
ತಿರುವನಂತಪುರಂ, (ಸೆ. 27): ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ, ಹಾಲಿ ಶಾಸಕ ಸಿ.ಎಫ್ ಥಾಮಸ್ (81) ವಿಧಿವಶರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ತಿರುವಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತಕ್ಕೊಳಗಾಗಿ ಭಾನುವಾರ ಬೆಳಗ್ಗೆ ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಚಂಗನಚ್ಚೇರಿ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಥಾಮಸ್ ಅವರು ಕೆಲ ಕಾಲದಿಂದ ವಯೋಸಹಜ ಅನಾರೋಗ್ಯ ಪೀಡಿತರಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕರ್ನಾಟಕದ ಶಾಸಕ ನಿಧನ..!
1980ರಿಂದ ಕೊಟ್ಟಾಯಂ ಜಿಲ್ಲೆಯ ಚಂಗನಚ್ಚೇರಿ ವಿಧಾನಸಭಾ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿದ್ದರು. 2001 ರಿಂದ 2006 ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯು ಡಿಎಫ್ ಸರ್ಕಾರದಲ್ಲಿ ಥಾಮಸ್ ಅವರು ಗ್ರಾಮೀಣಾಭಿವೃದ್ಧಿ, ಖಾದಿ, ಗುಡಿ ಕೈಗಾರಿಕೆ ಖಾತೆ ಸಚಿವರಾಗಿದ್ದರು. ಕೇರಳ ಕಾಂಗ್ರೆಸ್(ಎಂ) ಕೆಎಂ ಮಣಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದರು.
ಮೊನ್ನೆ ಅಷ್ಟೇ ಕರ್ನಾಟಕದ ಬಸವಕಲ್ಯಾಣದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅವರು ಸಹ ನಿಧನರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.