
ಬೆಂಗಳೂರು, [ಜ.05]: ವಿಧಾನಸೌಧದಲ್ಲಿ ಹಣ ಜಪ್ತಿ ಪ್ರಕರಣ ವಿವಾದದ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯರಿಂದ ಪುಟ್ಟರಂಗಶೆಟ್ಟಿಗೆ ಬುಲಾವ್ ನೀಡಲಾಗಿದೆ.
ವಿಧಾನಸೌಧದಲ್ಲಿ ಪುಟ್ಟರಂಗಶೆಟ್ಟಿ ಅವರ ಕಚೇರಿ ಸಿಬ್ಬಂದಿ ಟೈಪಿಸ್ಟ್ ಮೋಹನ್ ಸುಮಾರು 25 ಲಕ್ಷ ಅಕ್ರಮ ಹಣ ಸಾಗಿಸುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.
ವಿಧಾನಸೌಧದಲ್ಲೇ ಲಕ್ಷ ಲಕ್ಷ ಹಣದೊಂದಿದೆ ಪೊಲೀಸ್ ಬಲೆಗೆ ಸಚಿವರ ಆಪ್ತ : ಯಾರಾತ..?
ಈ ಹಿನ್ನೆಲೆ ತನ್ನನ್ನು ತಕ್ಷಣ ಭೇಟಿ ಮಾಡುವಂತೆ ಪುಟ್ಟರಂಗಶೆಟ್ಟಿಗೆ ಸಿದ್ದರಾಮಯ್ಯ ಬುಲಾವ್ ನೀಡಿದ್ದು, ಅದರಂತೆ ಪುಟ್ಟರಂಗಶೆಟ್ಟಿ ಅವರು ಕಾವೇರಿ ನಿವಾಸಕ್ಕೆ ಬಂದು ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದರು.
ಮಾಜಿ ಸಿಎಂ ಆಪ್ತ ಸಚಿವರ ಸಿಬ್ಬಂದಿ ಬಳಿ ವಿಧಾನಸೌಧದಲ್ಲೆ ಲಕ್ಷಗಟ್ಟಲೆ ಹಣ ಪತ್ತೆ
ವಿಧಾನಸೌಧದಲ್ಲಿ ಹಣ ಜಪ್ತಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ [ಭಾನುವಾರ] ಬಿಜೆಪಿ ರಾಜ್ಯಾದ್ಯಾಂತ ಪ್ರತಿಭಟನೆಗೆ ಕರೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.