ಕೈ ತೊರೆದು ಜೆಡಿಎಸ್‌ನತ್ತ ಹೊರಟ ನಾಯಕ: ಮನವೊಲಿಕೆಗೆ ಉಸ್ತುವಾರಿ ಅಖಾಡಕ್ಕೆ

Published : Feb 18, 2021, 06:33 PM IST
ಕೈ ತೊರೆದು ಜೆಡಿಎಸ್‌ನತ್ತ ಹೊರಟ ನಾಯಕ: ಮನವೊಲಿಕೆಗೆ ಉಸ್ತುವಾರಿ ಅಖಾಡಕ್ಕೆ

ಸಾರಾಂಶ

ಕಾಂಗ್ರೆಸ್ ತೊರೆಯಲು ಮುಂದಾಗಿರುವ ಹಿರಿಯ ನಾಯಕನ ಮನವೊಲಿಕೆ ಸ್ವತಃ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಖಾಡಕ್ಕಿಳಿದಿದ್ದಾರೆ. 

ಬೆಂಗಳೂರು, (ಫೆ.18):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಮದುವೆ ಅರಕ್ಷತೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅಸಮಾಧಾನಗೊಂಡ ಪಕ್ಷದ ಹಿರಿಯ ನಾಯಕನ ಮನೆ ಭೇಟಿ ನೀಡಿದ್ದಾರೆ.

ಹೌದು..ಕಾಂಗ್ರೆಸ್​ ನಾಯಕ ಸಿ.ಎಂ. ಇಬ್ರಾಹಿಂ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ನೀಡಿದ್ದು, ಜೆಡಿಎಸ್​ ಸೇರ್ಪಡೆಯ ಸಿದ್ಧತೆಯಲ್ಲಿರುವ ಇಬ್ರಾಹಿಂ ಅವರ ಮನವೊಲಿಕೆಗೆ ಮುಂದಾಗಿದ್ದಾರೆ.

ಬೆಂಗಳೂರಿನ ಬೆನ್ಸನ್ ಟೌನ್​ನಲ್ಲಿರುವ ಸಿ.ಎಂ. ಇಬ್ರಾಹಿಂ ನಿವಾಸಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ನೀಡಿದ್ದು, ಈ ವೇಳೆ ಎಂಎಸ್​​ಸಿ ನಜೀರ್ ಅಹ್ಮದ್ ಸುರ್ಜೇವಾಲಾ ಅವರಿಗೆ ಸಾಥ್ ನೀಡಿದ್ದಾರೆ.

ಜೆಡಿಎಸ್‌ ಸೇರಲು ಕಾಂಗ್ರೆಸ್ ಹಿರಿಯ ನಾಯಕ ಉತ್ಸುಕ: ದೇವೇಗೌಡ್ರನ್ನ ಭೇಟಿಯಾಗಿ ಮಾತುಕತೆ

ಈಗಾಗಲೇ  ಇಬ್ರಾಹಿಂದ ಅವರು ಜೆಡಿಎಸ್ ಸೇರ್ಪಡೆಗೆ ಹಲವು ಬಾರಿ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅಲ್ಲದೇ ಜೆಡಿಎಸ್ ಸೇರ್ಪಡೆ ಕುರಿತು ಕ್ಷೇತ್ರ ಪ್ರವಾಸ ಕೈಗೊಂಡು ತೀರ್ಮಾನ ಮಾಡುವುದಾಗಿ ಇಬ್ರಾಹಿಂ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

 ಇದೀಗ ಸುರ್ಜೇವಾಲ ಮಾತಿಗೆ ಮಣಿದು ಇಬ್ರಾಹಿಂ ಕಾಂಗ್ರೆಸ್​ನಲ್ಲೇ ಉಳಿದುಕೊಳ್ಳುತ್ತಾರಾ ಎನ್ನುವುದನ್ನು  ಕಾದುನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ