ಸುಳ್ಳು ಹೇಳುವ ರಾಗಾ ಅವರನ್ನೇ ವಿಚಾರಣೆಗೆ ಒಳಪಡಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Published : Sep 20, 2025, 05:32 AM IST
Shobha Karandlaje

ಸಾರಾಂಶ

ಮತಗಳ್ಳತನದ ಸುಳ್ಳು ಆರೋಪಗಳ ಮೂಲಕ ದೇಶದಲ್ಲಿ ಅಶಾಂತಿ ಹುಟ್ಟಿಸಲು ಮುಂದಾಗುತ್ತಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಬೀದರ್‌ (ಸೆ.20): ಮತಗಳ್ಳತನದ ಸುಳ್ಳು ಆರೋಪಗಳ ಮೂಲಕ ದೇಶದಲ್ಲಿ ಅಶಾಂತಿ ಹುಟ್ಟಿಸಲು ಮುಂದಾಗುತ್ತಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಾರಿಗೆ ಕಳ್ಳತನ ಗೊತ್ತಿರುತ್ತೋ ಅವರೇ ಕಳ್ಳತನ ಮಾಡ್ತಾರೆ. ದೇಶದ ವ್ಯವಸ್ಥೆ ಮೇಲೆ ಅಪನಂಬಿಕೆ ಬರುವ ರೀತಿ ಮಾಡಬೇಕೆನ್ನುವುದು ಅವರ ಷಡ್ಯಂತ್ರ. ಭಾರತವನ್ನ ನೇಪಾಳ ಮಾಡ್ತೀವಿ, ಶ್ರೀಲಂಕಾ ಮಾಡ್ತೀವಿ, ಬಾಂಗ್ಲಾದೇಶ ಮಾಡ್ತೀವಿ ಎನ್ನುವುದರ ಉದ್ದೇಶವೇನು?

ಇ.ಡಿ, ಸಿಬಿಐ ಸೇರಿ ಎಲ್ಲಾ ಸಂಸ್ಥೆಗಳ‌ ಮೇಲಿನ ವಿಶ್ವಾಸ ಹೋಗಲಾಡಿಸುವ ಉದ್ದೇಶ ಅವರದ್ದಾಗಿದೆ. ದೇಶದಲ್ಲಿ ಕಲಹ ಸೃಷ್ಟಿ ಮಾಡಿ ಅಶಾಂತಿ ಹುಟ್ಟಿಸೋದು ಕಾಂಗ್ರೆಸ್‌ನ ಉದ್ದೇಶ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಎಲ್ಲದರ ಹಿಂದೆ ಜಾರ್ಜ್‌ ಸರೋಜ್‌ ಇದ್ದಾರೆ. ಈಗಾಗಲೇ ಅಮೇರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಜಾರ್ಜ್‌ ಸರೋಜ್‌ ಅಶಾಂತಿ ಹುಟ್ಟಿಸುತ್ತಿದ್ದು, ದೇಶದಲ್ಲಿ ಶಾಂತಿ ಕದಡುವ ಉದ್ದೇಶಕ್ಕೆ ಹಣ ನೀಡ್ತಾರೆ. ಜಾರ್ಜ್‌ ಸರೋಜ್‌ ಹಾಗೂ ರಾಹುಲ್‌ ಗಾಂಧಿ ಕುರಿತಾಗಿ ತನಿಖೆ ಆಗಬೇಕು ಎಂದು ಕರಂದ್ಲಾಜೆ ಆಗ್ರಹಿಸಿದರು.

ಚುನಾಯಿತ ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ

ವಿದೇಶಿ ಶಕ್ತಿಗಳ ಜೊತೆಗೂಡಿ ನಮ್ಮ ದೇಶದಲ್ಲಿನ ಹಿತ ಶತ್ರುಗಳು ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಇಂಥವರು ತಮ್ಮ ಪ್ರಯತ್ನದಲ್ಲಿ ಸಫಲವಾಗಲಾರರು ಎಂದು ನುಡಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಉತ್ತರ ಪ್ರಾಂತದಿಂದ ನಗರದಲ್ಲಿ ಹಮ್ಮಿಕೊಂಡ ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮನವರ 200 ವರ್ಷದ ವಿಜಯೋತ್ಸವ ಮತ್ತು ವೀರ ರಾಣಿ ಅಬ್ಬಕ್ಕನವರ 500ನೇ ಜಯಂತ್ಯೋತ್ಸವ ಆಚರಣೆಯ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ರಾಷ್ಟ್ರದಲ್ಲಿ ಒಂದು ಕುಟುಂಬವನ್ನು ವೈಭವೀಕರಿಸಲು ಸ್ವಾತಂತ್ರ್ಯ ಹೋರಾಟಗಾರರ ವೀರಗಾಥೆ ಯನ್ನು ಮರೆ ಮಾಚುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ನಾವು ವಿದ್ಯಾರ್ಥಿಗಳಿದ್ದಾಗ ನಮಗೆ ‘ಅಕ್ಬರ್‌ ದ ಗ್ರೇಟ್‌’ ಎಂಬ ವಿಷಯ ಪಠ್ಯಕ್ರಮವನ್ನಾಗಿಸಲಾಗಿತ್ತು. ‘ಅಕ್ಬರ್‌ ದ ಗ್ರೇಟ್‌’ ಎಂಬುವುದು ಪಠ್ಯವಾಗಿರುವಾಗ ಕೆಚ್ಚೆದೆಯ ಸಂಗೊಳ್ಳಿ ರಾಯಣ್ಣನ ವೀರಗಾಥೆ ಪಠ್ಯಕ್ರಮ ಏಕೆ ಆಗಿಲ್ಲ ಎಂದ ಅವರು ಕಿತ್ತೂರು ರಾಣಿ ಚನ್ನಮ್ಮನವರ ಮತ್ತು ರಾಣಿ ಅಬ್ಬಕ್ಕನರ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳುವಂತೆ ಸಚಿವೆ ಶೋಭಾ ಕರಂದ್ಲಾಜೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಶಾಲಿನಿ ವರ್ಮಾ ಮಾತನಾಡಿ, ಮತಾಂತರದ ಮತ್ತು ಲವ್‌ ಜಿಹಾದ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತದ ಕಾರ್ಯದರ್ಶಿ ಸಚಿನ್‌ ಕುಳಗೇರಿ ಮಾತನಾಡಿ, ಕಿತ್ತೂರು ರಾಣಿ ಚನ್ನಮ್ಮನವರ ಮತ್ತು ರಾಣಿ ಅಬ್ಬಕ್ಕನವರ ವೀರಗಾಥೆಯನ್ನು ಯುವ ವೃಂದಕ್ಕೆ ಮನವರಿಕೆ ಮಾಡಿ ರಾಷ್ಟ್ರ ಪ್ರೇಮ ಮತ್ತು ದೇಶ ಭಕ್ತಿ ವೃದ್ಧಿಸುವುದೇ ರಥಯಾತ್ರೆಯ ಉದ್ದೇಶವಾಗಿದೆ ಎಂದರು. ಬೀದರ್‌ನಿಂದ ಆರಂಭವಾದ ರಥಯಾತ್ರೆ ರಾಜ್ಯದ 50 ನಗರಗಳ ಮೂಲಕ ಸಾಗಿ 2,520 ಕಿ.ಮೀ.ಗಳನ್ನು ಕ್ರಮಿಸಿದ ಬಳಿಕ ಬೆಳಗಾವಿಯಲ್ಲಿ ಸಮಾವೇಶಗೊಂಡ ಬಳಿಕ ರಥವು ಉತ್ತರ ಪ್ರದೇಶದ ಹರಿದ್ವಾರ ದಲ್ಲಿ ಆಯೋಜಿಸಲಾಗುವ ಎಬಿವಿಪಿ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ