ಮುನಿರತ್ನಗೆ ಬಿಗ್ ರಿಲೀಫ್, ಮುನಿರಾಜು ಗೌಡ ಅರ್ಜಿ ವಜಾ!

Published : Oct 13, 2020, 12:12 PM ISTUpdated : Oct 13, 2020, 04:51 PM IST
ಮುನಿರತ್ನಗೆ ಬಿಗ್ ರಿಲೀಫ್, ಮುನಿರಾಜು ಗೌಡ ಅರ್ಜಿ ವಜಾ!

ಸಾರಾಂಶ

ಆರ್‌ಆರ್‌ ನಗರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ| ಮುನಿರತ್ನ ವಿರುದ್ಧ ಸರ್ಜಿ ಸಲ್ಲಿಸಿದ್ದ ಮುನಿರಾಜು ಗೌಡ| ಮುನಿರಾಜುಗೌಡ ಸರ್ಜಿ ವಜಾ| ಮುನಿರತ್ನಗೆ ಬಿಗ್ ರಿಲೀಫ್

ಬೆಂಗಳೂರು(ಅ.13) ಆರ್‌ಆರ್‌ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ನೆಮ್ಮದಿ ನೀಡಿದ್ದು, ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿ ಸುಗಮವಾಗಿದೆ.

018 ವಿಧಾನಸಭೆ ಚುನಾವಣೆಯಲ್ಲಿ ಆರ್‌.ಆರ್‌.ನಗರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮುನಿರತ್ನ ಗೆದ್ದಿದ್ದರು. ಆದರೆ ಇದಾದ ಬಳಿಕ ಚುನಾವಣೆಯಲ್ಲಿ ನಕಲಿ ಮತದಾರರ ಪಟ್ಟಿ ಪತ್ತೆಯಾದ ಹಿನ್ನೆಲೆ, ಅಂದು ಬಿಜೆಪಿ ಅಭ್ಯರ್ಥಿಯಾಗಿದ್ದ ತುಳಸಿ ಮುನಿರಾಜು ಗೌಡ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುನಿರತ್ನ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದು, ಇದೀಗ ಆರ್‌.ಆರ್‌.ನಗರ ಕ್ಷೇತ್ರಕ್ಕೆ ಉಪ ಚುನಾವಣೆಗೆ ಅವರೇ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

"

ಅರ್ಜಿಯಲ್ಲೇನಿತ್ತು?

ಕಳೆದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಿರುವ ತುಳಸಿ ಮುನಿರಾಜು ಗೌಡ ಸದ್ಯ ಘೋಷಣೆಯಾಗಿರುವ ಆರ್‌.ಆರ್‌.ನಗರ ಕ್ಷೇತ್ರದ ಉಪ ಚುನಾವಣೆಗೆ ತಡೆನೀಡಬೇಕೆಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಪ್ರತಿಯಾಗಿ ಚುನಾವಣೆಗೆ ತಡೆ ನೀಡದಂತೆ ಕೋರಿ ಮುನಿರತ್ನ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ ಅವರ ನೇತೃತ್ವದ ತ್ರಿಸದಸ್ಯ ಪೀಠ ಚುನಾವಣೆಗೆ ತಡೆ ನೀಡಲು ನಿರಾಕರಿಸಿದ್ದು, ಈ ಅರ್ಜಿ ವಜಾಗೊಳಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ