
ರಾಯಚೂರು, (ಏ.06): ಮಸ್ಕಿ ಉಪಚುನಾವಣೆಯಲ್ಲಿ ಈ ಭಾಗದ ಪ್ರಮುಖ ಬೇಡಿಕೆ 5 ಎ ಕಾಲುವೆ. ಈ ಯೋಜನೆ ಜಾರಿಗೆಗಾಗಿ ಹಲವು ವರ್ಷಗಳಿಂದ ಪ್ರತಿಭಟನೆ, ಧರಣಿಗಳು ನಡೆಯುತ್ತಲೇ ಇವೆ. ಆದ್ರೆ, ಈವರೆಗೂ ಯಾವುದೇ ಭರವಸೆ ಈಡೇರಿಲ್ಲ.
ಆದ್ರೆ, ಇದೀಗ ಉಪಚುನಾವಣೆ ಸಮಯದಲ್ಲಿ 5 ಎ ಕಾಲುವೆ ಭಾರೀ ಚರ್ಚೆಯಾಗುತ್ತಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಬಿಸಿ ಮುಟ್ಟಿಸಲು ಹೋರಾಟಗಾರರು ಮುಂದಾಗಿದ್ದಾರೆ.
ಇನ್ನು ಮಸ್ಕಿ ಕ್ಷೇತ್ರದ ಪಾಮನಕಲ್ಲೂರಿನಲ್ಲಿ ಎನ್ ಆರ್ ಬಿಸಿ 5ಎ ಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡು ಭೇಟಿ ನೀಡಿ ಚರ್ಚೆ ಮಾಡಿತು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಎನ್ಆರ್ ಬಿಸಿ 5 ಎ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಮುಂದಿನ ಬಾರಿ ಅಧಿಕಾರಕ್ಕೆ ಬಂದಲ್ಲಿ ಎಷ್ಟೇ ಖರ್ಚಾದರೂ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿದರು.
ನಮ್ಮ ಮೇಲೆ ವಿಶ್ವಾಸವಿಡಿ. ನಾನು ಕೊಟ್ಟ ಮಾತು ತಪ್ಪಿಲ್ಲ. ಆಕಾಶ ಕಳಚಿದರೂ ಯೋಜನೆ ಜಾರಿ ಖಚಿತ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವಿಚಾರವಾಗಿ ಇತ್ತೀಚಿಗೆ ವಟಗಲ್ ಹಾಗು ಅಮಿನಗಡದಲ್ಲಿ ಗ್ರಾಮಸ್ಥರು ಸಚಿವ ಶ್ರೀರಾಮುಲು ಹಾಗೂ ಸಂಸದ ಸಂಗಣ್ಣ ಕರಡಿಗೆ ಮುತ್ತಿಗೆ ಹಾಕಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.