ಆಡಿಯೋ ಕೇಸ್: ಸುಪ್ರೀಂನಲ್ಲಿ ಕೈ ಮೇಲು, BSY, ಅನರ್ಹ ಶಾಸಕರಿಗೆ ಸಂಕಷ್ಟ

Published : Nov 04, 2019, 06:56 PM ISTUpdated : Nov 04, 2019, 07:06 PM IST
ಆಡಿಯೋ ಕೇಸ್: ಸುಪ್ರೀಂನಲ್ಲಿ ಕೈ ಮೇಲು, BSY, ಅನರ್ಹ ಶಾಸಕರಿಗೆ ಸಂಕಷ್ಟ

ಸಾರಾಂಶ

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಬಿಎಸ್ ಯಡಿಯೂರಪ್ಪನವರ ಆಪರೇಷನ್ ಕಮಲ ಆಡಿಯೋ ಕೇಸ್ ಅನ್ನು ಸುಪ್ರೀಂಕೋರ್ಟ್ ಪರಿಗಣಿಸಿದ್ದು, ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ಇದ್ರಿಂದ ಬಿಎಸ್ ವೈ ಹಾಗೂ ಅನರ್ಹ ಶಾಸಕರಿಗೆ ಆತಂಕ ಶುರುವಾಗಿದೆ.

ನವದೆಹಲಿ/ಬೆಂಗಳೂರು,[ನ.04]: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷ್ಯವನ್ನು ಸುಪ್ರೀಂಕೋರ್ಟ್ ಪರಿಗಣಿಸಿದ್ದು, ಈ ಕುರಿತು ನಾಳೆ(ಮಂಗಳವಾರ) ಆಡಿಯೋ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಇದರಿಂದ ಅನರ್ಹರಿಗೆ ಆತಂಕ ಶುರುವಾಗಿದೆ.

ಯಾಕಂದ್ರೆ, ಈಗಾಗಲೇ ಸುಪ್ರೀಂ ಕೋರ್ಟ್ ಅನರ್ಹರ ವಿಚಾರಣೆಯನ್ನು ಮುಗಿಸಿದ್ದು, ತೀರ್ಪು ನಿಡುವುದೊಂದೇ ಬಾಕಿ ಇತ್ತು. ಇನ್ನೇನು ಮೂರ್ನಾಲ್ಕು ದಿನಗಳಲ್ಲಿ ತೀರ್ಪು ಪ್ರಕಟವಾಗುವ ಎಲ್ಲಾ ನಿರೀಕ್ಷೆಗಳಿದ್ದವು. ಆದ್ರೆ, ಇದೀಗ ಯಡಿಯೂರಪ್ಪನವರ ಆಪರೇಷನ್ ಕಮಲದ ಆಡಿಯೋ ಸ್ಫೋಟಗೊಂಡಿದ್ದು, ಅನರ್ಹ ಶಾಸಕರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ದೋಸ್ತಿ ಬೀಳಲು ಅಸಲಿ ನಿರ್ದೇಶಕರು ಯಾರು, ಸಿದ್ದರಾಮಯ್ಯ ಕೊಟ್ಟ ಸಾಕ್ಷ್ಯಗಳು!

ಇಂದು [ಸೋಮವಾರ]  ನ್ಯಾಯಾಧೀಶ ಎನ್.ವಿ.ರಮಣ ಅವರ ಮುಂದೆ ಆಡಿಯೋ ಬಗ್ಗೆ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಪ್ರಸ್ತಾಪ ಮಾಡಿದರು. ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು,ಈಗಾಗಲೇ ವಿಚಾರಣೆ ಮುಗಿದಿದ್ದು, ಈಗ ಏನು ಹೇಳಬೇಕು ಕಪಿಲ್ ಸಿಬಲ್ ಅವರಿಗೆ ಪ್ರಶ್ನಿಸಿದರು.

ವಿಚಾರಣೆ ಮುಗಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಆಡಿಯೋ ಕ್ಲಿಪ್ ಲೀಕ್ ಆಗಿದೆ. ಹಾಗಾಗಿ ನ್ಯಾಯಾಲಯದ ಗಮನಕ್ಕೆ ತರಬೇಕಿದೆ. ಲೀಕ್ ಆಗಿರುವ ಆಡಿಯೋವನ್ನು ಭಾಷಾಂತರ ಮಾಡಲಾಗಿದ್ದು, ನ್ಯಾಯಾಲಯ ಪರಿಗಣಿಸಬೇಕೆಂದು ಕಪಿಲ್ ಸಿಬಲ್ ಮನವಿ ಮಾಡಿಕೊಂಡರು.

ಅನರ್ಹ ಶಾಸಕರಿಗೆ ಎದುರಾಯ್ತು ಮತ್ತೊಂದು ಕಂಟಕ !

ಮನವಿ ಆಲಿಸಿದ ನ್ಯಾಯಾಧೀಶರು, ನಿಮ್ಮದು ಸೇರಿ ಕೆಲವು ಪ್ರಕರಣ ಇತ್ಯರ್ಥ ಪಡಿಸಬೇಕು. ಹಾಗಾಗಿ ನಾಳೆ [ಮಂಗಳವಾರ] ಕೆಲ ಸಮಯ ಹಳೆಯ ಪೀಠವನ್ನು ಮುಂದುವರಿಸೋಣ. ನಿಮ್ಮ ಮನವಿ ಏನಿದೆ ಸಲ್ಲಿಸಿ, ನಾಳೆ ಪರಿಶೀಲಿಸೋಣ ಎಂದು ನ್ಯಾಯಾಧೀಶರು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ