ಸತೀಶ್ ಜಾರಕಿಹೊಳಿ ಹೈಕಮಾಂಡ್ ಭೇಟಿಯಲ್ಲಿ ವಿಶೇಷವಿಲ್ಲ: ಸಚಿವ ಎನ್.ಎಸ್.ಬೋಸರಾಜು

Published : Sep 05, 2024, 04:35 PM IST
ಸತೀಶ್ ಜಾರಕಿಹೊಳಿ ಹೈಕಮಾಂಡ್ ಭೇಟಿಯಲ್ಲಿ ವಿಶೇಷವಿಲ್ಲ: ಸಚಿವ ಎನ್.ಎಸ್.ಬೋಸರಾಜು

ಸಾರಾಂಶ

ನಾವೆಲ್ಲ ಇಲಾಖೆ ಕೆಲಸಗಳಿಗೆ ದೆಹಲಿಗೆ ಹೋದಾಗ ಕೇಂದ್ರದ ಸಚಿವರು, ಅಧಿಕಾರಿಗಳನ್ನು ಭೇಟಿ ಆಗುವುದು, ಹಾಗೆ ಪಕ್ಷದ ಹೈಕಮಾಂಡ್ ಭೇಟಿ ಮಾಡುವುದು ಸಹಜ. ಅದರಂತೆ ಸಚಿವ ಸತೀಶ ಜಾರಕಿಹೊಳಿ ತಮ್ಮ ಇಲಾಖೆ ಕೆಲಸಕ್ಕೆ ದೆಹಲಿಗೆ ಹೋಗಿದ್ದಾರೆ ಅಷ್ಟೇ. 

ಹಾವೇರಿ (ಸೆ.05): ನಾವೆಲ್ಲ ಇಲಾಖೆ ಕೆಲಸಗಳಿಗೆ ದೆಹಲಿಗೆ ಹೋದಾಗ ಕೇಂದ್ರದ ಸಚಿವರು, ಅಧಿಕಾರಿಗಳನ್ನು ಭೇಟಿ ಆಗುವುದು, ಹಾಗೆ ಪಕ್ಷದ ಹೈಕಮಾಂಡ್ ಭೇಟಿ ಮಾಡುವುದು ಸಹಜ. ಅದರಂತೆ ಸಚಿವ ಸತೀಶ ಜಾರಕಿಹೊಳಿ ತಮ್ಮ ಇಲಾಖೆ ಕೆಲಸಕ್ಕೆ ದೆಹಲಿಗೆ ಹೋಗಿದ್ದಾರೆ ಅಷ್ಟೇ. ಭೇಟಿಯಲ್ಲಿ ವಿಶೇಷ ಏನಿಲ್ಲ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯನವರು ಒಪ್ಪಿದರೆ ನಾನು ಸಿಎಂ ಆಗುತ್ತೇನೆ ಎಂಬ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ದೇಶಪಾಂಡೆ ಅವರು ೯ ಬಾರಿ ಶಾಸಕ, ಸಚಿವರಾದವರು. 

ಮೈಸೂರಿಗೆ ಕೆಲಸಕ್ಕೆ ಹೋದಾಗ ಮಾಧ್ಯಮದವರು ಕೇಳಿದ್ದಕ್ಕೆ ಈಗಾಗಲೇ ಸಚಿವನಾಗಿದೀನಿ. ಮುಂದೆ ಸಿದ್ದರಾಮಯ್ಯ ಒಪ್ಪಿದರೆ ಸಿಎಂ ಆಗಬಹುದು ಎಂದು ಜನರಲ್ ಆಗಿ ಹೇಳಿದ್ದಾರೆ ಅಷ್ಟೆ ಎಂದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಪರ ನಿಂತಿದೆ. ೫ ವರ್ಷ ಕಾಯಂ ಆಗಿ ಅವರೇ ಮುಂದುವರಿಯುತ್ತಾರೆ. ಕಾಂಗ್ರೆಸ್ ಪಕ್ಷದವರಿಂದಲೇ ಸಿದ್ದರಾಮಯ್ಯ ಕೆಳಗಿಳಿಸೋ ವಿಚಾರ ನಮ್ಮವರಲ್ಲಿ ಇಲ್ಲ. ನೂರು ಸುಳ್ಳು ಹೇಳಿ ಬಿಜೆಪಿಯವರು ನಿಜ ಮಾಡೋಕೆ ಹೋಗುತ್ತಾರೆ. 

ಲೋಕಸಭಾ ಚುನಾವಣೆಯಲ್ಲಿ ನಾವು ೧ ಸ್ಥಾನದಿಂದ ೯ಕ್ಕೆ ಏರಿದ್ದೇವೆ. ಹೀಗಾಗಿ ನರೇಂದ್ರ ಮೋದಿ-ಅಮಿತ್ ಶಾಗೆ ಆತಂಕ ಶುರುವಾಗಿದೆ. ೪೦೦ಸೀಟು ಗೆಲ್ತೀವಿ ಅಂತಿದ್ರು. ಆದರೆ ಬಿಜೆಪಿಯವರಿಗೆ ೨40 ಸೀಟು ಬಂದವು. ಮೋದಿಯವರ ಪ್ರಭಾವ ಶೇ. ೮ರಷ್ಟು ಇಳಿದಿದೆ. ರಾಹುಲ್ ಪ್ರಭಾವ ಶೇ.೨೨ರಷ್ಟು ಹೆಚ್ಚಿದೆ ಎಂದರು. ನಮ್ಮ ಸರ್ಕಾರ ಆಡಳಿತ ಮಾಡಬಾರದು ಎಂದು ಬಿಜೆಪಿಯವರು ಅಲ್ಲಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸಾಧ್ಯವೇ ಇಲ್ಲ, ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ಆಮೇಲೆ ೬ ತಿಂಗಳೊಳಗೆ ಸಿದ್ದರಾಮಯ್ಯ ಸರ್ಕಾರ ತೆಗೆದುಹಾಕುತ್ತೇವೆ. ಅದು ನಮ್ ಜವಾಬ್ದಾರಿ. 

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಪುರುಷರ ಹೊರೆ ಇಳಿಕೆ: ಸಚಿವ ಮಂಕಾಳು ವೈದ್ಯ

ನಮಗೆಲ್ಲ ರಾಜಕಾರಣ ಗೊತ್ತಿದೆ ಎಂದು ಎಚ್‌.ಡಿ. ದೇವೆಗೌಡರು, ಕುಮಾರಸ್ವಾಮಿ ಅವರು ಅಮಿತ್ ಶಾ ಜತೆ ಮೊದಲೇ ಮಾತಾಡಿಕೊಂಡು ಬಂದಿದ್ದರು. ಈಗ ಬಿಜೆಪಿಯವರು ಆಪರೇಶನ್ ಶುರು ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ನಮ್ಮದೇ ೯ ಶಾಸಕರು ಸಿಎಂ, ಡಿಸಿಎಂ ಬಳಿ ಬಂದು ಬಿಜೆಪಿಯವರು ನಮ್ಮನ್ನು ಟಚ್ ಮಾಡುತ್ತಿದ್ದಾರೆಂದು ಹೇಳಿದ್ದಾರೆ. ಆದರೆ ಅದು ಆಗಲಿಲ್ಲ, ಹೀಗಾಗಿ ಸಿಬಿಐ ಪ್ರಯೋಗ ಮಾಡಿದರು. ಇಡಿ ಪ್ರಯೋಗ ಮಾಡಿ ಸಿಎಂ ಹಾಗೂ ಡಿ.ಕೆ. ಶಿವಕುಮಾರ ಹೆಸರು ಸೇರಿಸುವುದಕ್ಕೆ ಪ್ರಯತ್ನ ಮಾಡಿದರು. ಅದೂ ಆಗದೇ ಇದ್ದಾಗ ರಾಜಭವನ ದುರುಪಯೋಗ ಮಾಡಿಕೊಂಡು ಸರ್ಕಾರಕ್ಕೆ ಮಸಿ ಬಳಿಯೋ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ