ಕುರುಬರ ಸಂಘದ ಚುನಾವಣೆ: 34ರಲ್ಲಿ ಒಂದೇ ಒಂದು ಸ್ಥಾನ ಗೆಲ್ಲದ ಈಶ್ವರಪ್ಪ ಟೀಂ, ಸಿದ್ದು ಮೇಲುಗೈ

Published : Jun 26, 2020, 07:06 PM IST
ಕುರುಬರ ಸಂಘದ ಚುನಾವಣೆ: 34ರಲ್ಲಿ ಒಂದೇ ಒಂದು ಸ್ಥಾನ ಗೆಲ್ಲದ ಈಶ್ವರಪ್ಪ ಟೀಂ, ಸಿದ್ದು ಮೇಲುಗೈ

ಸಾರಾಂಶ

ತೀವ್ರ ಕುತೂಹಲ ಮೂಡಿದ್ದ ಪ್ರದೇಶ ಕುರುಬರ ಸಂಘದ ಚುನಾವಣೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪಗೆ ಭಾರೀ ಹಿನ್ನಡೆಯಾಗಿದ್ದು, ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ.

ಬೆಂಗಳೂರು, (ಜೂನ್.26): ಪ್ರತಿಷ್ಠೆಯ ಕಣವಾಗಿದ್ದ ಪ್ರದೇಶ ಕುರುಬರ ಸಂಘದ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಬೆಂಬಲಿಗರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪಗೆ ಮುಖಂಭವಾಗಿದೆ. ಇಂದು (ಶುಕ್ರವಾರ) ನಡೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಬೆಂಬಲಿಗರ ಎದುರು ಈಶ್ವರಪ್ಪ ಬೆಂಬಲಿಗರು 34ರಲ್ಲಿ ಒಂದೇ ಒಂದು ಸ್ಥಾನ ಗೆಲ್ಲಲಾಗದೇ ಹೀನಾಯವಾಗಿ ಸೋಲುಕಂಡರು.

 ಬೆಂಗಳೂರಲ್ಲಿ ಲಾಕ್‌ಡೌನ್ ಇಲ್ಲ, ಪೆಟ್ರೋಲ್-ಡೀಸೆಲ್ ಕೈಗೆಟುಕುತ್ತಿಲ್ಲ; ಜೂ.26ರ ಟಾಪ್ 10 ಸುದ್ದಿ!

ಸಂಘದಲ್ಲಿ ರಾಜಕೀಯ ಬೇಡ ಎಂದು ಸಿದ್ದರಾಮಯ್ಯ ಅವರು ಅವಿರೋಧ ಆಯ್ಕೆಗೆ ಒಲವು ತೋರಿದ್ದರು. ಆದ್ರೆ, ಆಡಳಿತ ಪಕ್ಷದ  ಈಶ್ವರಪ್ಪ
ಚುನಾವಣೆಗೆ ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆದಿದ್ದು, ಈಶ್ವರಪ್ಪನವರ ಬೆಂಬಲಿಗರು ಮಕಾಡೆ ಮಲಗಿದರು.

ಒಟ್ಟು 118 ನಿರ್ದೇಶಕರುಗಳಿದ್ದು, ಎಲ್ಲರೂ ಮತ ಚಲಾಯಿಸಿದ್ದಾರೆ. ಇನ್ನು ಪ್ರಮುಖವಾಗಿ ಸಿದ್ದರಾಮಯ್ಯ ಅವರ ಬೆಂಬಲಿಗರ ಪರವಾಗಿ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದರು.

ನೂತನ ಪದಾಧಿಕಾರಿಗಳ ಪಟ್ಟಿ ಇಂತಿದೆ.
* ಅಧ್ಯಕ್ಷ: ಬಳ್ಳಾರಿ ಕೃಷ್ಣ (83 ಮತಗಳು)‌, 
* ಪ್ರಧಾನ ಕಾರ್ಯದರ್ಶಿ: ಮಾಜಿ ಮೇಯರ್ ವೆಂಕಟೇಶ ಮೂರ್ತಿ (81 ಮತಗಳು) 
* ಕಾರ್ಯಾಧ್ಯಕ್ಷ: ಮೈಸೂರಿನ ಸುಬ್ಬಣ್ಣ (84)‌ ಆಯ್ಕೆ.
*ಖಜಾಂಚಿ: ದೇವರಾಜು (84) ಆಯ್ಕೆ

ಹಿರಿಯ ಉಪಾಧ್ಯಕ್ಷರು
*ಈರಣ್ಣ ಝಳಕಿ (83 ಮತಗಳು)
* ಜಗದೀಶ (78), 
* ಬಸವರಾಜ್ ಬಸಲಗುಂದಿ (75), 
* ರೇಖಾ ಹುಲಿಯಪ್ಪಗೌಡ (85) ಆಯ್ಕೆ.

ಉಪಾಧ್ಯಕರು
* ಕೃಷ್ಣ ಕುಮಾರ್ (78ಮತಗಳು)
* ಪುಟ್ಟಬಸವಯ್ಯ (78)
* ಮಿರ್ಜಾಪುರ ಮಹಾದೇವಪ್ಪ (76), 
* ಎಂ.ಸಿ.ರಾಜಣ್ಣ (81),
* ವೆಂಕಟರಮಣಪ್ಪ(75)
* ಶಂಕರ ವಿಠೋಬ ಹೆಗಡೆ (79)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!
ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ