ತರಾತುರಿಯಲ್ಲಿ ಆಸ್ಪತ್ರೆಯಿಂದ ಶಾಸಕ ಆನಂದ್ ಸಿಂಗ್ ಡಿಸ್ಚಾರ್ಜ್

By Web DeskFirst Published Feb 4, 2019, 10:20 PM IST
Highlights

ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಬಡಿದಾಟ ಪ್ರಕರಣ! ಅಪೊಲೋ ಆಸ್ಪತ್ರೆಯಿಂದ ಶಾಸಕ ಆನಂದ್ ಸಿಂಗ್ ಡಿಸ್ಚಾರ್ಜ್! ಇಂದು ರಾತ್ರಿ 8:30ಕ್ಕೆ ತರಾತುರಿಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ 

ಬೆಂಗಳೂರು, [ಫೆ.04]: ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಆನಂದ್​ ಸಿಂಗ್​ ಇಂದು [ಸೋಮವಾರ] ಡಿಸ್ಚಾರ್ಚ್​ ಆಗಿದ್ದಾರೆ. 

ಈಗಲ್ಟನ್ ರೆಸಾರ್ಟ್​ನಲ್ಲಿ ಕಂಪ್ಲಿ ಶಾಸಕ ಗಣೇಶ್​ ಹಾಗೂ ವಿಜಯನಗರ ಶಾಸಕ ಆನಂದ್​ ಸಿಂಗ್​ ನಡುವೆ ಜಗಳ ನಡೆದಿತ್ತು. ಈ ವೇಳೆ ಆನಂದ್​ ಸಿಂಗ್​ಗೆ ಗಣೇಶ್​ ಬಾಟಲ್​ನಿಂದ ಹಲ್ಲೆ ಮಾಡಿದ್ದರು. 

ಆನಂದ್ ಸಿಂಗ್ ಕುಟುಂಬಕ್ಕೆ ಬೆದರಿಕೆ ಇದೆಯಾ? ಪುತ್ರ ಸಿದ್ಧಾರ್ಥ್ ಹೇಳೋದೇನು?

ಹಲ್ಲೆಯಿಂದಾಗಿ ಆನಂದ್​ ಸಿಂಗ್​ ಕಣ್ಣಿಗೆ ಗಾಯವಾಗಿತ್ತು. ಅಲ್ಲದೇ, ಎದೆಯ ಭಾಗಕ್ಕೆ ಪೆಟ್ಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಆನಂದ್ ಸಿಂಗ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 ಆದ್ರೆ ಇಂದು ರಾತ್ರಿ 8.30ರ ಸುಮಾರಿಗೆ ಆನಂದ್​ ಸಿಂಗ್​ ತರಾತುರಿಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ಆದರೆ, ಹಲ್ಲೆ ಮಾಡಿ ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಜೆ.ಎನ್. ಗಣೇಶ್ ತಲೆಮರಿಸಿಕೊಂಡಿದ್ದಾರೆ.

ಹಲ್ಲೆ ನಂತರ ಮೊದಲ ಸಾರಿ ಮಾತನಾಡಿದ ಆನಂದ್‌ ಸಿಂಗ್‌, ಗಣೇಶ್ ಬಗ್ಗೆ ಏನಂದ್ರು?

 ರಾಮನಗರ ಪೊಲೀಸರು ಗಣೇಶ್ ನನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಿದ್ದು,  ಇದುವರೆಗೂ ಅವರನ್ನು ಬಂಧಿಸಲು ಸಾಧ್ಯವಾಗಿಲ್ಲ.

click me!