ಮನೆಗೆ ಕರೆಸಿಕೊಂಡು ಜಮೀರ್‌ಗೆ ಸಿದ್ದರಾಮಯ್ಯ ಫುಲ್ ಕ್ಲಾಸ್...!

Published : Sep 11, 2020, 03:59 PM ISTUpdated : Sep 11, 2020, 05:09 PM IST
ಮನೆಗೆ ಕರೆಸಿಕೊಂಡು ಜಮೀರ್‌ಗೆ ಸಿದ್ದರಾಮಯ್ಯ ಫುಲ್ ಕ್ಲಾಸ್...!

ಸಾರಾಂಶ

ಒಂದಿಲ್ಲೊಂದು ವಿವಾದದಲ್ಲಿ ಸಿಲುಕಿಕೊಳ್ಳುತ್ತಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮರ್‌ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬೆಂಗಳೂರು, (ಸೆ.11): ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಕೇಳಿಬರುತ್ತಿದೆ.

ಹೌದು... ಶ್ರೀಲಂಕಾದ ಕ್ಯಾಸಿನೋಗೆ ಜಮೀರ್ ಅಹ್ಮದ್ ಮತ್ತು ನಟಿ ಸಂಜನಾ ಹೋಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಅವರು ಗಂಭೀರ ಆರೋಪ ಮಾಡಿದ್ದಾರೆ.  ಇದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಡ್ಯಾಮೇಜ್ ಆಗುವ ಭೀತಿ ಎದುರಾಗಿದೆ.

"

ಇದರಿಂದ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್‌ ಖಾನ್ ಅವರನ್ನ ತಮ್ಮ ನಿವಾಸಕ ಕರೆಸಿಕೊಂಡು ಕ್ಲಾಸ್ ತೆಗೆದುಕೊಂಡಿದ್ದಾರೆ.

ಸಂಜನಾ ಜತೆ ಕ್ಯಾಸಿನೋದಲ್ಲಿದ್ರು ಎಂದ ಸಂಬರಗಿ ವಿರುದ್ಧ ಕೇಸ್ ಜಡಿದ ಶಾಸಕ ಜಮೀರ್

ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿ ಇರುವ ತಮ್ಮ ನಿವಾಸಕ್ಕೆ ಜಮೀರ್​ರನ್ನು ಕರೆಸಿಕೊಂಡ ಸಿದ್ದರಾಮಯ್ಯ ಅವರು  ಈ ಬಗ್ಗೆ ವಿವರಣೆ ಕೇಳಿದರು.  'ಏನಪ್ಪ ಜಮೀರ್ ನಿನ್ನ ಹೆಸರು ಮೀಡಿಯಾದಲ್ಲಿ ಬರ್ತಿದೆ. ಪ್ರತಿ ಬಾರಿಯೂ ನಿನ್ನ ಹೆಸರು ಬರುತ್ತೆ' ಎಂದು ಪಶ್ನಿಸಿದ್ದಾರೆ.

'ಈ ಹಿಂದೆ ಪಾದರಾಯನಪುರ, ಡಿಜೆ ಹಳ್ಳಿ ಗಲಭೆಯಲ್ಲೂ ನಿನ್ನ ಹೆಸರು ಕೇಳಿಬಂತು. ಇದೀಗ ಡ್ರಗ್ಸ್ ಕೇಸ್​ನಲ್ಲೂ ನಿನ್ನದೇ ಹೆಸರು ಬರ್ತಿದೆ. ಏನು ಸಮಾಚಾರ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

"

ಇದಕ್ಕೆ ಪ್ರತಿಕ್ರಿಯಿಸಿದ ಜಮೀರ್​, ಆರೋಪ ಮಾಡುತ್ತಿರುವ ವ್ಯಕ್ತಿಯೂ ಗೊತ್ತಿಲ್ಲ. ಆ ಸಂಜನಾ ಕೂಡ ನನಗೆ ಗೊತ್ತಿಲ್ಲ ಸರ್. ಆದರೂ ನನ್ನನ್ನೇ ಟಾರ್ಗೆಟ್ ಮಾಡಿದ್ದಾರೆ. ಈ ಸಂಬಂಧ ಪ್ರಶಾಂತ್​ ಸಂಬರಗಿ ವಿರುದ್ಧ ಕ್ರಿಮಿನಲ್ ಒಳಸಂಚು, ಉದ್ದೇಶಪೂರ್ವಕವಾಗಿ ಅಪಮಾನ, ನಕಲಿ ದಾಖಲೆ ಸೃಷ್ಟಿ, ಉದ್ದೇಶ ಪೂರ್ವಕವಾಗಿ ದುಷ್ಕೃತ್ಯ ಎಸಗಿರುವ ಬಗ್ಗೆ ಕೇಸ್​ ದಾಖಲಿಸಿಸುವೆ' ಎಂದು ವಿವರಿಸಿದರು.

ಈ ಹಿಂದೆ ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣದಲ್ಲೂ ಆರೋಪಿಗಳ ಬೆನ್ನಿಗೆ ನಿಂತು ವಿವಾದಕ್ಕೀಡಾಗಿದ್ದ ಜಮೀರ್‌ನನ್ನು ಸಿದ್ದರಾಮಯ್ಯ ತರಾಟೆ ತೆಗೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ