
ಬೆಂಗಳೂರು (ಅ.16): ನನ್ನ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ ನನ್ನ ಹಾಗೂ ಕಾಂಗ್ರೆಸ್ ಪಕ್ಷದ ಧ್ವನಿಯನ್ನು ಅಡಗಿಸಬಹುದು ಎಂದುಕೊಂಡಿದ್ದರೆ ಅದು ಸುಳ್ಳು. ನನ್ನ ವಿರುದ್ಧದ ಶೋಷಣೆಗೆ ರಾಜರಾಜೇಶ್ವರಿನಗರದ ಜನತೆಯೇ ಸೂಕ್ತ ಉತ್ತರ ಕೊಡುತ್ತಾರೆ ಎಂದು ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ತಿಳಿಸಿದ್ದಾರೆ.
ಬುಧವಾರ ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ತಮ್ಮ ಮೇಲೆ ದಾಖಲಾಗಿರುವ ಎಫ್ಐಆರ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ರಾಜಕೀಯಕ್ಕೆ ಬಂದಿರುವುದು ರಾಜಕಾರಣದ ಜೊತೆಗೆ ಸಮಾಜಮುಖಿ ಕೆಲಸ ಹಾಗೂ ಜನರ ಕೆಲಸ ಮಾಡಲು. ಒಬ್ಬ ಅಸಹಾಯಕ ಹೆಣ್ಣು ಮಗಳು ಸಮಾಜಮುಖಿ ಕೆಲಸ ಮಾಡಲು ಬಂದ ತಕ್ಷಣ ನನ್ನ ಗುರಿಯಾಗಿಸಿಕೊಂಡು (ಟಾರ್ಗೆಟ್) ಎಫ್ಐಆರ್ ದಾಖಲಿಸಿದ್ದೀರಿ. ನನಗಿಂತ ಮೊದಲು ಎಲ್ಲಾ ರೀತಿಯಲ್ಲೂ ನೀತಿ ಸಂಹಿತೆ ಉಲ್ಲಂಘಿಸಿದವರು ನಿಮ್ಮ ಕಣ್ಣಿಗೆ ಕಾಣಲಿಲ್ಲವೇ ಎಂದು ಪ್ರಶ್ನಿಸಿದರು.
ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್ಡಿಕೆ ಗುನ್ನಾ! .
ನಮ್ಮ ಸಮಾಜದಲ್ಲಿ ನಿರ್ಜನ ಪ್ರದೇಶದಲ್ಲಿ ಒಬ್ಬ ಹೆಣ್ಣು ಮಗಳ ಮೇಲೆ ಆಗುವ ಶೋಷಣೆಯಷ್ಟೇ ದೊಡ್ಡ ಶೋಷಣೆ ಬುಧವಾರ ರಾಜರಾಜೇಶ್ವರಿನಗರ ಬಿಬಿಎಂಪಿ ಕಚೇರಿ ಆವರಣದಲ್ಲಿ ನನ್ನ ಮೇಲೆ ನಡೆದಿದೆ. ಇದೆಲ್ಲದಕ್ಕೂ ನಾನು ಪ್ರೀತಿಸುವ ರಾಜ ರಾಜೇಶ್ವರಿನಗರ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.