24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು : ಯಾವ ಇಲಾಖೆಯ ಎಷ್ಟು ಹುದ್ದೆ ?

Sujatha NR   | Kannada Prabha
Published : Dec 10, 2025, 05:07 AM IST
Siddaramaiah

ಸಾರಾಂಶ

ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ  ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ರಾಜ್ಯದಲ್ಲಿ ಒಟ್ಟು 2,84,881 ಸರ್ಕಾರಿ ಹಾಗೂ ಅರೆ ಸರ್ಕಾರಿ ಹುದ್ದೆಗಳು ಖಾಲಿಯಿವೆ. ಪ್ರಸ್ತುತ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

  ವಿಧಾನಸಭೆ :  ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಸೇರಿದಂತೆ ವಿವಿಧೆಡೆ ಇತ್ತೀಚೆಗೆ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ರಾಜ್ಯದಲ್ಲಿ ಒಟ್ಟು 2,84,881 ಸರ್ಕಾರಿ ಹಾಗೂ ಅರೆ ಸರ್ಕಾರಿ ಹುದ್ದೆಗಳು ಖಾಲಿಯಿವೆ. ಪ್ರಸ್ತುತ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿರುವ ಸಿದ್ದರಾಮಯ್ಯ ಅವರು ಇಲಾಖಾವಾರು ಖಾಲಿ ಹುದ್ದೆಗಳ ವಿವರ ಹಾಗೂ ಭರ್ತಿ ಮಾಡುತ್ತಿರುವ ಹುದ್ದೆಗಳ ವಿವರ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು 2,84,881 ಸರ್ಕಾರಿ ಹಾಗೂ ಅರೆ ಸರ್ಕಾರಿ ಹುದ್ದೆ ಖಾಲಿ ಇವೆ. ಈ ಪೈಕಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ 79,696, ಆರೋಗ್ಯ ಇಲಾಖೆಯಲ್ಲಿ 37,572, ಒಳಾಡಳಿತ ಇಲಾಖೆಯಲ್ಲಿ 28,188, ಉನ್ನತ ಶಿಕ್ಷಣ 13,599, ಪಶುಸಂಗೋಪನೆ 11,020, ಕಂದಾಯ 10,867, ಆರ್ಥಿಕ ಇಲಾಖೆಯಲ್ಲಿ 7668, ಕಾನೂನು ಇಲಾಖೆಯಲ್ಲಿ 7659, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ 4792, ಗ್ರಾಮೀಣಾಭಿವೃದ್ಧಿ ಇಲಾಖೆ 10,504, ಪರಿಶಿಷ್ಟ ಜಾತಿಗಳ ಕಲ್ಯಾಣ 9,646, ಪರಿಶಿಷ್ಟ ಪಂಗಡಗಳ ಕಲ್ಯಾಣ 2,435, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಜೀವನೋಪಾಯ 4,010, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 3,391 ಹುದ್ದೆ ಖಾಲಿಯಿವೆ ಎಂದು ಹೇಳಿದ್ದಾರೆ.

24,300 ಹುದ್ದೆ ಭರ್ತಿಗೆ ಮಂಜೂರಾತಿ:

ಪ್ರಸ್ತುತ ಸಾರಿಗೆ ಇಲಾಖೆಯ 6,847 ಹುದ್ದೆ, ಇಂಧನ ಇಲಾಖೆಯ 2,400, ಆರ್ಥಿಕ ಇಲಾಖೆಯ 2,243, ಆರೋಗ್ಯ ಇಲಾಖೆಯ 1,725, ಕಂದಾಯ ಇಲಾಖೆಯ 1,350, ಕೃಷಿ ಇಲಾಖೆಯ 553, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ 5,267, ಪರಿಶಿಷ್ಟ ಜಾತಿಗಳ ಕಲ್ಯಾಣ ಇಲಾಖೆಯ 892, ಒಳಾಡಳಿತ ಇಲಾಖೆಯ 557, ವೈದ್ಯಕೀಯ ಶಿಕ್ಷಣ ಇಲಾಖೆಯ 333, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ 200, ನಗರಾಭಿವೃದ್ಧಿ ಇಲಾಖೆಯ 185, ಸಹಕಾರ ಇಲಾಖೆಯ 180 ಹುದ್ದೆ ಸೇರಿ ಒಟ್ಟು 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ.

ಯಾವ ಇಲಾಖೆಯ ಎಷ್ಟು ಹುದ್ದೆ ಭರ್ತಿ?

ಸಾರಿಗೆ 6,847

ಇಂಧನ 2,400

ಹಣಕಾಸು 2,243

ಆರೋಗ್ಯ 1,725

ಕಂದಾಯ 1,350

ಕೃಷಿ 557

ವೈದ್ಯ 333

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!