ಕುಟುಂಬಕ್ಕೆ ಒಂದೇ ಟಿಕೆಟ್‌ ನಮಗೆ ಅನ್ವಯ ಆಗಲ್ಲ: ಶಾಮನೂರು ಶಿವಶಂಕರಪ್ಪ

Published : Jun 16, 2022, 10:43 PM IST
ಕುಟುಂಬಕ್ಕೆ ಒಂದೇ ಟಿಕೆಟ್‌ ನಮಗೆ ಅನ್ವಯ ಆಗಲ್ಲ: ಶಾಮನೂರು ಶಿವಶಂಕರಪ್ಪ

ಸಾರಾಂಶ

*  ನಾನು ಕೇಳಿದರೆ ನಾಲ್ಕು ಟಿಕೆಟ್‌ ಕೊಡ್ತಾರೆ *  ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುವೆ *  ನಾನು ಮುಖ್ಯಮಂತ್ರಿ ಆಗುವ ಬಗ್ಗೆ ಏನು ಹೇಳುವುದಕ್ಕಾಗುವುದಿಲ್ಲ

ದಾವಣಗೆರೆ(ಜೂ.16):  ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌ ಎಂಬ ನೀತಿ ನಮ್ಮ ಕುಟುಂಬಕ್ಕೆ ಅನ್ವಯ ಆಗುವುದಿಲ್ಲ. ನಾನು ಕೇಳಿದರೆ ನಾಲ್ಕು ಟಿಕೆಟ್‌ ಕೊಡುತ್ತಾರೆ. ಗೆಲ್ಲುವವರು ಬೇಕು ಅಷ್ಟೇ ಎನ್ನುವ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವುದಾಗಿ ಹಿರಿಯ ಕಾಂಗ್ರಸ್‌ ನಾಯಕ ಶಾಮನೂರು ಶಿವಶಂಕರಪ್ಪ ಅವರು ತಿಳಿಸಿದ್ದಾರೆ.

ಇಂದು(ಗುರುವಾರ) ತಮ್ಮ ಮೊಮ್ಮಗಳ ಮದುವೆಯಲ್ಲಿ ಭಾಗಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರೊಂದಿಗೆ ತಮ್ಮ 92ನೇ ಜನ್ಮ ದಿನ ಆಚರಿಸಿಕೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ನನ್ನ ಮನೆ ಯಾಕೆ ರಾಜಕೀಯ ಶಕ್ತಿ ಕೇಂದ್ರ ಆಗಬಾರದು ಎಂದು ಪ್ರಶ್ನಿಸಿದರು. 

DAVANAGERE: ಜನರೇ ಕಾಂಗ್ರೆಸನ್ನು ಮನೆಗೆ ಚಲೋ ಮಾಡಲಿದ್ದಾರೆ: ಸಿಎಂ ಬೊಮ್ಮಾಯಿ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುವೆ. ನಾನು ಮುಖ್ಯಮಂತ್ರಿ ಆಗುವ ಬಗ್ಗೆ ಏನು ಹೇಳುವುದಕ್ಕಾಗುವುದಿಲ್ಲ. ನಾನು ಮುಖ್ಯಮಂತ್ರಿ ಆಗುವ ವಿಚಾರದ ಬಗ್ಗೆ ಬೇಕಿದ್ದರೆ ಕೋಡಿಹಳ್ಳಿ ಮಠದ ಸ್ವಾಮೀಜಿಗಳನ್ನು ಕೇಳಿ ಎಂದು ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ