
ಬೆಂಗಳೂರು (ನ.05): ಸಿಎಂ ಬಿಎಸ್ ವೈ ಪುತ್ರ ವಿಜಯೇಂದ್ರ ಬಸವಕಲ್ಯಾಣದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರು, ಮುಖಂಡರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಸ್ಪರ್ಧೆ ಮಾಡೋ ಬಗ್ಗೆ ಎಲ್ಲೂ ಹೇಳಿಲ್ಲ. ಯುವ ನಾಯಕರಾಗಿ ವಿಜಯೇಂದ್ರ ಬೆಳೆಯುತ್ತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ರೇಣುಕಾಚಾರ್ಯ ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧೆ ಮಾಡಬಹುದು, ಹೇಳಲು ಆಗುವುದಿಲ್ಲ. ಸ್ಪರ್ಧೆ ಮಾಡಿದರೆ ಗೆಲ್ಲುವುದು ಮಾತ್ರ ಖಚಿತ. ಅವರು ಸ್ಪರ್ಧೆ ಮಾಡಲಿ ಅಂತ ಹೇಳೋ ಅಧಿಕಾರ ನನಗೆ ಇಲ್ಲ ಎಂದರು.
ಬಿಜೆಪಿಯೇ 2 ಸೀಟು ಗೆಲ್ಲಲಿದೆ : ಗುಪ್ತಚರ ಇಲಾಖೆಯಿಂದ ಮಾಹಿತಿ ...
ಬಸವಕಲ್ಯಾಣದಿಂದ ಸ್ಪರ್ಧೆಸಿದ್ರೆ ನೂರಕ್ಕೆ ನೂರು ಗೆಲ್ಲುತ್ತಾರೆ. ಆದರೆ ವಿಜಯೇಂದ್ರ ಹಾಗೂ ಸಿಎಂಗೆ ಆ ಮನಸ್ಸಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.