ರೆಸಾರ್ಟ್ ರಂಪಾಟ: ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ 'ಕೈ' ಶಾಸಕ ಅಮಾನತು

Published : Jan 21, 2019, 06:15 PM ISTUpdated : Jan 21, 2019, 06:28 PM IST
ರೆಸಾರ್ಟ್ ರಂಪಾಟ: ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ 'ಕೈ' ಶಾಸಕ ಅಮಾನತು

ಸಾರಾಂಶ

ಈಗಲ್ಟನ್ ರೆಸಾರ್ಟ್ ನಲ್ಲಿ ನಡೆದ‌ ಶಾಸಕ  ಗಲಾಟೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಕ್ರಮಕೈಗೊಂಡಿದೆ.

ಬೆಂಗಳೂರು, [ಜ.21]: ಈಗಲ್ಟನ್ ರೆಸಾರ್ಟ್ ನಲ್ಲಿ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಕಂಪ್ಲಿ ಶಾಸಕನನ್ನು ಕಾಂಗ್ರೆಸ್ ಪಾರ್ಟಿಯಿಂದ ಅಮಾನತು ಮಾಡಿದೆ.

ಹೊಸಪೇಟೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್ ನಿಂದ ಅಮಾನತು ಮಾಡಲಾಗಿದೆ. 

ಏಟು ತಿಂದ ಆನಂದ್‌ ಸಿಂಗ್‌ ಹೇಗಿದ್ದಾರೆ? ಫೋಟೋ ಹಿಂದಿನ ಸತ್ಯ!

CLP ಮೀಟಿಂಗ್​​ ಮುಗಿದ ತಕ್ಷಣ ಬಿಡದಿ ಬಳಿಯ ಈಗಲ್​​ಟನ್ ರೆಸಾರ್ಟ್​​​ನಲ್ಲಿ  ಕಾಂಗ್ರೆಸ್​​ ಶಾಸಕರು ತಂಗಿದ್ದರು. ಈ ವೇಳೆ ಬಳ್ಳಾರಿ ಭಾಗದ ಶಾಸಕರಾದ ಆನಂದ್​ ಸಿಂಗ್​​ ಮತ್ತು ಗಣೇಶ್​​ ಅವರು ರಾತ್ರಿ ಪಾರ್ಟಿ ವೇಳೆ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದರು. 

ಕೈ ಶಾಸಕರ ಬಡಿದಾಟ: ಆತಂಕ ತಂದ ಆನಂದ ಸಿಂಗ್ ಹೆಲ್ತ್ ರಿಪೋರ್ಟ್

ಈ ವೇಳೆ ವಿಜಯನಗರ ಶಾಸಕರಾದ ಆನಂದ್​ ಸಿಂಗ್ ಅವರ ಮೇಲೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್​ ತೀವ್ರವಾಗಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ಆನಂದ್​ ಸಿಂಗ್ ಬಲಗಣ್ಣಿಗೆ ತೀವ್ರವಾದ ಪೆಟ್ಟು ಬಿದ್ದಿದೆ.

ಎಡಗಣ್ಣಿಗೂ ಸಹ ಪೆಟ್ಟು ಬಿದ್ದಿದೆ. ಘಟನೆಯ ನಂತರ ಆನಂದ್​ ಸಿಂಗ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ