ಜನರಿಗೆ ಭಾರತದ ನೈಜ ಇತಿಹಾಸ ತಿಳಿಸಬೇಕಿದೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Published : Mar 03, 2024, 09:03 PM IST
ಜನರಿಗೆ ಭಾರತದ ನೈಜ ಇತಿಹಾಸ ತಿಳಿಸಬೇಕಿದೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ 3ನೇ ಅವಧಿಯಲ್ಲಿ ಭಾರತದ ನೈಜ ಇತಿಹಾಸವನ್ನು ಜನರಿಗೆ ತಿಳಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು. 

ಹುಬ್ಬಳ್ಳಿ (ಮಾ.03): ಪ್ರಧಾನಿ ನರೇಂದ್ರ ಮೋದಿ ಅವರ 3ನೇ ಅವಧಿಯಲ್ಲಿ ಭಾರತದ ನೈಜ ಇತಿಹಾಸವನ್ನು ಜನರಿಗೆ ತಿಳಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು. ಇಲ್ಲಿನ ಗೋಕುಲ ರಸ್ತೆಯಲ್ಲಿರುವ ಗೋಕುಲ್‌ ಗಾರ್ಡನ್‌ನಲ್ಲಿ ಮಹಾರಾಣಿ ಅಹಲ್ಯಾಬಾಯಿ ಹೊಳ್ಕರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಕುರುಬ ಸಮಾಜದ ಸಮಾವೇಶವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು, ದೇಶಕ್ಕಾಗಿ ಹೋರಾಡಿದ ಮಹನಿಯರ ನೈಜ ಇತಿಹಾಸವನ್ನು ದೇಶದ ಜನತೆಗೆ ತಿಳಿಸುವ ಕಾರ್ಯವಾಗಬೇಕಿದೆ ಎಂದರು.

ನರೇಂದ್ರ ಮೋದಿ ಅವರು ಸ್ವತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಇಂದು ಅವರೇ ಪ್ರಧಾನಿಯಾಗುವ ಮೂಲಕ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ಸರ್ಕಾರ ಎಂದಿಗೂ ಹಿಂದುಳಿದವರ ಏಳ್ಗೆಗೆ ಶ್ರಮಿಸಿಲ್ಲ. ತಮ್ಮ ಅಧಿಕಾರದ ಅವಧಿಯಲ್ಲಿ ಹಿಂದುಳಿದ ವರ್ಗದವರನ್ನು ಪ್ರಧಾನಿಯನ್ನಾಗಿಸಲಿಲ್ಲ ಎಂದು ಟೀಕಿಸಿದರು.

ಗ್ಯಾರಂಟಿ ವಿಚಾರದಲ್ಲಿ ಬಿಜೆಪಿಗೆ ಹೊಟ್ಟೆಯುರಿ: ವಿಪಕ್ಷದ ವಿರುದ್ದ ಕಿಡಿಕಾರಿದ ಸಿಎಂ ಸಿದ್ದು, ಡಿಸಿಎಂ ಡಿಕೆಶಿ

ಪರಿಶ್ರಮ ಜೀವಿಗಳು: ಕುರುಬರು ಎಂದಿಗೂ ಪರಿಶ್ರಮ ಜೀವಿಗಳು. ಕಾಯಕವೇ ಕೈಲಾಸ ಎಂದು ಸಾರಿದ ಬಸವಣ್ಣವರ ಆದರ್ಶದಂತೆ ತಾವು ಮಾಡುವ ಕಾಯಕದಲ್ಲಿಯೇ ಕೈಲಾಸ ಕಂಡವರು. ನಿಸರ್ಗದೊಂದಿಗೆ ಬೆರೆತು ಜೀವನ ನಡೆಸುವವರು. ಕುರಿಯ ಹಿಕ್ಕಿಯನ್ನೇ ಲಿಂಗವೆಂದು ಪೂಜಿಸಿ ದೇವರನ್ನು ಕಂಡ ಮುಗ್ದರು ಎಂದು ಬಣ್ಣಿಸಿದರು. ಡಾ. ಬಿ.ಆರ್‌. ಅಂಬೇಡ್ಕರ್‌, ಬಸವಣ್ಣ, ಭಕ್ತ ಕನಕದಾಸರು, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಒಂದೇ ಜಾತಿ, ಸಮುದಾಯಕ್ಕೆ ಸೀಮಿತರಾದವರಲ್ಲ. 

ಚಂದ್ರಗುಪ್ತರು, ಮಹಾರಾಣಿ ಅಹಲ್ಯಾದೇವಿ, ಸಂಗೊಳ್ಳಿ ರಾಯಣ್ಣನವರು ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್‌ ವ್ಯಕ್ತಿಗಳು. ಇಂತಹ ಮಹನಿಯರ ಆದರ್ಶ ಜನರಿಗೆ ತಿಳಿಸುವ ಕಾರ್ಯವಾಗಬೇಕಿದೆ. ರಾಜ್ಯದಲ್ಲಿ 3ನೇ ಅತಿದೊಡ್ಡ ಸಮಾಜ ಹೊಂದಿದ ಕುರುಬರ ಏಳ್ಗೆಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಸಮಾಜ ಬಾಂಧವರು ನೀಡಿದ ಮನವಿಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರಮುಖ ಬೇಡಿಕೆಯಾಗಿರುವ ಕನಕ ಭವನ ನಿರ್ಮಾಣಕ್ಕೆ ಬೇಕಾದ ಜಾಗ ಗುರುತಿಸಿ ತಿಳಿಸಿದಲ್ಲಿ ₹2 ಕೋಟಿ ವೆಚ್ಚದಲ್ಲಿ ಕನಕ ಸಮುದಾಯ ಭವನ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಅಗತ್ಯ ಬಿದ್ದರೆ ಮಾತ್ರ ಎನ್‌ಐಎ ತನಿಖೆಗೆ: ಸಿಎಂ ಸಿದ್ದರಾಮಯ್ಯ

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು. ಶಾಸಕ ಎಂ.ಆರ್‌. ಪಾಟೀಲ, ಮಾ. ನಾಗರಾಜ, ಸೀಮಾ ಮಸೂತಿ ಡಾ. ಮಹೇಶ ನಾಲವಾಡ, ತಿಪ್ಪಣ್ಣ ಮಜ್ಜಗಿ, ರವಿ ದಂಡಿನ, ರಾಜೇಶ್ವರಿ ಸಾಲಗಟ್ಟಿ, ಬೀರಪ್ಪ ಖಂಡೇಕಾರ, ಬಸವರಾಜ ಕರಡಿಕೊಪ್ಪ, ಮೇನಕಾ ಹುರಳಿ, ಈರಣ್ಣ ಗುಳಗುಳಿ, ರಾಜಸ್ಥಾನದ ದೇವಾಸಿ ಸಮಾಜದ ಮುಖಂಡ ನಿಥಿನ್‌ ಸೇರಿದಂತೆ ಹಲವರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌