
ಬೆಂಗಳೂರು, [ಜ.21]: ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ.
ಆನಂದ್ ಸಿಂಗ್ ಹೇಳಿಕೆ ಮೇರೆಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಶಾಸಕರ ಗಲಾಟೆ ಪ್ರಕರಣದ ಏ-1 ಆರೋಪಿ ಆಗಿರುವ ಕಂಪ್ಲಿ ಗಣೇಶ್ ವಿರುದ್ಧ ಐಪಿಸಿ ಸೆಕ್ಷನ್ 323, 324, 307, 504 ಹಾಗೂ 506 ಅಡಿಯಲ್ಲಿ ದೂರು ದಾಖಲಾಗಿದೆ.
ರೆಸಾರ್ಟ್ ರಂಪಾಟ: ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ 'ಕೈ' ಶಾಸಕ ಅಮಾನತು
ಇದ್ರಿಂದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ಗೆ ಬಂಧನದ ಭೀತಿ ಶುರುವಾಗಿದ್ದು, ಯಾವುದೇ ಸಂದರ್ಭದಲ್ಲಾದರೂ ಶಾಸಕ ಕಂಪ್ಲಿ ಗಣೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಅಷ್ಟೇ ಅಲ್ಲದೇ ಈ ಪ್ರಕರಣದಲ್ಲಿ ಗಣೇಶ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದರೂ ಅಚ್ಚರಿ ಪಡಬೇಕಿಲ್ಲ.
ಏಟು ತಿಂದ ಆನಂದ್ ಸಿಂಗ್ ಹೇಗಿದ್ದಾರೆ? ಫೋಟೋ ಹಿಂದಿನ ಸತ್ಯ!
ಮೊನ್ನೆ CLP ಮೀಟಿಂಗ್ ಮುಗಿದ ತಕ್ಷಣ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ನಲ್ಲಿ ಬಳ್ಳಾರಿ ಭಾಗದ ಶಾಸಕರಾದ ಆನಂದ್ ಸಿಂಗ್ ಮತ್ತು ಗಣೇಶ್ ಅವರು ರಾತ್ರಿ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದರು.
ಕೈ ಶಾಸಕರ ಬಡಿದಾಟ: ಆತಂಕ ತಂದ ಆನಂದ ಸಿಂಗ್ ಹೆಲ್ತ್ ರಿಪೋರ್ಟ್
ಈ ವೇಳೆ ವಿಜಯನಗರ ಶಾಸಕರಾದ ಆನಂದ್ ಸಿಂಗ್ ಅವರ ಮೇಲೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ತೀವ್ರವಾಗಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ಆನಂದ್ ಸಿಂಗ್ ಬಲಗಣ್ಣಿಗೆ ತೀವ್ರವಾದ ಪೆಟ್ಟು ಬಿದ್ದಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.