
ಶಿವಮೊಗ್ಗ, (ಡಿ.22): ರಾಜ್ಯದಲ್ಲಿ (ಮಂಗಳವಾರ) ಮೊದಲನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಅಂತ್ಯವಾಗಿದೆ. ಆದ್ರೆ, ಚಿನ್ಹೆ ಅದಲು ಬದಲು ಆಗಿದ್ದು ಅಭ್ಯರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತನ್ನ ಚಿನ್ನೆ ಟೇಬಲ್ ಆಗಿದ್ದು, ಇದಕ್ಕೆ ಮತ ನೀಡುವಂತೆ ಆ ಅಭ್ಯರ್ಥಿ ಸಾಕಷ್ಟು ಪ್ರಚಾರ ಮಾಡಿದ್ದರು. ಆದರೆ ಚುನಾವಣೆ ವೇಳೆ ಮತ ಪತ್ರದಲ್ಲಿ ಇದ್ದ ಚಿನ್ನೆ ಬೆಂಚು. ಇದರಿಂದ ಅಭ್ಯರ್ಥಿ ಕಂಗಾಲಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆತ್ಮಹತ್ಯೆ
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂದಿ ಚಟ್ನಳ್ಳಿ ಗ್ರಾಾಮದ ವಾರ್ಡ್ನಿಂದ ಅರ್ಜುನ್ ಎಂಬುವವರು ಸ್ಪರ್ಧಿಸಿದ್ದು, ಅವರಿಗೆ ಟೇಬಲ್ ಚಿನ್ಹೆ ನೀಡಲಾಗಿತ್ತು. ಆದ್ರೆ, ಮತ ಪತ್ರದಲ್ಲಿ ಟೇಬಲ್ ಬದಲಾಗಿ ಬೆಂಚ್ ಚಿನ್ಹೆ ಮುದ್ರಣವಾಗಿದೆ. ಇದರಿಂದ ಅಭ್ಯರ್ಥಿ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನೊಂದ ಅಭ್ಯರ್ಥಿ, ತನಗೆ ಟೇಬಲ್ ಚಿನ್ನೆ ನೀಡಲಾಗಿದೆ ಎಂದು ತಿಳಿಸಲಾಗಿತ್ತು. ಅದರಂತೆ ನಾನು ಪ್ರಚಾರ ಮಾಡಿದ್ದೆ. ಆದರೆ ಮತದಾನದ ವೇಳೆ ಬ್ಯಾಲೆಟ್ ಪೇಪರ್ನಲ್ಲಿ ಚಿನ್ಹೆ ಟೇಬಲ್ ಬದಲಾಗಿ ಬೆಂಚ್ ಚಿತ್ರ ಮುದ್ರಣವಾಗಿದೆ ಎಂದು ಅಳಲು ತೋಡಿಕೊಂಡರು.ಈ ಸಂಬಂಧ ಚುನಾವಣಾಧಿಕಾರಿಗಳಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.