ಬಿಹಾರ ಚುನಾವಣೆಗೆ ಪ್ರಮುಖ ವಿಪಕ್ಷ ಆರ್‌ಜೆಡಿ ಬಹಿಷ್ಕಾರ ?

Kannadaprabha News   | Kannada Prabha
Published : Jul 24, 2025, 04:49 AM IST
Rashtriya Janata Dal leader (RJD) Tejashwi Yadav

ಸಾರಾಂಶ

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪ್ರಮುಖ ವಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದೆ.

ಪಟನಾ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪ್ರಮುಖ ವಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದೆ. ಆರ್‌ಜೆಡಿ ನಾಯಕ, ವಿಪಕ್ಷ ನಾಯಕ ತೇಜಸ್ವಿ ಯಾದವ್‌ ಮಾತನಾಡಿ, ‘ಚುನಾವಣಾ ಆಯೋಗವು ಬಿಜೆಪಿ ಅಣತಿಯಂತೆ ಕೆಲಸ ಮಾಡುತ್ತಿದೆ. ಹೀಗಾದಲ್ಲಿ ಚುನಾವಣೆಯ ಪಾರದರ್ಶಕತೆ ಎಲ್ಲಿರುತ್ತದೆ’ ಎಂದಿದ್ದಾರೆ.

ಇದೇ ವೇಳೆ ಚುನಾವಣೆ ಬಹಿಷ್ಕರಿಸುವ ಕುರಿತು ಪ್ರಶ್ನೆಗೆ ಉತ್ತರಿಸಿದ ತೇಜಸ್ವಿ, ಈ ಆಯ್ಕೆಯೂ ನಮ್ಮ ಮುಂದಿದೆ. ನಾವು ಮಿತ್ರ ಪಕ್ಷಗಳು, ಜನರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದೇವೆ’ ಎಂದಿದ್ದಾರೆ. ಚುನಾವಣಾ ಆಯೋಗ ಹೇಳಿದೆ.

ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಪರ ವಿರೋಧದ ಚರ್ಚೆ ನಡುವೆಯೇ ಚುನಾವಣಾ ಆಯೋಗ ‘ಮತಪಟ್ಟಿ ಪರಿಷ್ಕರಣೆಯಲ್ಲಿ 18 ಲಕ್ಷ ಮೃತರು, ಕ್ಷೇತ್ರ ಬದಲಾವಣೆ ಮಾಡಿದ 26 ಲಕ್ಷ ಜನರು ಮತ್ತು ಎರಡು ಕ್ಷೇತ್ರಗಳಲ್ಲಿ ಮತದಾನ ಅರ್ಹತೆ ಪಡೆದಿದ್ದ 7 ಲಕ್ಷ ಮಂದಿ ಹೆಸರನ್ನು ಕೈಬಿಡಲಾಗಿದೆ’ ಎಂದಿದೆ

ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆ - ಉಭಯ ಸದನಗಳಲ್ಲಿ ಕಲಾಪ  ಬಲಿ

ಸೋಮವಾರದಿಂದ ಆರಂಭವಾಗಿರುವ ಸಂಸತ್‌ ಅಧಿವೇಶನ 2ನೇ ದಿನವೂ ವಿಪಕ್ಷಗಳ ಗದ್ದಲಕ್ಕೆ ಬಲಿಯಾಯಿತು. ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆ ಉಭಯ ಸದನಗಳಲ್ಲಿ ಕಲಾಪವನ್ನು ಬಲಿ ಪಡೆದಿದ್ದರಿಂದ ಅದು ಬುಧವಾರಕ್ಕೆ ಮುಂದೂಡಿಕೆಯಾಯಿತು.

ಸೋಮವಾರ ಆಪರೇಷನ್ ಸಿಂದೂರಕ್ಕೆ ಬಲಿಯಾಗಿದ್ದ ಗದ್ದಲ, ಮಂಗಳವಾರ ಮತಪಟ್ಟಿ ಪರಿಷ್ಕರಣೆ ವಿಚಾರದಿಂದ ಮುಂದೂಡಿಕೆಯಾಯಿತು. ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡದ ವಿಪಕ್ಷ ನಾಯಕರು, ಘೋಷಣಾ ಪತ್ರಗಳನ್ನು ಹಿಡಿದು, ಮತಪಟ್ಟಿ ಪರಿಷ್ಕರಣೆ ನಿಯಮವನ್ನು ವಾಪಸ್‌ ತೆಗೆದುಕೊಳ್ಳುವಂತೆ ಆಗ್ರಹಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದರು. ಬಳಿಕ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮುಂದೂಡಿದರು.

ಮಧ್ಯಾಹ್ನ ಕಲಾಪ ಮತ್ತೆ ಆರಂಭವಾದಾಗಲೂ ವಿಪಕ್ಷಗಳು ಪಟ್ಟು ಬಿಡಲಿಲ್ಲ. ಈ ವೇಳೆ ಕೇಂದ್ರ ಸಚಿವ ಕಿರಣ್‌ ರಿಜಿಜು ಕಲಾಪ ನಡೆಸಲು ಅವಕಾಶ ಮಾಡಿಕೊಡದ ವಿಪಕ್ಷಗಳ ನಡೆಗೆ ಆಕ್ಷೇಪಿಸಿದರು. ಅಲ್ಲದೇ ಸರ್ಕಾರ ಆಪರೇಷನ್ ಸಿಂದೂರದ ಕುರಿತು ಚರ್ಚೆಗೆ ಸಮಯ ನಿಗದಿ ಮಾಡಲಿದೆ ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು