ನಮ್‌ ತಾಕತ್‌ ಚುನಾವಣೆಯಲ್ಲಿ ತೋರಿಸಿದ್ದೇವೆ: ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಟಾಂಗ್‌

Published : Sep 14, 2022, 06:19 AM ISTUpdated : Sep 14, 2022, 06:40 AM IST
ನಮ್‌ ತಾಕತ್‌ ಚುನಾವಣೆಯಲ್ಲಿ ತೋರಿಸಿದ್ದೇವೆ: ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಟಾಂಗ್‌

ಸಾರಾಂಶ

ಬಿಜೆಪಿಯ ಜನಸ್ಪಂದನ ಕಾರ್ಯಕ್ರದಲ್ಲಿ ಅಷ್ಟೊಂದು ಜನ ಸೇರಿಲ್ಲ. ಖಾಲಿ ಕುರ್ಚಿಗಳು ಇರುವುದನ್ನು ಮಾಧ್ಯಮಗಳಲ್ಲಿ ನಾವು ನೋಡಿದ್ದೇವೆ ಎಂದು ವ್ಯಂಗ್ಯವಾಡಿದ ಸತೀಶ ಜಾರಕಿಹೊಳಿ 

ಬೆಳಗಾವಿ(ಸೆ.14):  ನಮ್ಮ ತಾಕತ್‌ ಏನು ಅಂತ ಬೆಳಗಾವಿಯ ಎರಡೂ ಪರಿಷತ್‌ ಚುನಾವಣೆಯಲ್ಲಿ ತೋರಿಸಿದ್ದೇವೆ. ಸಿಎಂ ಬೊಮ್ಮಾಯಿ ಅವರು ಜೋಶ್‌ನಲ್ಲಿ ಆ ರೀತಿ ಮಾತನಾಡಿದ್ದಾರೆ. ಅವರಿಗೆ ಬಹುಶಃ ಖಾಲಿ ಖುರ್ಚಿಗಳನ್ನು ನೋಡಿ ಜೋಶ್‌ ಬಂದಿರಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧಮ್‌ ತಾಕತ್‌ ಭಾಷಣ ವಿಚಾರ ಮಾತನಾಡಿದರು. ಸಿದ್ದರಾಮೋತ್ಸವ ಆದ ಮೇಲೆ ಬಿಜೆಪಿಯವರು ಹತಾಶರಾಗಿದ್ದಾರೆ. ಅಲ್ಲಿ ಸೇರಿದ ಜನ ನೋಡಿ ಅವರಿಗೆ ಹತಾಶೆ ಆಗಿದೆ. ಸಿಎಂ ಅಬ್ಬರದ ಭಾಷಣ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಈಗಾಗಲೇ ನಮ್ಮ ನಾಯಕರು, ಮುಖಂಡರು ಸಿಎಂ ಹೇಳಿಕೆಗೆ ಉತ್ತರ ನೀಡಿದ್ದಾರೆ. ಬಿಜೆಪಿಯ ಜನಸ್ಪಂದನ ಕಾರ್ಯಕ್ರದಲ್ಲಿ ಅಷ್ಟೊಂದು ಜನ ಸೇರಿಲ್ಲ. ಖಾಲಿ ಕುರ್ಚಿಗಳು ಇರುವುದನ್ನು ಮಾಧ್ಯಮಗಳಲ್ಲಿ ನಾವು ನೋಡಿದ್ದೇವೆ ಎಂದು ವ್ಯಂಗ್ಯವಾಡಿದರು.

ಮಠಾಧೀಶರ ವಿರುದ್ಧದ ಆರೋಪ ಸತ್ಯಕ್ಕೆ ದೂರ; ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್

ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಅಪಾರ ಮಳೆಯಿಂದ ಜನತೆಗೆ ತೊಂದರೆ ಉಂಟಾಗುತ್ತಿದ್ದರೂ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ ಎಂದು ಆರೋಪಿಸಿದರು. ಕಳೆದ ಬಾರಿ ಕೂಡ ಸರ್ಕಾರವಾಗಲಿ, ಸಚಿವರಾಗಲಿ ಜನತೆಗೆ ಸ್ಪಂದನೆ ನೀಡಲಿಲ್ಲ. ಈ ಬಾರಿಯೂ ನಿರ್ಲಕ್ಷ್ಯ ಮುಂದುವರೆದಿದೆ. ಕೆಲವು ಕಡೆ ಮಳೆಯಿಂದ ಮನೆಗಳು ಬಿದ್ದಿವೆ. ಕೆಲವರನ್ನು ಸ್ಥಳಾಂತರ ಮಾಡಲಾಗಿದ್ದು, ಇನ್ನುಳಿದವರನ್ನು ಹಾಗೆ ಬಿಡಲಾಗಿದೆ ಎಂದು ತಿಳಿಸಿದರು.

ಕೆಪಿಟಿಸಿಎಲ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಈಗಾಗಲೇ 20 ಜನರನ್ನು ಬಂಧಿಸಿದ್ದಾರೆ. ಬರೀ ಬಂಧನ ಮಾಡಿದರೆ ಪ್ರಯೋಜನ ಇಲ್ಲ. ದುಡ್ಡು ಕೊಟ್ಟು ನೌಕರಿ ಪಡೆಯುವ ಸ್ಥಿತಿ ನಿರ್ಮಾಣವಾದರೆ ನಿರಂತರ ಅಧ್ಯಯನ ಮಾಡಿದವರಿಗೆ ಅನ್ಯಾಯವಾಗುತ್ತೆ. ಕಾರಣ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಇಂತಹ ಪ್ರಕರಣ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಯಮಕನಮರಡಿಯಲ್ಲಿ ನನ್ನನ್ನು ಟಾರ್ಗೆಟ್‌ ಮಾಡಿ ಪ್ರಯೋಜನವಿಲ್ಲ. ಜನ ಬೆಂಬಲ ನಮ್ಮ ಕಡೆ ಇದ್ದಾಗ ಬಿಜೆಪಿಯವರು ಏನೂ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರು ಅಧಿಕಾರಕ್ಕಾಗಿ ಅನ್ಯ ಮಾರ್ಗದಲ್ಲಿ ಸಾಗುತ್ತಿದ್ದಾರೆ ಎಂದು ದೂರಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ