
ರಾಯಚೂರು(ಮಾ.29): ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡಿ ಲಂಚಕ್ಕೆ ಬಲಿಯಾಗಿ 20-25 ಕೋಟಿಗೆ ಮಾರಾಟವಾಗಿದ್ದಾರೆ. 2013ರಲ್ಲಿ ಹಂಪನಗೌಡ , ಅಮರೇಗೌಡ ಒತ್ತಾಯದಿಂದ ಪ್ರತಾಪ್ ಗೌಡ ಕಾಂಗ್ರೆಸ್ ಸೇರ್ಪಡೆ ಆದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಸ್ಕಿ ಉಪಚುನಾವಣೆ ಪ್ರಚಾರ ಹಿನ್ನೆಲೆ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತನಾಡಿ, ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಚೂರಿ ಹಾಕಿ, ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದಾರೆ. ಪ್ರತಾಪ್ ಗೌಡ ಪಾಟೀಲ್ ಮಾರಾಟವಾಗಿದ್ದೇನೆ. ಮಾರಾಟವಾದ ಪ್ರತಾಪ್ ಗೌಡ ಪಾಟೀಲ್ ಅವರನ್ನು ಮಸ್ಕಿ ಮತದಾರರು ಸೋಲಿಸಿ ಎಂದು ಕರೆ ನೀಡಿದ್ದಾರೆ.
'ನಾನೇಕೆ ಕೇಂದ್ರದ ವಿರುದ್ಧ ಮಾತಾಡಲಿ, ನಾನು ಹೇಳಿದ್ದು ಹಳೆ ಕತೆ'
ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಪ್ರತಾಪ್ ಗೌಡ ಪಾಟೀಲ್ ಸೋಲುವುದು ಅಷ್ಟೇ ಸತ್ಯ. ಬಸನಗೌಡ ತುರ್ವಿಹಾಳ ಗೆಲುವಿಗಾಗಿ ನಾನು ಹಳ್ಳಿ ಹಳ್ಳಿಗೆ ಬರುತ್ತೇನೆ ಎಂದಿದ್ದಾರೆ.
ಬಸನಗೌಡ ತುರ್ವಿಹಾಳಗೆ ಅನ್ಯಾಯವಾಗಿದೆ. ನಾನು ಸಿಎಂ ಆಗಿದ್ದ ವೇಳೆ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ 2ವರೆ ಸಾವಿರ ಕೋಟಿ ಮಸ್ಕಿಗೆ ನೀಡಿದ್ದೇನೆ. ನಾನು ನೀಡಿದ ಅನುದಾನದಿಂದಲ್ಲೇ ಮಸ್ಕಿ ಅಭಿವೃದ್ಧಿ ಆಗಿದೆ. ನಂದವಡಗಿ ಏತ ನೀರಾವರಿಗೆ 3ಸಾವಿರ ಕೋಟಿ ನೀಡಿದ್ದೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.