ಲೋಕಸಭಾ ಚುನಾವಣೆ : ಬೆಳಗಾವಿ ಸ್ಪರ್ಧೆಗೆ ಈ ಮುಖಂಡಗೆ ಕರೆ..?

Kannadaprabha News   | Asianet News
Published : Feb 01, 2021, 08:45 AM IST
ಲೋಕಸಭಾ ಚುನಾವಣೆ : ಬೆಳಗಾವಿ ಸ್ಪರ್ಧೆಗೆ ಈ ಮುಖಂಡಗೆ  ಕರೆ..?

ಸಾರಾಂಶ

ಶೀಘ್ರ ನಡೆಯುವ ಬೆಳಗಾವಿ ಲೋಕಸಭಾ ಚುನಾವಣೆ ಟಿಕೆಟ್ ವಿಚಾರಸಾಕಷ್ಟು ಸದ್ದಾಗುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಈ ನಾಯಕಗೆ ಸೂಚಿಸಲಾಗಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. 

ಬೆಳಗಾವಿ (ಫೆ.01):  ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮಗೆ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕರೆ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 

ರಾಹುಲ್ ಗಾಂಧಿ ಕರೆ ಮಾಡಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದ್ದಾರೆ ಎಂದು ಮಾಧ್ಯಮಗಳ ವರದಿಯನ್ನು ಅಲ್ಲಗೆಳೆದ ಅವರು, ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ ಎಂದಷ್ಟೇ ತಿಳಿಸಿದರು. 

ಉಪಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಅಭ್ಯರ್ಥಿ ಹೆಸರು ಹೇಳಲಾಗುವುದು. ನಾಲ್ವರ ಹೆಸರು ಕೇಳಿಬಂದಿದೆ. ಅದರಲ್ಲಿ ಒಬ್ಬರಿಗೆ ಟಿಕೆಚ್‌ ನೀಡಲಾಗುತ್ತದೆ. ಈ ಕುರಿತು ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. 

ಬಿಜೆಪಿಯದು ದೊಂಬರಾಟದ ಸರ್ಕಾರ: ಜಾರಕಿಹೊಳಿ ...

ಇದೇವೇಳೆ ಪ್ರಕಾಶ ಹುಕ್ಕೇರಿ ಅವರಿಗೆ ಟಿಕೆಟ್‌ ನೀಡುವುದು ಹೈಕಮಾಂಡ್‌ಗೆ ಬಿಟ್ಟವಿಚಾರ. ಇಲ್ಲಿಯೂ ಅಭ್ಯರ್ಥಿಗಳಿದ್ದಾರೆ. ತಮ್ಮ ಕ್ಷೇತ್ರವನ್ನೇ ಮರಳಿ ಪಡೆಯಲು ಅವರಿಗೆ ಇನ್ನೂ ಮೂರು ವರ್ಷ ಅವಕಾಶವಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌