ಆಸ್ಪತ್ರೆಗೆ ಬಂದ DKS ಜತೆ ಗಲಾಟೆ ಬಗ್ಗೆ ಅರ್ಧ ಗಂಟೆ ಮಾತನಾಡಿದ ಆನಂದ್ ಸಿಂಗ್

Published : Jan 22, 2019, 09:08 PM ISTUpdated : Jan 22, 2019, 10:51 PM IST
ಆಸ್ಪತ್ರೆಗೆ ಬಂದ DKS ಜತೆ ಗಲಾಟೆ ಬಗ್ಗೆ ಅರ್ಧ ಗಂಟೆ ಮಾತನಾಡಿದ ಆನಂದ್ ಸಿಂಗ್

ಸಾರಾಂಶ

ಆನಂದ್ ಸಿಂಗ್ ಅವರಿಗೆ ಏನು ಆಗಿಲ್ಲ ಎಂದು ಹೇಳಿದ್ದ ಸಂಸದ ಡಿ.ಕೆ. ಸುರೇಶ್ ಇಂದು [ಮಂಗಳವಾರ] ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆನಂದ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು.

ಬೆಂಗಳೂರು, [ಜ.22]: ಕಾಂಗ್ರೆಸ್​ನ ರೆಸಾರ್ಟ್​ ರಾಜಕೀಯ ಏನೋ ಅಂತ್ಯವಾಗಿದೆ. ಆದ್ರೆ ರೆಸಾರ್ಟ್ ನಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ನಿಂದ ಏಟು ತಿಂದ ಆನಂದ್‌ ಸಿಂಗ್ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆನಂದ್ ಸಿಂಗ್ ಅವರಿಗೆ ಏನು ಆಗಿಲ್ಲ ಎಂದು ಹೇಳಿದ್ದ ಸಂಸದ ಡಿ.ಕೆ. ಸುರೇಶ್ ಇಂದು [ಮಂಗಳವಾರ] ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಆನಂದ್ ಸಿಂಗ್ ಜೊತೆ ಅರ್ಧ ಗಂಟೆ ಚರ್ಚೆ ನಡೆಸಿದ್ದಾರೆ.

ಏಟು ತಿಂದ ಆನಂದ್‌ ಸಿಂಗ್‌ ಹೇಗಿದ್ದಾರೆ? ಫೋಟೋ ಹಿಂದಿನ ಸತ್ಯ!

ರೆಸಾರ್ಟ್ ನಲ್ಲಿ ಅಂದು ಏನೆಲ್ಲ  ನಡೆಯಿತು ಎಂದು ಘಟನೆ ಬಗ್ಗೆ ಸುದೀರ್ಘ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ. ಸುರೇಶ್,  ಆನಂದ್ ಸಿಂಗ್ ಚೇತರಿಕೆ ಕಾಣುತ್ತಿದ್ದಾರೆ. ನನ್ನ ಜೊತೆ ಘಟನೆ ಬಗ್ಗೆ ಅರ್ಥ ಗಂಟೆ ಮಾತನಾಡಿದರು ಎಂದರು.

ಗಣೇಶ್‌ ಅಮಾನತು ನಂತರ ರಾಜ್ಯ ರಾಜಕಾರಣಲ್ಲಿ ನಂಬಲಾಗದ ಬೆಳವಣಿಗೆ!

ಇನ್ನು ಡಿಸ್ಸಾರ್ಚ್ ಬಗ್ಗೆ ಮಾತನಾಡಿದ ಸುರೇಶ್,  ಇನ್ನು ಆನಂದ್ ಸಿಂಗ್ ಆಸ್ಫತ್ರೆಯಲ್ಲೇ ಇರಬೇಕಾಗುತ್ತೆ. ಯಾವಾಗ ಡಿಸ್ಸಾರ್ಜ್ ಎಂದು ವೈದ್ಯರು ಹೇಳಬೇಕು ಎನ್ನುತ್ತಲೇ ಆಸ್ಪತ್ರೆಯಿಂದ ಹೊರಟು ಹೋದರು..

ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ನಡುವೆ ತೀವ್ರವಾಗಿ ಗಲಾಟೆ ನಡೆದರೂ ಏನು ಆಗಿಯೇ ಇಲ್ಲ ಎಂದು  ತೇಪೆ ಹಚ್ಚಲು ಡಿ.ಕೆ.ಬ್ರದರ್ಸ್ ಪ್ರಯತ್ನಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ