ಸಚಿವ ಸುಧಾಕರ್​ಗೆ ಮುಖಭಂಗ: ಎಲ್ಲ ಜವಾಬ್ದಾರಿ ಕಿತ್ತುಕೊಂಡ ಸಿಎಂ

Published : May 04, 2021, 07:48 PM ISTUpdated : May 04, 2021, 07:55 PM IST
ಸಚಿವ ಸುಧಾಕರ್​ಗೆ ಮುಖಭಂಗ: ಎಲ್ಲ ಜವಾಬ್ದಾರಿ ಕಿತ್ತುಕೊಂಡ ಸಿಎಂ

ಸಾರಾಂಶ

ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಹಿನ್ನೆಲೆ ಸಿಎಂ ಫುಲ್ ಗರಂ ಆಗಿದ್ದು, ಆರೋಗ್ಯ ಸಚಿವ ಸುಧಾಕರ್‌ ನೀಡಿದ್ದ ಎಲ್ಲ ಜವಾಬ್ದಾರಿಯನ್ನೂ ಸಿಎಂ ಬಿ.ಎಸ್​ ಯಡಿಯೂರಪ್ಪ ಕಿತ್ತುಕೊಂಡಿದ್ದಾರೆ.

ಬೆಂಗಳೂರು, (ಮೇ.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಬೆಡ್, ಆಕ್ಸಿಜನ್ ಹಾಗೂ ಔಷಧಿಗಳ ಕೊರತೆ ಎದುರಾಗಿದೆ.

ಅದರಲ್ಲೂ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಒಂದೇ ದಿನದಲ್ಲಿ 24 ಸೊಂಕಿತರ ಸಾವನ್ನಪ್ಪಿದ್ದು, ಸರ್ಕಾರಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಈ ಹಿನ್ನೆಲೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಆಕ್ರೋಶಗಳ ವ್ಯಕ್ತವಾಗುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಆರೋಗ್ಯ ಸಚಿವ ಡಾ. ಸುಧಾಕರ್​ಗೆ ನೀಡಿದ್ದ ಎಲ್ಲ ಜವಾಬ್ದಾರಿಯನ್ನೂ ಕಿತ್ತುಕೊಂಡಿದ್ದಾರೆ.

ಚಾಮರಾಜನಗರ ಆಸ್ಪತ್ರೆ ದುರಂತ: ಆಕ್ಸಿಜನ್‌ನಿಂದ ಸತ್ತಿಲ್ಲ ಎಂದು ಸರ್ಟಿಫಿಕೇಟ್ ಕೊಟ್ಟ ಸಚಿವರು

ಯೆಸ್.. ಸುಧಾಕರ್​ಗೆ ಕೇವಲ ಆರೋಗ್ಯ ಖಾತೆ ಮಾತ್ರ ಉಳಿಸಿರುವ ಸಿಎಂ, ಕೊರೋನಾಗೆ ಸಂಬಂಧಿಸಿದಂತೆ ಎಲ್ಲಾ  ಜವಾಬ್ದಾರಿಯನ್ನೂ ಬೇರೆ-ಬೇರೆ ಸಚಿವರುಗಳಿಗೆ ಹಂಚಿಕೆ ಮಾಡಿದ್ದಾರೆ. ಇಂದು (ಮಂಗಳವಾರ) ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಚಿವ ಜಗದೀಶ್ ಶೆಟ್ಟರ್‌ಗೆ ಆಕ್ಸಿಜನ್ ಜವಾಬ್ದಾರಿಯನ್ನು ನೀಡಿದ್ದರೆ, ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ್​ಗೆ ಯಾವುದೇ ಔಷಧದ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡಿದ್ದಾರೆ.

 ಇನ್ನು ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಬೆಡ್‌ಗಳ ವ್ಯವಸ್ಥೆ ಜವಾಬ್ದಾರಿಯನ್ನು ಆರ್.ಅಶೋಕ್ ಹಾಗೂ ಬೊಮ್ಮಾಯಿ ಹೆಗೆಲಿಗೆ ಹಾಕಿದ್ದಾರೆ. ಅಲ್ಲದೇ ಮಹತ್ವದ ವಾರ್ ರೂಂ ಜವಾಬ್ದಾರಿಯನ್ನು ಸಚಿವ ಅರವಿಂದ್ ಲಿಂಬಾವಳಿಗೆ ನೀಡಿದ್ದಾರೆ.

ಕೊರೋನಾ ನಿಯಂತ್ರಣದ ಎಲ್ಲಾ ಕೆಲಸಗಳನ್ನು ಸಚಿವರುಗಳಿಗೆ ಹಂಚಿಕೆ ಮಾಡಿದ್ದರಿಂದ ಸುಧಾಕರ್ ಹಲ್ಲು ಕಿತ್ತಿದ ಹಾವಿನಂತಾಗಿದ್ದಾರೆ. ಕೇವಲ ಅವರು ಈಗ ಆರೋಗ್ಯ ಸಚಿವರಷ್ಟೇ. ಅವರ ಬಳಿ ಕೊರೋನಾ ನಿಯಂತ್ರಣ ಜವಾಬ್ದಾರಿಗಳು ಯಾವುದು ಇಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಗಿಲು ಅಕ್ರಮ ನಿವಾಸಿಗಳು 20 ವರ್ಷದಿಂದಲ್ಲ, 6 ತಿಂಗಳ ಹಿಂದೆ ಬಂದವರು: 2023ರ ನಕ್ಷೆ ತೋರಿಸಿದ-ಆರ್. ಅಶೋಕ್
28 ವರ್ಷದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ; Rahul Gandhi-Priyanka Gandhi ಫುಲ್‌ ಖುಷ್!