ಸಿಎಂ ಸ್ಥಾನದ ತಿಕ್ಕಾಟದ ಮಧ್ಯೆ ಡಿಸಿಎಂ ಸ್ಥಾನಕ್ಕೆ ಪಟ್ಟು: ಕಾಂಗ್ರೆಸ್‌ಗೆ ರೆಡ್ಡಿ ಸಮುದಾಯ ಎಚ್ಚರಿಕೆ

Published : May 16, 2023, 01:11 PM IST
ಸಿಎಂ ಸ್ಥಾನದ ತಿಕ್ಕಾಟದ ಮಧ್ಯೆ ಡಿಸಿಎಂ ಸ್ಥಾನಕ್ಕೆ ಪಟ್ಟು: ಕಾಂಗ್ರೆಸ್‌ಗೆ ರೆಡ್ಡಿ ಸಮುದಾಯ ಎಚ್ಚರಿಕೆ

ಸಾರಾಂಶ

ಯಡಿಯೂರಪ್ಪ ಇದ್ದಾಗ ಮೂರು ಜನ ರೆಡ್ಡಿ ಸಮುದಾಯದ ಸಚಿವರನ್ನು ಮಾಡ್ತಾ ಇದ್ರು. ಆದ್ರೆ ಕಳೆದ ಬಾರಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ಕೊಟ್ಟರು. ಅದರ ಫಲವನ್ನು ಈಗ ಬಿಜೆಪಿ ಅನುಭವಿಸಿದೆ. ಈ ಸಾರಿ ರಾಮಲಿಂಗಾರೆಡ್ಡಿ ಅವರನ್ನು ಡಿಸಿಎಂ ಮಾಡಲೇಬೇಕು: ರಾಮಚಂದ್ರ ರೆಡ್ಡಿ 

ಬೆಂಗಳೂರು(ಮೇ.16):  ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ತಿಕ್ಕಾಟದ ನಡುವೆ ಬಿಟಿಎಂ ಲೇಔಟ್ ಶಾಸಕ ರಾಮಲಿಂಗ ರೆಡ್ಡಿಗೆ ಡಿಸಿಎಂ ಸ್ಥಾನ ಕೊಡಲೇಬೇಕು ಅಂತ ರಾಮಲಿಂಗ ರೆಡ್ಡಿ ಪರ ರೆಡ್ಡಿ ಸಮುದಾಯ ಪಟ್ಟು ಹಿಡಿದಿದೆ.

ಈ ಬಗ್ಗೆ ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ರೆಡ್ಡಿ ಸಮುದಾಯದ ಅಧ್ಯಕ್ಷ ರಾಮಚಂದ್ರ ರೆಡ್ಡಿ ಅವರು, ಈಗ ಸಚಿವ ಸಂಪುಟ ರಚನೆ ಆಗ್ತಾ ಇದೆ. ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಆಗಿದ್ರು, ನಂತರ ರಾಮಲಿಂಗಾ ರೆಡ್ಡಿ ಅವರನ್ನು ಬೆಳೆಸಿಕೊಂಡು ಬಂದ್ವಿ. ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಆಗುವ ಎಲ್ಲ ಅರ್ಹತೆ ಇದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗಿಂತಲೂ ಹೆಚ್ಚು ಬಾರಿ ರಾಮಲಿಂಗಾರೆಡ್ಡಿ ಶಾಸಕರಾಗಿದ್ದಾರೆ ಅಂತ ತಿಳಿಸಿದ್ದಾರೆ. 

ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

ಯಡಿಯೂರಪ್ಪ ಇದ್ದಾಗ ಮೂರು ಜನ ರೆಡ್ಡಿ ಸಮುದಾಯದ ಸಚಿವರನ್ನು ಮಾಡ್ತಾ ಇದ್ರು. ಆದ್ರೆ ಕಳೆದ ಬಾರಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ಕೊಟ್ಟರು. ಅದರ ಫಲವನ್ನು ಈಗ ಬಿಜೆಪಿ ಅನುಭವಿಸಿದೆ. ಈ ಸಾರಿ ರಾಮಲಿಂಗಾರೆಡ್ಡಿ ಅವರನ್ನು ಡಿಸಿಎಂ ಮಾಡಲೇಬೇಕು ಅಂತ ರಾಮಚಂದ್ರ ರೆಡ್ಡಿ ಆಗ್ರಹಿಸಿದ್ದಾರೆ. 

ಸಂಪುಟದಲ್ಲಿ ಇಬ್ಬರಿಗೆ ಸಚಿವ ಸ್ಥಾನ ಕೊಡಲೇಬೇಕು. ಈ ಬಗ್ಗೆ ಈಗಾಗಲೇ ಎಐಸಿಸಿಗೆ ಪತ್ರ ಬರೆದಿದ್ದೇವೆ. ಒಂದೊಮ್ಮೆ ನಮ್ಮ ಬೇಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪದಿದ್ದರೆ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಲಿದೆ ಅಂತ ಕಾಂಗ್ರೆಸ್ ಹೈಕಮಾಂಡ್‌ಗೆ ರೆಡ್ಡಿ ಸಮುದಾಯ ಎಚ್ಚರಿಕೆ ನೀಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!