ಸಿದ್ದು ಪರ ಪ್ರಚಾರ ಚೆನ್ನಾಗಿ ಆಗಿದೆ; ಆದರೆ ಪ್ರಾಮೀಸ್ ಸೋಮಣ್ಣ ಸ್ಪರ್ಧಿಸಿರೋದು ಗೊತ್ತಿರಲಿಲ್ಲ: ಶಿವಣ್ಣ

Published : May 05, 2023, 04:03 PM IST
ಸಿದ್ದು ಪರ ಪ್ರಚಾರ ಚೆನ್ನಾಗಿ ಆಗಿದೆ; ಆದರೆ ಪ್ರಾಮೀಸ್ ಸೋಮಣ್ಣ ಸ್ಪರ್ಧಿಸಿರೋದು ಗೊತ್ತಿರಲಿಲ್ಲ: ಶಿವಣ್ಣ

ಸಾರಾಂಶ

ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ, ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಆರಂಭಿಸಿದೆ. ತನ್ನ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಹ್ಯಾಟ್ರಿಕ್  ಹೀರೋ ಶಿವರಾಜಕುಮಾರ ಸ್ಟಾರ್‌ ಕ್ಯಾಂಪೇನರ್ ಆಗಿ ಚುನಾವಣಾ ಅಖಾಡಕ್ಕಿಳಿಸಿದೆ. ಈ ಕುರಿತು ಮಾಧ್ಯಮಗಳ ಜತೆ ನಟ ಶಿವರಾಜಕುಮಾರ ಮಾತನಾಡಿದರು.

ಶಿವಮೊಗ್ಗ (ಮೇ.5): ಕರ್ನಾಟಕ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ, ಕಾಂಗ್ರೆಸ್ ಭರ್ಜರಿ ಚುನಾವಣಾ ಪ್ರಚಾರ ಆರಂಭಿಸಿದೆ. ತನ್ನ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಹ್ಯಾಟ್ರಿಕ್  ಹೀರೋ ಶಿವರಾಜಕುಮಾರ ಸ್ಟಾರ್‌ ಕ್ಯಾಂಪೇನರ್ ಆಗಿ ಚುನಾವಣಾ ಅಖಾಡಕ್ಕಿಳಿಸಿದೆ. ಈ ಕುರಿತು ಮಾಧ್ಯಮಗಳ ಜತೆ ನಟ ಶಿವರಾಜಕುಮಾರ ಮಾತನಾಡಿದರು.

ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಪ್ರಚಾರ ಚೆನ್ನಾಗಿ ಆಗಿದೆ. ಇವತ್ತು ಮುಂಡುಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿ ಎಂದು ಹೇಳಿದರು.

ಸೋಮಣ್ಣ ನಮಗೆ ಆಪ್ತರು. ಪ್ರತಾಪ್ ಸಿಂಹ ಸ್ನೇಹಿತರು. ಅವರ ಬಗ್ಗೆ ಒಳ್ಳೆಯ ಗೌರವ ಇದೆ. ಅವರೇನು ಹೇಳಿದ್ದಾರೆ ಗೊತ್ತಿಲ್ಲ. ಪ್ರಾಮೀಸ್ ಹೇಳಬೇಕಂದ್ರೆ ಸೋಮಣ್ಣ ಅಲ್ಲಿ ಸ್ಪರ್ಧೆ ಮಾಡಿದ್ದಾರೆ ಅಂತಾ ನನಗೆ ಗೊತ್ತಿರಲಿಲ್ಲ ಎಂದರು.

ಸಾಗ​ರ​ದಲ್ಲಿ ಕಾಂಗ್ರೆಸ್‌ ಪರ ನಟ ಶಿವಣ್ಣ ಮತ​ಯಾ​ಚ​ನೆ: ನೆಚ್ಚಿನ ನಟನ ನೋಡಲು ಜನ​ಸಾ​ಗರ

ನಾನೇನು ಚಿಕ್ಕ ಹುಡುಗನಾ? ನನಗೂ ಈಗ 61 ವರ್ಷ ಆಯ್ತು. ನನಗೆ ಯಾರು ಎನಿಮಿ‌ ಇಲ್ಲ.‌ ನನಗೆ ಎಲ್ಲರೂ ಸ್ನೇಹಿತರೆ. ರಾಹುಲ್ ಗಾಂಧಿ(Rahul gandhi) ಮೀಟ್ ಮಾಡಬೇಕು ಅಂತಾ ಮೊದಲಿನಿಂದ ಆಸೆ ಇತ್ತು.‌ ಮೊನ್ನೆ ಮೀಟ್ ಮಾಡಿದೆ. ರಾಹುಲ್ ಗಾಂಧಿ ಸ್ಮಾರ್ಟ್ ಆಗಿ ಇದ್ದಾರೆ ಎಂದು ಹೊಗಳಿದರು.

ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರೂ ಪ್ರಚಾರಕ್ಕೆ ಕರೆದಿರಲಿಲ್ಲ. ಕರೆದಿದ್ದರೆ ಅವರ ಪರ ಪ್ರಚಾರಕ್ಕೂ ಹೋಗ್ತಿದ್ದೆ. ಮೊದಲು ಸಿನಿಮಾದಲ್ಲಿ ಬಿಜಿ ಇದ್ದೆ.‌ ಈಗ ಪ್ರಚಾರದಲ್ಲಿ ಬಿಜಿ ಆಗಿದ್ದೇನೆ. ನನಗೆ ರಾಹುಲ್ ಗಾಂಧಿ ಪಿಟ್ನೆಸ್ ಇಷ್ಟ ಆಯ್ತು.‌ ಹೀಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು ಎಂದರು.

ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅದು ಯಾವುದೂ ಬರಲ್ಲ. ರಾಯಚೂರಿನಲ್ಲಿ ಒಬ್ಬರು ಸಾದಿಕ್ ಅಂತಾ ಇದ್ದಾರೆ. ಅಪ್ಪು ಜೀವಂತವಾಗಿ ಇದ್ದಾಗಲೂ ಕೆಲಸ ಮಾಡಿದ್ದರು. ಈಗಲೂ ಮಾಡುತ್ತಿದ್ದಾರೆ. ಆದರೆ ಅವರು ಯಾರೂ ಹೇಳಿಕೊಂಡು ಓಡಾಡಲ್ಲ. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ ಎಂದರು.

ಸೊರಬ: ಕಾಂಗ್ರೆಸ್‌ನ ಮಧು ಬಂಗಾರಪ್ಪ ಪರ ಇಂದು ಶಿವರಾಜಕುಮಾರ್‌ ಪ್ರಚಾರ
 
ಶಿವಣ್ಣಂಗೆ ಮಾತನಾಡಕ್ಕೆ ಆಗಲ್ಲ ಅಂತಾಲ್ಲ, ನನಗೂ ಮಾತನಾಡೋಕೆ ಬರುತ್ತೆ. ಬಿಜೆಪಿ ಪರವಾಗಿ ಸುದೀಪ್ ಅವರು ಪ್ರಚಾರಕ್ಕೆ ಹೋಗ್ತಿದ್ದಾರೆ. ಹಾಗಂತ ನಾಳೆ ನಾನು ಸುದೀಪ್ ಅವರನ್ನು ಮಾತನಾಡಿಸಲು ಆಗಲ್ವಾ. ನಾನು ಸುದೀಪ್ ಕ್ಲೋಸ್ ಫ್ರೆಂಡ್ಸ್ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸದನದ ಗೌರವ ಎತ್ತಿಹಿಡಿಯಿರಿ: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಕಿವಿಮಾತು
ಎಂಎಸ್ಪಿ ಅಡಿಯಲ್ಲಿ ತೊಗರಿ ಖರೀದಿ ಆರಂಭಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ