
ತಮಕೂರು, (ಸೆ.29): ರಾಜ್ಯದ ಶಿರಾ ಹಾಗೂ ರಾಜರಾಜೇಶ್ವರಿನಗರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್ 3, 2020ರಂದು ಮತದಾನಕ್ಕೆ ದಿನಾಂಕ ನಿಗಧಿಗೊಳಿಸಿ, ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಇದರ ಬೆನ್ನಲ್ಲೆ ಉಪ ಚುನಾವಣೆಯ ಕದನ ಗರಿಗೆದರಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ಟಿಕೆಟ್ ಗಾಗಿ ಪೈಪೋಟಿ ಕೂಡ ಆರಂಭವಾಗಿದೆ. ಅದರಲ್ಲೂ ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಬೈ ಎಲೆಕ್ಷನ್ ಅಭ್ಯರ್ಥಿ ಆಯ್ಕೆ ಜೆಡಿಎಸ್ ಮತ್ತು ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಶಿರಾ ಬೈ ಎಲೆಕ್ಷನ್: ಡಿಕೆಶಿ ತಂತ್ರ ಸಕ್ಸಸ್, ಕಾಂಗ್ರೆಸ್ ಅಭ್ಯರ್ಥಿ ಫೈನಲ್
ಈಗಾಗಲೇ ಕಾಂಗ್ರೆಸ್ನಿಂದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರಿಗೆ ಟಿಕೆಟ್ ಖಚಿತವಾಗಿದ್ದು, ಅವರು ಪ್ರಚಾರವನ್ನು ಸಹ ಆರಂಭಿಸಿದ್ದಾರೆ. ಇನ್ನು ಬಿಜೆಪಿಯಲ್ಲಿ 4, ಜೆಡಿಎಸ್ನಲ್ಲಿ ಇಬ್ಬರು ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ.
ಬಿಜೆಪಿ ಟಿಕೆಟ್ಗಾಗಿ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ, ಡಾ.ರಾಜೇಶ್ ಗೌಡ, ಡಾ.ಶಿವಕುಮಾರ್ ನಡುವೆ ಪೈಪೋಟಿ ಇದ್ರೆ. ಜೆಡಿಎಸ್ನಲ್ಲಿ ದಿವಂಗತ ಸತ್ಯನಾರಾಯಣ ಪುತ್ರ ಸತ್ಯಪ್ರಕಾಶ್, ಕಲ್ಕೆರೆ ರವಿಕುಮಾರ್ ನಡುವೆ ಟಿಕೆಟ್ಗಾಗಿ ಪೈಪೋಟಿ ಶುರುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.