ಸಿದ್ದು ಸಮಾವೇಶದ ಯಶಸ್ಸಿಂದ ಬಿಜೆಪಿಯಲ್ಲಿ ಸಂಚಲನ

Published : Aug 05, 2022, 10:44 AM ISTUpdated : Aug 05, 2022, 10:51 AM IST
ಸಿದ್ದು ಸಮಾವೇಶದ ಯಶಸ್ಸಿಂದ ಬಿಜೆಪಿಯಲ್ಲಿ ಸಂಚಲನ

ಸಾರಾಂಶ

ದಾವಣಗೆರೆಯಲ್ಲಿ ನಡೆದ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ಭರ್ಜರಿ ಯಶಸ್ಸು ಆಡಳಿತಾರೂಢ ಬಿಜೆಪಿ ಪಾಳೆಯದಲ್ಲಿ ಸಂಚಲನ ಉಂಟು ಮಾಡಿದೆ.

ದಾವಣಗೆರೆಯಲ್ಲಿ ನಡೆದ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ಭರ್ಜರಿ ಯಶಸ್ಸು ಆಡಳಿತಾರೂಢ ಬಿಜೆಪಿ ಪಾಳೆಯದಲ್ಲಿ ಸಂಚಲನ ಉಂಟು ಮಾಡಿದೆ. ಅಮೃತ ಮಹೋತ್ಸವಕ್ಕೆ ಈ ಮಟ್ಟಿಗೆ ಜನರು ಆಗಮಿಸುತ್ತಾರೆ ಎಂಬ ಕಲ್ಪನೆಯೂ ಬಿಜೆಪಿ ನಾಯಕರಿಗೆ ಇರಲಿಲ್ಲ. ಅಪಾರ ಜನ ಸಾಗರವನ್ನು ನೋಡಿದ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಹಂತದಲ್ಲಿ ಬಿರುಸಿನ ಚರ್ಚೆ ಶುರುವಾಗಿದ್ದು, ಈ ಸಮಾವೇಶವನ್ನು ಕಡೆಗಣಿಸದೆ ಹಿಂದುಳಿದ ವರ್ಗಗಳನ್ನು ಸೆಳೆಯಲು ತಂತ್ರ ರೂಪಿಸಬೇಕು ಎಂಬ ಒಲವು ಕೂಡ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮೃತ ಮಹೋತ್ಸವದ ಮರುದಿನವಾದ ಗುರುವಾರವೇ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಹಾಗೂ ರಾಷ್ಟ್ರೀಯ ಬಿಜೆಪಿಯ ಪ್ರಭಾವಿ ನಾಯಕ ಅಮಿತ್‌ ಶಾ ಅವರು ರಾಜ್ಯ ನಾಯಕರೊಂದಿಗೆ ಮಾತನಾಡುವ ವೇಳೆ ಸಿದ್ದರಾಮಯ್ಯ ಅವರ ಕಾರ್ಯಕ್ರಮದ ಬಗ್ಗೆಯೂ ಪ್ರಸ್ತಾಪವಾಗಿದೆ. ರಾಜ್ಯ ನಾಯಕರೊಂದಿಗಿನ ಮಾತುಕತೆಗೂ ಮೊದಲೇ ತಮ್ಮ ವ್ಯಾಪ್ತಿಯಲ್ಲಿರುವ ಗುಪ್ತಚರ ಇಲಾಖೆಯಿಂದ ಅಮೃತ ಮಹೋತ್ಸವದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದ ಅಮಿತ್‌ ಶಾ ಅವರು, ಹಿಂದುಳಿದ ವರ್ಗಗಳ ಸಮುದಾಯದ ಮತಗಳನ್ನು ಪಕ್ಷದೆಡೆಗೆ ಆಕರ್ಷಿಸಲು ಏನು ಮಾಡಬೇಕು ಎಂಬುದರ ಬಗ್ಗೆ ಯೋಚಿಸಿ ಎಂದಿದ್ದಾರೆ ಎನ್ನಲಾಗಿದೆ.

ಸರ್ಕಾರದ ವರ್ಚಸ್ಸು ವೃದ್ಧಿಸಿ ಪಕ್ಷ ಸಂಘಟಿಸಿ: ಅಮಿತ್‌ ಶಾ

ಕರ್ನಾಟಕದಲ್ಲಿ ಎರಡು ಬಾರಿ ಪಕ್ಷ ಅಧಿಕಾರಕ್ಕೆ ಬಂದರೂ ಪೂರ್ಣ ಬಹುಮತ ಗಳಿಸಲು ಸಾಧ್ಯವಾಗಿಲ್ಲ. ಈ ಬಾರಿಯಾದರೂ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಏರಬೇಕು ಎಂಬ ಪಕ್ಷದ ಕನಸು ನನಸಾಗಬೇಕು ಎಂದರೆ ಹಿಂದುಳಿದ ವರ್ಗಗಳ ವಿಶ್ವಾಸ ಗಳಿಸಬೇಕು. ನಮ್ಮ ಪಕ್ಷದಲ್ಲಿ ಹಲವು ಉನ್ನತ ಸ್ಥಾನಗಳನ್ನು ಹಿಂದುಳಿದ ವರ್ಗಗಳಿಗೆ ನೀಡಿದರೂ ಅದರ ಪ್ರಭಾವ ಕಂಡು ಬರುತ್ತಿಲ್ಲ. ಹೀಗಾಗಿ, ಅನ್ಯ ಪಕ್ಷಗಳಲ್ಲಿರುವ ಹಿಂದುಳಿದ ವರ್ಗಗಳ ಮುಖಂಡರನ್ನು ಗುರುತಿಸಿ ಪಕ್ಷಕ್ಕೆ ಕರೆತರುವ ಬಗ್ಗೆ ಈಗಿನಿಂದಲೇ ಕ್ರಮ ಕೈಗೊಳ್ಳಿ. ಇದು ನಿರ್ಲಕ್ಷಿಸುವ ಬೆಳವಣಿಗೆಯಲ್ಲ ಎಂಬ ಕಿವಿಮಾತನ್ನು ಅಮಿತ್‌ ಶಾ ಅವರು ರಾಜ್ಯ ನಾಯಕರಿಗೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದು ಅಮೃತೋತ್ಸವದಿಂದ ಬಿಜೆಪಿಗರಿಗೆ ನಡುಕ: ಪರಂ

ಈ ನಡುವೆ ಪಕ್ಷದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಕ್ರಿಯಾಶೀಲವಾಗಿ ಸಂಘಟನೆಯಲ್ಲಿ ಮುಂದಾಗದೆ ಇರುವ ಬಗ್ಗೆಯೂ ಬಿಜೆಪಿ ಪಾಳೆಯದಲ್ಲಿ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರ ಮತ್ತು ಸಚಿವರ ವಿರುದ್ಧ ಹೇಳಿಕೆಗಳನ್ನು ನೀಡಿದಾಗ ಅದಕ್ಕೆ ಸಮರ್ಥವಾಗಿ ಉತ್ತರ ನೀಡುವ ಪ್ರಯತ್ನವನ್ನು ಪಕ್ಷದ ಹಿಂದುಳಿದ ವರ್ಗಗಳ ಸಚಿವರು ಅಥವಾ ಮುಖಂಡರು ಮಾಡುವುದಿಲ್ಲ ಎಂಬ ಬೇಸರವೂ ಕಂಡು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ