
ಬೆಂಗಳೂರು(ಅ.22): ಬಿಜೆಪಿ ನಾಯಕತ್ವದ ಬದಲಾವಣೆ ಕುರಿತು ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹರಿಹಾಯ್ದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ‘ಸಚಿವ ಸ್ಥಾನ ನೀಡದ ಕಾರಣಕ್ಕಾಗಿ ಆ ರೀತಿಯಾಗಿ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ತಕ್ಷಣ ಬಹಿರಂಗ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಯತ್ನಾಳ್ ತಿರುಕನ ಕನಸು ಕಾಣಬೇಡಿ. ನೀವು ಮುಖ್ಯಮಂತ್ರಿಯಾಗುವುದಿಲ್ಲ. ನಾನು ಸವಾಲು ಹಾಕುತ್ತೇನೆ’ ಎಂದು ಹೇಳಿದರು.
"
ಯತ್ನಾಳ್ ಉಚ್ಚಾಟನೆ ಮಾಡಲು ಶಿಫಾರಸ್ಸು ಮಾಡಿದ್ದೇನೆ: ಸಚಿವ ಈಶ್ವರಪ್ಪ
‘ಸಚಿವ ಸ್ಥಾನ ಸಿಗದ ಕಾರಣಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ. ನಾಯಕತ್ವ ಕುರಿತು ನೀಡಿರುವ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂಥವುಗಳು. ಜನರ ಮತ್ತು ಸಮಾಜದ ದೃಷ್ಟಿಯಲ್ಲಿ ವಿಲನ್ ಆಗಿದ್ದಾರೆ. ಯತ್ನಾಳ್ ಅವರು ಹಿರಿಯರಾಗಿದ್ದು, ಈ ರೀತಿ ಹೇಳಿಕೆ ನೀಡಬಾರದು. ಚುನಾವಣೆ ವೇಳೆ ಇಂತಹ ಹೇಳಿಕೆಗಳಿಂದ ಕಾರ್ಯಕರ್ತರಿಗೆ ಗೊಂದಲವಾಗಲಿದೆ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇದನ್ನು ಸಹಿಸದೆ ಮಾತನಾಡುತ್ತಿದ್ದಾರೆ. ಮನಬಂದಂತೆ ಮಾತನಾಡಿದರೆ ಜನರು ಬುದ್ಧಿ ಭ್ರಮಣೆಯಾಗಿದೆ ಎಂದು ಭಾವಿಸುತ್ತಾರೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.