ನಾನು ಸಹಿ ಸಂಗ್ರಹ ಮಾಡಿದ್ದು ಸತ್ಯ : ಒಪ್ಪಿಕೊಂಡ ರೇಣುಕಾಚಾರ‍್ಯ

Kannadaprabha News   | Asianet News
Published : Jun 17, 2021, 07:24 AM ISTUpdated : Jun 17, 2021, 07:27 AM IST
ನಾನು ಸಹಿ ಸಂಗ್ರಹ ಮಾಡಿದ್ದು ಸತ್ಯ : ಒಪ್ಪಿಕೊಂಡ ರೇಣುಕಾಚಾರ‍್ಯ

ಸಾರಾಂಶ

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹಿಸಿದ್ದು ಸತ್ಯ ಪಕ್ಷದ ವರಿಷ್ಠರು ಹೇಳಿದ್ದಕ್ಕೆ ಸುಮ್ಮನಿದ್ದೇವಷ್ಟೆ  ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ  ಹೇಳಿಕೆ

ದಾವಣಗೆರೆ (ಜೂ.17): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹಿಸಿದ್ದು ಸತ್ಯ. ಮುಖ್ಯಮಂತ್ರಿ, ಪಕ್ಷದ ವರಿಷ್ಠರು ಹೇಳಿದ್ದಕ್ಕೆ ಸುಮ್ಮನಿದ್ದೇವಷ್ಟೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಈಗಾಗಲೇ ಕೆಲವರು ಸೂಟು, ಬೂಟು ಹೊಲಿಸಿಕೊಂಡು, ಮುಖ್ಯಮಂತ್ರಿ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ. ಅಂಥವರು ತಮ್ಮ ಕ್ಷೇತ್ರಗಳ ಜಾತ್ರೆಗಳಲ್ಲಿ ಸೂಟು, ಬೂಟು ಹಾಕಿಕೊಳ್ಳಲಿ. ಧಾರವಾಡ ಹಾಗೂ ವಿಜಯಪುರ ಶಾಸಕರು ಹೀಗೆ ತಿರುಕನ ಕನಸು ಕಾಣುತ್ತಿದ್ದಾರೆ ಎಂದಿದ್ದಾರೆ. ಈಗಾಗಲೇ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನನಗೆ ಸಮಯ ನೀಡಿದ್ದಾರೆ. ಎಲ್ಲಾ ಶಾಸಕರು ಒಟ್ಟಾಗಿ ರಾಜ್ಯ ಉಸ್ತುವಾರಿಗೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಸಂಚಲನ: ಉಸ್ತುವಾರಿಗಳ ಜೊತೆ ಮಾತನಾಡಲು 10 ಶಾಸಕರಿಗೆ ಅನುಮತಿ ..

ಯಡಿಯೂರಪ್ಪ ನಾಯಕತ್ವ ಬದಲಾವಣೆ ಸಾಧ್ಯವೇ ಇಲ್ಲ ಎಂದರು. ಜತೆಗೆ, ಕೆಲ ಸಚಿವರ ಕಾರ್ಯ ವೈಖರಿ ಬಗ್ಗೆ ಯಾವುದೇ ದೂರುಗಳನ್ನು ಅರುಣ್‌ ಸಿಂಗ್‌ರಿಗೆ ನೀಡುವ ಉದ್ದೇಶ ಇಲ್ಲ ಎಂದು ತಿಳಿಸಿದರು.

ಯತ್ನಾಳ್‌ರಿಂದ ಆಮಿಷ- ವಿಜಯಪುರ ಶಾಸಕ ಎಲ್ಲರಿಗೂ ಕರೆ ಮಾಡಿ, ತಾನೇ ಮುಂದಿನ ಸಿಎಂ ಎಂದು ಹೇಳಿಕೊಳ್ಳುತ್ತಿದ್ದಾರೆ. ಈಗ ನಮ್ಮ ಜೊತೆಗಿದ್ದರೆ ಸಚಿವನಾಗಿ ಮಾಡುವ ಆಮಿಷವೊಡ್ಡುತ್ತಿದ್ದಾರೆಂದು ಯತ್ನಾಳ್‌ ವಿರುದ್ಧ ರೇಣುಕಾಚಾರ‍್ಯ ಗಂಭೀರ ಆರೋಪ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!