ಕರ್ನಾಟಕ ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿದ್ದರಾಮಯ್ಯ

Published : Nov 22, 2022, 11:39 AM IST
ಕರ್ನಾಟಕ ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿದ್ದರಾಮಯ್ಯ

ಸಾರಾಂಶ

ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರಡ್ಡಿ

ಕೊಪ್ಪಳ(ನ.21): 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಅಲ್ಲದೇ ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ತಾಲೂಕಿನ ವನಬಳ್ಳಾರಿಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಆನಂತರ ಮಾತನಾಡಿ, ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು. ಜಿಲ್ಲೆಯ ಐದು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್‌ ಜಯಭೇರಿ ಬಾರಿಸಬೇಕು ಎಂದರು. ಜಿಲ್ಲೆಯಿಂದ ನಮಗೆ ಪೂರ್ಣ ಬೆಂಬಲ ನೀಡಿ, ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳಿಸಿಕೊಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಜನರ ಮೂಗಿಗೆ ತುಪ್ಪ ಹಚ್ಚುವ ಕಾಂಗ್ರೆಸಿಗರು: ಸಚಿವ ಹಾಲಪ್ಪ ಆಚಾರ್

ಜೋಳದ ರೊಟ್ಟಿ ಕೇಳಿ ಸವಿದ ಸಿದ್ದು

ತಾಲೂಕಿನ ವನ ಬಳ್ಳಾರಿ ಗ್ರಾಮದಲ್ಲಿ ಕಾಂಗ್ರೆಸ್‌ ಮುಖಂಡ ಹನುಮಂತಪ್ಪ ಅವರ ಸಹೋದರನ ಮದುವೆಯಲ್ಲಿ ನವದಂಪತಿಗೆ ಶುಭ ಕೋರಿದ ಸಿದ್ದರಾಮಯ್ಯ, ಬಳಿಕ ಊಟಕ್ಕೆ ಕುಳಿತಾಗ ಚಪಾತಿ ಬೇಡ, ಬಿಳಿ ಜೋಳದ ರೊಟ್ಟಿಕೊಡಿ ಎಂದು ತರಿಸಿಕೊಂಡು ಜೋಳದ ರೊಟ್ಟಿ ಸವಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್