ಪರಿಷತ್ತಿನಲ್ಲಿ ಬಸವರಾಜ ಹೊರಟ್ಟಿ ಬದಲಾವಣೆ ಇಲ್ಲ, ಈ ಕುರಿತು ಚರ್ಚೆ ಆಗಿಲ್ಲ: ಸಲೀಂ ಅಹ್ಮದ್

Published : Dec 09, 2025, 05:28 AM IST
Saleem Ahmed

ಸಾರಾಂಶ

ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ‌ ಆಗಲ್ಲ. ಈ ಕುರಿತು ಚರ್ಚೆ ಆಗಿಲ್ಲ. ಪರಿಷತ್ತಿನಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಇದೆ. ಈ ಕುರಿತು ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಲೀಂ ಅಹ್ಮದ್ ಸ್ಪಷ್ಟಪಡಿಸಿದರು.

ಬೆಳಗಾವಿ (ಡಿ.09): ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ‌ ಆಗಲ್ಲ. ಈ ಕುರಿತು ಚರ್ಚೆ ಆಗಿಲ್ಲ. ಪರಿಷತ್ತಿನಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಇದೆ. ಈ ಕುರಿತು ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ವಿಧಾನ ಪರಿಷತ್ ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ಸ್ಪಷ್ಟಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬ್ರೇಕ್‌ಫಾಸ್ಟ್ ಸಭೆ ಮುಗಿದ ಮೇಲೆ ಸಿಎಂ, ಡಿಸಿಎಂ ಕೊಟ್ಟ ಹೇಳಿಕೆಗಳನ್ನು ವಿರೋಧಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.‌ ಅವರು ಇಡ್ಲಿ ತಿಂದ್ರೋ, ನಾಟಿಕೋಳಿ ತಿಂದ್ರೋ ಅದು ಬೇಕಾಗಿಲ್ಲ.

ಬಿಜೆಪಿ ಸದನದಲ್ಲಿ ಪ್ರಶ್ನೆಗಳನ್ನು ಕೇಳಲಿ. ನಾವು ಉತ್ತರ ಕೊಡಲು ಸಿದ್ದರಿದ್ದೇವೆ ಎಂದರು. ಪರಿಷತ್‌ನಲ್ಲಿ ಖಾಲಿ ಸ್ಥಾನ‌ ಭರ್ತಿ‌ ಮಾಡುವ ಬಗ್ಗೆ ಹಾಗೂ ನಾನು ಸಚಿವನಾಗಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್‌ ತಿರ್ಮಾನ ಮಾಡುತ್ತದೆ ಎಂದು ತಿಳಿಸಿದರು. ಸಿಎಂ ಬದಲಾವಣೆ ಸೇರಿದಂತೆ ಪಕ್ಷದಲ್ಲಿನ ಎಲ್ಲ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗುತ್ತದೆ.‌ ಪಕ್ಷದ ಅಭಿಪ್ರಾಯ ನಮ್ಮ ಅಭಿಪ್ರಾಯ. ನಮ್ಮ ಮುಂದೆ ಇರೋದು ಸದ್ಯ ಸದನ. ಬಗ್ಗೆ ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ ಎಂದು ಪುನರುಚ್ಚರಿಸಿದರು.

ಬಿಜೆಪಿಯವರ ಪ್ರಶ್ನೆ ಕೇಳಲಿ, ಉತ್ತರಿಸಲು ನಾವು ಸಿದ್ಧ

ಬ್ರೆಕ್ ಫಾಸ್ಟ್ ಸಭೆ ಮುಗಿದ ಮೇಲೆ ಸಿಎಂ, ಡಿಸಿಎಂ ಕೊಟ್ಟ ಹೇಳಿಕೆಗಳನ್ನು ವಿರೋಧಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.‌ ಅವರು ಇಡ್ಲಿ ತಿಂದ್ರೋ, ನಾಟಿಕೋಳಿ ತಿಂದ್ರೋ ಅದು ಬೇಕಾಗಿಲ್ಲ. ಬಿಜೆಪಿ ಸದನದಲ್ಲಿ ಪ್ರಶ್ನೆಗಳನ್ನು ಕೇಳಲಿ ನಾವು ಉತ್ತರ ಕೊಡಲು ಸಿದ್ದರಿದ್ದೇವೆ. ನರೇಂದ್ರ ಮೋದಿ ಅವರು ರಾಜ್ಯಕ್ಕೆ ಏನೂ ಅನ್ಯಾಯ ಮಾಡಿದ್ದಾರೆ ಎಂಬುವುದರ ಬಗ್ಗೆ ಬಗ್ಗೆ ಮಾತನಾಡಲಿ ಎಂದು ವಿಧಾನ ಪರಿಷತ್ ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ತಿಳಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಮುಂದೆ ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ‌ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಈ ಬಗ್ಗೆ ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಸವರಾಜ ಹೊರಟ್ಟಿ‌ ಅವರ ಬದಲಾವಣೆ ಇಲ್ಲ. ಈ ಕುರಿತು ಚರ್ಚೆ ಆಗಿಲ್ಲ. ಪರಿಷತ್ ನಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಇದೆ ಎಂದು ಹೇಳಿದರು. ಪರಿಷತ್‌ನಲ್ಲಿ ಖಾಲಿ ಸ್ಥಾನ‌ ಭರ್ತಿ‌ ಮಾಡುವ ಬಗ್ಗೆ ಹೈಕಮಾಂಡ್ ತೀರ್ಮಾ‌ನ ಮಾಡುತ್ತದೆ. ನಾನು ಸಚಿವನಾಗಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್‌ ತಿರ್ಮಾನ ನಿರ್ಧರಿಸುತ್ತದೆ. ಎಲ್ಲ‌ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರು, ಹೈಕಮಾಂಡ್ ತೀರ್ಮಾನವೇ ಅಂತಿಮವಾಗುತ್ತದೆ.‌ ಪಕ್ಷದ ಅಭಿಪ್ರಾಯವ ನಮ್ಮ ಅಭಿಪ್ರಾಯ. ನಮ್ಮ ಮುಂದೆ ಇರೋದು ಸದ್ಯ ಸದನ. ಸಿಎಂ ಬದಲಾವಣೆ ಬಗ್ಗೆ ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ ಎಂದು ಸಲೀಂ ಅಹ್ಮದ್ ಪುನರುಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!