ಜನಸೇವೆಯೇ ನನ್ನ ಧ್ಯೇಯ, ಜನರ ಆಶೀರ್ವಾದವೇ ನನ್ನ ಬಲ: ಸಚಿವ ಆರ್.ಬಿ.ತಿಮ್ಮಾಪೂರ

Published : Sep 16, 2025, 07:19 AM IST
RB Timmapur

ಸಾರಾಂಶ

ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ತಾವೆಲ್ಲರೂ ನನ್ನನ್ನು ತಮ್ಮ ಮಗನಂತೆ, ಸಹೋದರನಂತೆ ನೋಡುತ್ತಾ ಬಂದಿದ್ದಿರಿ. ಅದಕ್ಕಾಗಿ ತಮಗೆಲ್ಲರಿಗೂ ಚಿರಋಣಿಯಾಗಿರುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಮುಧೋಳ (ಸೆ.16): ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಮತ್ತು ಆರ್ಶೀವಾದದಿಂದ ನಾನು ಮತ್ತೊಮ್ಮೆ ಕ್ಷೇತ್ರದ ಶಾಸಕನಾಗಿ, ರಾಜ್ಯದ ಸಚಿವನಾಗಿದ್ದೇನೆ. ಈ ಋಣವನ್ನು ನಾನೆಂದಿಗೂ ಮರೆಯುವುದಿಲ್ಲ. ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ತಾವೆಲ್ಲರೂ ನನ್ನನ್ನು ತಮ್ಮ ಮಗನಂತೆ, ಸಹೋದರನಂತೆ ನೋಡುತ್ತಾ ಬಂದಿದ್ದಿರಿ. ಅದಕ್ಕಾಗಿ ತಮಗೆಲ್ಲರಿಗೂ ಚಿರಋಣಿಯಾಗಿರುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು. ನಗರದ ದಾನಮ್ಮದೇವಿ ಕಲ್ಯಾಣ ಮಂಟಪದ ಆವರಣದಲ್ಲಿ ಮುಧೋಳ ಮತ್ತು ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ 64ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ತಾವು ನನ್ನನ್ನು ಬಹುಮತದಿಂದ ಗೆಲ್ಲಿಸಿದ್ದಿರಿ. ನಾನು ಚುನಾವಣೆ ವೇಳೆ ಕೊಟ್ಟ ಮಾತಿನಂತೆ ನಡೆದು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಹಂತ ಹಂತವಾಗಿ ಮಾಡುತ್ತಿದ್ದೇನೆಂದು ಹೇಳಿದರು. ನಿರಾವರಿ, ವಿದ್ಯುತ್, ಆರೋಗ್ಯ, ಶಿಕ್ಷಣ, ರಸ್ತೆ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗಾಗಿ ನಿರಂತರ ಕೆಲಸ ಕಾರ್ಯ ಮಾಡುತ್ತಿರುವುದು ನನಗೆ ತೃಪ್ತಿ ತಂದಿದೆ. ನನ್ನ ಹುಟ್ಟುಹಬ್ಬವನ್ನು ವಿನೂತನ ಮಾದರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸುವಂತೆ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದೆ. ಯಾವುದೇ ರೀತಿಯ ಆಡಂಬರ ಮತ್ತು ಶಾಲು, ಮಾಲೆ, ತುರಾಯಿ ಸ್ವಿಕರಿಸುವದಿಲ್ಲವೆಂದು ತಿಳಿಸಿದ್ದೆ ಈಗ ಅದರಂತೆ ನಡೆದುಕೊಂಡಿದ್ದೇನೆ ಎಂದು ತಿಳಿಸಿದರು.

ಆರ್.ಬಿ.ತಿಮ್ಮಾಪೂರ ಫೌಂಡೇಶನ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿವಿಧ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಂಡಿರುವುದು, ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಬ್ಯೂಟಿಷಿಯನ್ ತರಬೇತಿ, ಉಚಿತ ವಾಹನ ಚಾಲಕರಿಗೆ ಅಪಘಾತ ವಿಮೆ, ರಕ್ತದಾನ ಶಿಬಿರ, ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಉದ್ಯೋಗ ಮೇಳ, ಐಎಎಸ್, ಕೆಎಎಸ್ ಓದುಗರಿಗೆ ರನ್ನ ಗ್ರಂಥಾಲಯದಲ್ಲಿ ಉಚಿತ ವೈ ಫೈ ಸೌಲಭ್ಯ, ವಿಕಲಚೇತನರ (ಅಂಗವಿಕಲ) ಮಕ್ಕಳಿಗೆ ಸಲಕರಣೆ ವಿತರಣೆ, ಪೌರಕಾರ್ಮಿಕರಿಗೆ ಭಟ್ಟೆ ಹಾಗೂ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ​ತೋಟಗಾರಿಕೆ ಇಲಾಖೆಯಿಂದ ಫಲಪುಷ್ಪ ಪ್ರದರ್ಶನ, ​ವಿಶೇಷ ಚೇತನ ಮಕ್ಕಳಿಗೆ ಟ್ರ್ಯಾಕ್ ಸೂಟ್, ಮದರಸಾ ಮಕ್ಕಳಿಗೆ ನೋಟ್‌ ಬುಕ್ ಮತ್ತು ಪೆನ್ನುಗಳ ವಿತರಣೆ, ​ಕೃಷಿ ಇಲಾಖೆಯಿಂದ ರೈತರಿಗೆ ಹೈಟೆಕ್ ಕೃಷಿ ಯಂತ್ರೋಪಕರಣ, ಕಾರ್ಮಿಕ ಇಲಾಖೆಯಿಂದ ವಿಮಾ ಯೋಜನೆ ಸೇರಿದಂತೆ ಇನ್ನಿತರ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತೀವ ಸಂತಸ ತಂದಿದೆ ಎಂದು ಹೇಳಿದರು.

ಮಠಾಧೀಶರಿಗೆ ಪಾದಪೂಜೆ

ಶಾಸಕ ಜೆ.ಟಿ.ಪಾಟೀಲ ಮಾತನಾಡಿ ಸಚಿವ ಆರ್.ಬಿ.ತಿಮ್ಮಾಪೂರ ಅವರ ಸರಳ ಜೀವನ ಮತ್ತು ವ್ಯಕ್ತಿತ್ವ ಕುರಿತು ಮನಮುಟ್ಟುವಂತೆ ಮಾತನಾಡಿದರು. ತಿಮ್ಮಾಪೂರ ಕುಟುಂಬದವರು ವೇದಿಕೆ ಮೇಲಿದ್ದ ಮಠಾಧೀಶರಿಗೆ ಪಾದಪೂಜೆ ನೆರವೇರಿಸಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಿಗೆ ಸನ್ಮಾನಿಸಲಾಯಿತು. ಸಚಿವ ಆರ್.ಬಿ. ತಿಮ್ಮಾಪೂರ, ಪತ್ನಿ ಶಶಿಕಲಾ, ಪುತ್ರ ವಿನಯ, ಸಹೋದರರಾದ ಶಂಕರ, ಹನುಮಂತ, ಸಹೋದರಿ ಕವಿತಾ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ನಗರ ಘಟಕ ಅಧ್ಯಕ್ಷ ರಾಘು ಮೋಕಾಶಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರು ಮತ್ತು ಮಠಾಧೀಶರು ವೇದಿಕೆ ಮೇಲಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುಂಚೆ ಮಸೀದಿ, ಮಂದಿರಗಳಿಗೆ ಭೇಟಿ ನೀಡಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಮುಖಂಡರಾದ ಗೋವಿಂದಪ್ಪ ಗುಜ್ಜನ್ನವರ, ವೆಂಕಣ್ಣ ಗಿಡಪ್ಪನವರ, ಗಿರೀಶಗೌಡ ಪಾಟೀಲ, ಉದಯಕುಮಾರ ಸಾರವಾಡ, ಅಪ್ಪಣ್ಣ ರೂಗಿ, ರಾಜು ಬಾಗವಾನ, ಮಹಾಂತೇಶ ಮಾಚಕನೂರ, ಸಂಜಯ ತಳೇವಾಡ, ಡಾ.ತಿಮ್ಮಣ್ಣ ಅರಳಿಕಟ್ಟಿ, ಸುಧಾಕರ ಸಾರವಾಡ, ಗಿರೀಶ ಲಕ್ಷಾಣಿ, ಹೆಚ್.ಎ.ಕಡಪಟ್ಟಿ, ದಾನೇಶ ತಡಸಲೂರ, ಎಸ್.ಪಿ.ದಾನಪ್ಪಗೋಳ, ನಾರಾಯಣ ಹವಾಲ್ದಾರ, ಮಹಾದೇವ ಹೊಸಟ್ಟಿ, ಕಲ್ಮೇಶ ಸಾರವಾಡ, ಮಾರುತಿ ಮಾನೆ, ಕೃಷ್ಣಾ ನಲವಡೆ, ಹಣಮಂತ ತೇಲಿ, ಸಂತೋಷ ಪಾಲೋಜಿ, ಸಿದ್ರಾಮ ಕುರಿ, ಮಹೇಶ ಬಿಳ್ಳೂರ, ಹಣಮಂತ ಗುರವ, ನಗರಸಭೆ ಸದಸ್ಯರು, ಅಧಿಕಾರಿಗಳು ಸೇರಿದಂತೆ ನೂರಾರು ಅಭಿಮಾನಿಗಳು, ಕಾರ್ಯಕರ್ತರು ಹೂ ಗುಚ್ಚ ನೀಡಿ ಅಭಿನಂದಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ