
ಬೆಂಗಳೂರು, (ಜೂನ್.01): ಅನಾರೋಗ್ಯ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಪ್ತ ವೈದ್ಯ ಡಾ.ರವಿ ಕುಮಾರ್ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ) ಬೆಂಗಳೂರಿನ ಮಣಿಪಾಲ್ ಅಸ್ಪತ್ರೆಗೆ ದಾಖಲಾಗಿದ್ದಾರೆ. ವೈರಲ್ ಫೀವರ್ ಆದ ಕಾರಣ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಸಿದ್ದರಾಮಯ್ಯಗೆ ಅನಾರೋಗ್ಯ, ವೈದ್ಯರಿಂದ ತಪಾಸಣೆ
ನಿನ್ನೆ (ಸೋಮವಾರ) ರಾತ್ರಿ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಡಾ.ರವಿ ಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯ ತಪಾಸಣೆ ಮಾಡಿದ್ದಾರೆ. ಅಲ್ಲದೇ ಕೋವಿಡ್ ಟೆಸ್ಟ್ ಮಾಡಿದ್ದು, ವರದಿ ನೆಗೆಟಿವ್ ಅಂತ ಬಂದಿದೆ. ಇನ್ನು ಸಿಟಿ ಸ್ಕ್ಯಾನಿಂಗ್ ರಿಪೋರ್ಟ್ ನಾರ್ಮಲ್ ಇದೆ.
ಈಗಾಗಲೇ ಒಮ್ಮೆ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿಗೆ ಒಳಗಾಗಿ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು.
ಇನ್ನು ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಉಂಟಾಗಿರೋ ಕಾರಣ ನಿಗದಿಯಾಗಿದ್ದ ಅವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.