
ನವದೆಹಲಿ: ಇತ್ತೀಚೆಗೆ ಲೋಕಸಭೆಯಲ್ಲಿ ಕಾಂಗ್ರೆಸ್ನ ಮಹಿಳಾ ಸಂಸದರು ತಮ್ಮ ಸ್ಥಾನದತ್ತ ಧಾವಿಸಿ ಬಂದ ಘಟನೆಯ ಬಗ್ಗೆ ಮೊದಲ ಬಾರಿ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ ‘ಸಂಸತ್ತಿನಲ್ಲಿ ಕಾಂಗ್ರೆಸ್ ತಾನೂ ಕೆಲಸ ಮಾಡಲ್ಲ, ತನ್ನ ಮಿತ್ರ ಪಕ್ಷಗಳಿಗೂ ಕೆಲಸ ಮಾಡಲು ಬಿಡಲ್ಲ. ಕಾಂಗ್ರೆಸ್ನ ನಡವಳಿಕೆಗಳು ಸಂಸದೀಯ ಚಟುವಟಿಕೆಗಳಿಗೆ ಅಡ್ಡಿ ಮಾಡುತ್ತಿವೆ. ಇದರಿಂದಾಗಿ ಅವರ ಸಹಯೋಗಿ ಪಕ್ಷಗಳೇ ಹೆಚ್ಚಿನ ನಷ್ಟ ಅನುಭವಿಸುತ್ತಿವೆ’ ಎಂದು ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
ಇಲ್ಲಿ ನಮೋ ಭಾರತ್ ಮತ್ತು ಮೆಟ್ರೋ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಯಾರ ಹೆಸರನ್ನೂ ಹೇಳದೆ, ‘ನೀವು ಪ್ರಧಾನಿ ಸ್ಥಾನದಲ್ಲಿ ಕೂರಬೇಕೆಂದಿದ್ದರೆ ಮೊದಲಿಗೆ ಜನರ ಹೃದಯವನ್ನು ಗೆದ್ದು ಬನ್ನಿ. ಮಹಿಳಾ ಸಂಸದೆಯರನ್ನು ಸ್ಥಾನ ಆಕ್ರಮಿಸುವಂತೆ ಕಳುಹಿಸಿಕೊಡುವ ಮೂಲಕ ಪ್ರಧಾನಿ ಸ್ಥಾನವನ್ನು ಅಲಂಕರಿಸುವುದು ಸಾಧ್ಯವಿಲ್ಲ. ಇಂಥ ಕೆಲಸಕ್ಕಾಗಿ ತಾಯಂದಿರು ಮತ್ತು ಸೋದರಿಯರನ್ನು ತಳ್ಳುವ ಅಗತ್ಯವೇನಿತ್ತು? ನೀವು ಅಷ್ಟು ಪೊಳ್ಳಾಗಿ ಹೋಗಿದ್ದೀರಾ?’ ಎಂದು ಹೆಸರು ಹೇಳದೆಯೇ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದರು.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಫೆ.4ರಂದು ಮೋದಿ ಮಾತನಾಡಬೇಕಿತ್ತು. ಆದರೆ ಅಂದು ಕಾಂಗ್ರೆಸ್ನ ಮಹಿಳಾ ಸಂಸದೆಯರು ಮೋದಿ ಸ್ಥಾನದತ್ತ ಧಾವಿಸಿ ಗದ್ದಲ ಎಬ್ಬಿಸಿದ್ದರು. ಈ ವೇಳೆ ಭಾರೀ ಗದ್ದಲ ಏರ್ಪಟ್ಟ ಕಾರಣ, ಲೋಕಸಭೆಯಲ್ಲಿ ಮೋದಿ ಭಾಷಣವನ್ನೇ ರದ್ದುಪಡಿಸಲಾಗಿತ್ತು. ಬಳಿಕ ಇದಕ್ಕೆಲ್ಲಾ ರಾಹುಲ್ ಕಾರಣ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.