ರೈತರಿಗೆ ಡಿಸೇಲ್ ಆಫರ್ ಕೊಡ್ತಾ ಇರೋರು ಯಾರು? HDK ಹೇಳಿದ ಹೆಸರು!

Published : Jan 25, 2021, 05:36 PM IST
ರೈತರಿಗೆ ಡಿಸೇಲ್ ಆಫರ್ ಕೊಡ್ತಾ ಇರೋರು ಯಾರು? HDK  ಹೇಳಿದ ಹೆಸರು!

ಸಾರಾಂಶ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ/ ನನ್ನ ರೈತರು ಟ್ರಾಕ್ಟರ್ ಗಳಲ್ಲಿ ನಾಳೆ ಬೆಂಗಳೂರಿಗೆ ಬರುತ್ತಾರೆ ಎಂಬುದನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ/ ನಮ್ಮ ರೈತರಿಗೆ ಭೂಮಿ ಉಳುಮೆ ಮಾಡಲಿಕ್ಕೆ ಹಣ ಇಲ್ಲ/ ಕೇಂದ್ರ ಸರಕಾರ ಡೀಸೆಲ್‌ ಬೆಲೆಯನ್ನ 80ರೂ ಮಾಡಿದೆ/ ಪ್ರತಿಭಟನೆ ಹೆಸರಿನಲ್ಲಿ ರೈತರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ

ಚನ್ನಪಟ್ಟಣ(ಜ. 25) ನನ್ನ ರೈತರುಗಳು ಟ್ರಾಕ್ಟರ್ ಗಳಲ್ಲಿ ನಾಳೆ ಬೆಂಗಳೂರಿಗೆ ಬರುತ್ತಾರೆ ಎಂಬುದನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ. ನಮ್ಮ ರೈತರು ತಮ್ಮ ಭೂಮಿ ಉಳುಮೆ ಮಾಡಲು ಡೀಸೆಲ್‌ ಹಣ ಇಲ್ಲ. ಕೇಂದ್ರ ಸರಕಾರ ಡೀಸೆಲ್‌ ಬೆಲೆಯನ್ನ 80 ರೂ. ಮಾಡಿದೆ. ನಮ್ಮ ರೈತರು ರಾಜ್ಯದ ನಾನಾ ಜಿಲ್ಲೆಗಳಿಂದ ಬೆಂಗಳೂರಿಗೆ ಬರಲು ಟ್ರಾಕ್ಟರ್‌ ಗಳಿಗೆ ಡಿಸೇಲ್ ಹಾಕುವುಷ್ಟು ಆರ್ಥಿಕ ಸಬಲರನ್ನಾಗಿ ಅವರನ್ನು ಸರ್ಕಾರ ಇಟ್ಟಿದೇಯಾ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ದಶ ದಿಕ್ಕುಗಳಿಂದ ಬೆಂಗಳೂರಿಗೆ ರೈತರಿಗೆ ಲಗ್ಗೆ

ಕೆಲವರು ರಾಜಕೀಯ ಬಳಕೆಗೆ ಇಂತಹ ಪ್ರತಿಭಟನೆಗಳನ್ನ ನಡೆಸಿ ರೈತರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಕೆಲವು ಪಟ್ಟಬದ್ದ ಹಿತಾಸಕ್ತಿಗಳು ರೈತರನ್ನ ಬಳಸಿಕೊಳ್ಳುತ್ತಿದ್ದಾರೆ. ರಾಮನಗರದಲ್ಲಿ ಒಬ್ಬ ಕಾಂಗ್ರೆಸ್ ಪಕ್ಷದ ದಾನ ಶೂರ ಕರ್ಣ ಇದ್ದಾನೆ. ಆತ ರಾಮನಗರದ ರೈತರು ಟ್ರಾಕ್ಟರ್ ತನ್ನಿ ಡೀಸೆಲ್‌ ಹಾಕಿಸುತ್ತೇನೆ ಅಂತಾ ಆಫರ್ ಕೊಟ್ಟಿದ್ದಾನೆ ಎಂಬ ಮಾಹಿತಿ ಇದೆ  ಎಂದು ಡಿಕೆಶಿ ಆಪ್ತ ಇಕ್ಬಾಲ್ ಹುಸೇನ್ ಗೆ ಟಾಂಗ್ ನೀಡಿದರು.

ಇದೇ ರೀತಿ ರಾಜ್ಯದ ಎಲ್ಲಾ ಕಡೆ ನಡೆಯುತ್ತಿದೆ.  ರೈತರನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುವವರು ಹೆಚ್ಚಾಗುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹ ಸಚಿವ ಅಮಿತ್‌ ಶಾ - ರಾಹುಲ್ ಗಾಂಧಿ ಮತಚೋರಿ ಸಮರ
ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ