷಾರ್‌: ರಣದೀಪ್ ಸಿಂಗ್ ಸುರ್ಜೇವಾಲಾ

Published : Jan 14, 2025, 06:13 AM ISTUpdated : Jan 14, 2025, 10:43 AM IST
ಸಿಎಂ ಬದಲಾವಣೆ ಬಗ್ಗೆ ಬಾಯಿ ಬಿಟ್ರೆ ಹುಷಾರ್‌: ರಣದೀಪ್ ಸಿಂಗ್ ಸುರ್ಜೇವಾಲಾ

ಸಾರಾಂಶ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾ ವಣೆ ಕುರಿತ ಯಾವುದೇ ವಿವಾದವಿಲ್ಲ. ಇದು ಕೆಲ ನಿರ್ದಿಷ್ಟ ಮಾಧ್ಯಮ ಸಮೂಹ ಗಳ ಸೃಷ್ಟಿ. ಪಕ್ಷ ಹಾಗೂ ಸರ್ಕಾರ ಒಗ್ಗಟ್ಟಾಗಿದೆ. ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇಂಥ ಸುಳ್ಳು ಸುದ್ದಿ ಹುಟ್ಟುಹಾಕುತ್ತಿದ್ದಾರೆ ಎಂದ ರಣದೀಪ್ ಸಿಂಗ್ ಸುರ್ಜೆವಾಲ

ಬೆಂಗಳೂರು(ಜ.14): ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ. ಈ ಬಗ್ಗೆ ಗೊಂದಲದ ಹೇಳಿಕೆಗಳು ಬೇಡ. ಅನಗತ್ಯವಾಗಿ ಯಾರೂ ಮುಖ್ಯಮಂತ್ರಿ ಬದಲಾವಣೆ ಸೇರಿ ಯಾವುದೇ ರಾಜಕೀಯ ಹೇಳಿಕೆ ನೀಡಬೇಡಿ. ನೀಡಿದರೆ, ಶಿಸ್ತುಕ್ರಮ ಖಚಿತ' - ಹೀಗಂತ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶಾಸಕರಿಗೆ ತಾಕೀತು ಮಾಡಿದ್ದಾರೆ.

ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. 'ಇತ್ತೀಚೆಗೆ ಅನಗತ್ಯ ವಿಚಾರಗಳ ಬಗ್ಗೆ ಪಕ್ಷದ ನಾಯಕರು ಹಾಗೂ ಶಾಸಕರು ಹೇಳಿಕೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಇಲ್ಲಿಗೆ ನಿಲ್ಲಿಸಿ. ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಮಾಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಬೇಡಿ. ಅಷ್ಟೇ ಅಲ್ಲ, ಪಕ್ಷ ಹಾಗೂ ಸರ್ಕಾರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಶಾಸಕಾಂಗ ಪಕ್ಷದ ಹೊರತಾಗಿಬೇರೆಲ್ಲೂಹೇಳಿಕೆನೀಡುವಂತಿಲ್ಲ. ನೀಡಿದರೆ ಕಠಿಣ ಕ್ರಮ ಖಚಿತ' ಎಂದು ಸುರ್ಜೇವಾಲ ಹೇಳಿದರು ಎನ್ನಲಾಗಿದೆ.

ಬಿಜೆಪಿ ದೇಶದ ನಾರಿಯರನ್ನು ಅವಮಾನಿಸುತ್ತಿದೆ: ಸುರ್ಜೇವಾಲಾ

'ಮುಖ್ಯಮಂತ್ರಿ ಬದಲಾವಣೆ ಎಲ್ಲವೂ ಹೈಕಮಾಂಡ್ ಹಂತದಲ್ಲಿ ಆಗುವ ಚರ್ಚೆ. ಆ ಬಗ್ಗೆ ಇಲ್ಲಿ ಹೇಳಿಕೆಗಳು ಅಗತ್ಯವಿಲ್ಲ. ಪಕ್ಷ ಇದ್ದರೆ ಸರ್ಕಾರವೇ ಹೊರತು ಸರ್ಕಾರದಿಂದ ಪಕ್ಷವಲ್ಲ. ಸರ್ಕಾರ ಮಗುವಾದರೆ ಪಕ್ಷವು ಅದರ ತಾಯಿ. ಇದು ಕಾಂಗ್ರೆಸ್ ಸರ್ಕಾರ ಎಂಬುದನ್ನು ಯಾರೂ ಮರೆಯಬಾರದು ಎಂದೂ ತಾಕೀತು ಮಾಡಿದರು' ಎಂದು ಮೂಲಗಳು ತಿಳಿಸಿವೆ. ಜ.21 ರಂದು ನಡೆಯಲಿರುವ ಬೆಳಗಾವಿ ಗಾಂಧಿ ಭಾರತ ಸಮಾವೇಶ ಯಶಸ್ವಿಗೊಳಿ ಸಲುಎಲ್ಲಾಶಾಸಕರು, ಸಚಿವರುಶ್ರಮವಹಿಸಿ ಕೆಲಸಮಾಡಬೇಕು. ಎಲ್ಲಾ ಕ್ಷೇತ್ರಗಳಿಂದಲೂ ಜನರನ್ನು ಸೇರಿಸಿ ರಾಜ್ಯದೆಲ್ಲೆಡೆಯಿಂದ ನಾ ಯಕರು, ಕಾರ್ಯಕರ್ತರು ಭಾಗವಹಿಸಲು ಸಹಕರಿಸಬೇಕು ಎಂದು ಕರೆ ನೀಡಿದರು. ໖.. ಉಪಮುಖ್ಯಮಂತ್ರಿ ಶಿವಕುಮಾರ್, ರಾಜ್ಯ ಸಭೆ ಸದಸ್ಯ ಜೈರಾಮ್ ರಮೇಶ್ ಸೇರಿ ಹಲವು ಮುಖಂಡರು ಹಾಗೂ ಪಕ್ಷದ ಬಹುತೇಕ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಸಿಎಂ ಬದಲಾವಣೆ ಎಂಬುದು ಮಾಧ್ಯಮ ಸೃಷ್ಟಿ: ಸುರ್ಜೇವಾಲಾ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾ ವಣೆ ಕುರಿತ ಯಾವುದೇ ವಿವಾದವಿಲ್ಲ. ಇದು ಕೆಲ ನಿರ್ದಿಷ್ಟ ಮಾಧ್ಯಮ ಸಮೂಹ ಗಳ ಸೃಷ್ಟಿ. ಪಕ್ಷ ಹಾಗೂ ಸರ್ಕಾರ ಒಗ್ಗಟ್ಟಾಗಿದೆ. ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇಂಥ ಸುಳ್ಳು ಸುದ್ದಿ ಹುಟ್ಟುಹಾಕುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ. 

ರಾಹುಲ್, ಖರ್ಗೆ, ಸಿದ್ದು, ಡಿಕೆಶಿ ಇರುವವರೆಗೂ ಗ್ಯಾರಂಟಿ ಕಸಿಯುವ ಮಗ ಹುಟ್ಟಲ್ಲ: ಸುರ್ಜೇವಾಲಾ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಗ್ಗಟ್ಟಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನಡುವೆ ಯಾವುದೇ ಭಿನ್ನಾ ಭಿಪ್ರಾಯವಿಲ್ಲ. ಇಬ್ಬರೂ ಒಟ್ಟಾಗಿ ಸರ್ಕಾರ ವನ್ನು ಸಮರ್ಥವಾಗಿ ಮುನ್ನೆಡೆಸುತ್ತಿದ್ದಾರೆ ಎಂದು ಸಮರ್ಥನೆ ನೀಡಿದರು. 

ಸುರ್ಜೇವಾಲಾ ಕಟುನುಡಿಗಳು 

• ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಹಂತದಲ್ಲಿ ಆಗುವ ಚರ್ಚೆ, ಇಲ್ಲಿ ಅಲ್ಲ 
• ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆಗಳು ಅಗತ್ಯವಿಲ್ಲ 
• ಏನೇ ಇದ್ದರೂ ಶಾಸಕಾಂಗ ಸಭೆ, ಪಕ್ಷದ ಸಭೆಯಲ್ಲಿ ಹೇಳಿ 
• ಪಕ್ಷ ಇದ್ದರೆ ಸರ್ಕಾರವೇ ಹೊರತು ಸರ್ಕಾರದಿಂದ ಪಕ್ಷವಲ್ಲ ಎಂದು ಮನಗಾಣಿ ಸಿಎಂ ಬದಲು ಬಗ್ಗೆ ಹೇಳಿಕೆ ನೀಡಿದರೆ ಕಠಿಣ ಕ್ರಮ ಖಚಿತ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!