ಜನರ ಸ್ವಾಭಿಮಾನಿ ಬದುಕಿಗೆ ಬೇಕಾದ್ದನ್ನು ಸಿದ್ದರಾಮಯ್ಯ ನೀಡಿದ್ದಾರೆ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

Published : Jan 31, 2025, 12:14 AM ISTUpdated : Jan 31, 2025, 12:15 AM IST
ಜನರ ಸ್ವಾಭಿಮಾನಿ ಬದುಕಿಗೆ ಬೇಕಾದ್ದನ್ನು ಸಿದ್ದರಾಮಯ್ಯ ನೀಡಿದ್ದಾರೆ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

ಸಾರಾಂಶ

ಜನರ ಸ್ವಾಭಿಮಾನಿ ಬದುಕಿಗೆ ಏನೆಲ್ಲ ಬೇಕೋ ಅಂತಹವನ್ನು ಗುರುತಿಸಿ ಕಾರ್ಯಕ್ರಮ ನೀಡುವ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು. 

ಮೈಸೂರು (ಜ.31): ಜನರ ಸ್ವಾಭಿಮಾನಿ ಬದುಕಿಗೆ ಏನೆಲ್ಲ ಬೇಕೋ ಅಂತಹವನ್ನು ಗುರುತಿಸಿ ಕಾರ್ಯಕ್ರಮ ನೀಡುವ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘ, ಮೈಸೂರು ವಿವಿ ಹಿರಿಯ ವಿದ್ಯಾರ್ಥಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುವ ಪತ್ರಕರ್ತ ಸಿಂಧುವಳ್ಳಿ ಸುಧೀರ ಅವರ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಜೀವನದ ಸಾಧನೆ ಕುರಿತ ಭಾಗ್ಯವಿಧಾತ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಶ್ರೀಮಂತ ಮಕ್ಕಳಿಗೆ ಮಾತ್ರವಲ್ಲ, ಬಡ ಮಕ್ಕಳಿಗೂ ಪೌಷ್ಟಿಕಾಂಶ ದೊರಕಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಕ್ಷೀರಭಾಗ್ಯ ಇದಕ್ಕೆ ಒಂದು ಉತ್ತಮ ಉದಾಹರಣೆ. ಹಳ್ಳಿಗಾಡಿನಲ್ಲಿ ಅಂದಿನ ಕಾಲಘಟ್ಟದಲ್ಲಿ ಜನಿಸಿದರೂ ಪ್ರಾಮಾಣಿಕತೆ, ಕಾಳಜಿ, ಬದ್ಧತೆ ಇರಿಸಿಕೊಂಡಿದ್ದರೆ ಸಂವಿಧಾನದ ಅವಕಾಶದ ಅಡಿಯಲ್ಲಿ ಯಾವ ಉನ್ನತ ಮಟ್ಟಕ್ಕೆ ಹೋಗಬಹುದಾಗಿದೆ ಎಂಬುದಕ್ಕೆ ಸಿದ್ದರಾಮಯ್ಯ ಅವರೇ ಸಾಕ್ಷಿ ಎಂದರು. ಬಡತನದಲ್ಲಿ ಹುಟ್ಟಿದವರು ಬಡತನದಲ್ಲಿಯೇ ಸಾಯಬೇಕಾಗಿಲ್ಲ. ಶಿಕ್ಷಣ, ಸಂವಿಧಾನದ ಮೂಲಕ ಸಾಕಷ್ಟು ಬದಲಾವಣೆ ಕಾಣಲು ಸಾಧ್ಯ ಎಂಬುದನ್ನು ಸಿದ್ದರಾಮಯ್ಯ ಸಾಧಿಸಿ ತೋರಿಸಿದ್ದಾರೆ. 

ಬಸ್‌ ಪ್ರಯಾಣ ದರ ಏರಿಕೆ ಹಿಂದೆ ಸದುದ್ದೇಶ ಇರಬಹುದು: ಸ್ಪೀಕರ್‌ ಯು.ಟಿ.ಖಾದರ್‌

ಅಲ್ಲದೆ, ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವಾಗಲೆಲ್ಲ ಜನಸಾಮಾನ್ಯರನ್ನು ಹುಡುಕಿಕೊಂಡು ಅವರಿಗೆ ಅನುಕೂಲ ಆಗಲೆಂದು ಉತ್ತಮ ಸ್ಥಾನ ನೀಡಿದ್ದಾರೆ. ಆಹಾರ ಭದ್ರತಾ ಕಾಯ್ದೆ ರಾಷ್ಟ್ರದಲ್ಲಿ ಜಾರಿಗೆ ಬರುವ ಮೊದಲೇ ನಮ್ಮಲ್ಲಿ ಅನ್ನಭಾಗ್ಯ ತಂದರು. ಹೀಗಾಗಿ ಜನತೆಯ ಸ್ವಾಭಿಮಾನದ ಬದುಕಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದು ಅವರು ಹೇಳಿದರು. ಕೃತಿ ಕುರಿತು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಮಾತನಾಡಿ, ಸಿದ್ದರಾಮಯ್ಯ ಅವರದು ಬಹುದೊಡ್ಡ ವ್ಯಕ್ತಿತ್ವ. ಅದನ್ನು ಇತರರಿಗೂ ತಿಳಿಸಬೇಕಾದ ಅಗತ್ಯವಿದೆ. ಈ ರೀತಿ ಮಾಡಿದಲ್ಲಿ ಯುವ ಪೀಳಿಗೆ ತಮ್ಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಈ ಕೆಲಸವನ್ನು ಸಿಂಧುವಳ್ಳಿ ಸುಧೀರ್ ಅವರ ಭಾಗ್ಯವಿಧಾತ ಪುಸ್ತಕ ಮಾಡುತ್ತದೆ ಎಂದರು.

ವಿಧಾತ ಎಂಬ ಪದದ ಅರ್ಥ, ಒಂದು ರಾಜ್ಯ, ದೇಶದ ಜನರ ಬದುಕನ್ನು ನಿರ್ಧರಿಸುವಾತ ಎಂದಾಗುತ್ತದೆ. ಇದೇ ರೀತಿ ಸಿದ್ಧರಾಮಯ್ಯ ಅವರು ಸಹಾ ನಡೆದಿದ್ದು, ಅವರು ಎದುರಿಸಿದ ಸಂಕಷ್ಟ, ಏಳುಬೀಳು, ರಾಜಕಾರಣದಲ್ಲಿ ಎದುರಿಸಿದ ಸವಾಲು ದಾಖಲೀಕರಣ ಇಲ್ಲಿ ಆಗಿದೆ ಎಂದು ಅವರು ನುಡಿದರು. ವಿವಿ ಹಿರಿಯ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಧರ್ಮಾಪುರ ನಾರಾಯಣ ಮೊದಲಾದವರು ಇದ್ದರು.

ಸಿ.ಟಿ.ರವಿ ಪ್ರಕರಣ ಮಹಜರು ಬಸವರಾಜ ಹೊರಟ್ಟಿ ವ್ಯಾಪ್ತಿಗೆ: ಯು.ಟಿ.ಖಾದರ್‌

ಕಾಲ್ತುಳಿತ ನೋವಿನ ಸಂಗತಿ, ಆಗಬಾರದಿತ್ತು: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ನೋವಿನ ಸಂಗತಿ. ಇಂತಹ ಘಟನೆ ಎಲ್ಲೂ ಜರುಗಬಾರದು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಕಳವಳ ವ್ಯಕ್ತಪಡಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಹೇಗೆ ಆಯಿತು ಎಂದು ಗೊತ್ತಿಲ್ಲ. ಮಹಾಕುಂಭಮೇಳಕ್ಕೆ ನಮ್ಮ ರಾಜ್ಯದಿಂದ ಎಷ್ಟು ಜನ ಭಕ್ತರು ಹೋಗಿದ್ದಾರೆ ಎಂಬ ಮಾಹಿತಿ ಇಲ್ಲ. ಆದರೆ, ರಾಜ್ಯ ಸರ್ಕಾರದ ಬಳಿ ಆ ಮಾಹಿತಿ ಇರಬಹುದು. ಪ್ರಯಾಗ್ ರಾಜ್ ಗೆ ಹೋಗಿರುವವರೊಂದಿಗೆ ಸರ್ಕಾರ ಸಂಪರ್ಕದಲ್ಲಿದ್ದು, ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತದೆ ಎಂದರು. ನಾನು ಸಹ ಪ್ರಯಾಗ್ ರಾಜ್ ಗೆ ಹೋಗಿ ಬಂದಿದ್ದೇವೆ. ವಿಐಪಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ತೊಂದರೆ ಇರುವುದಿಲ್ಲ. ಜನ ಸಾಮಾನ್ಯರಿಗೆ ಯಾವ ರೀತಿ ವ್ಯವಸ್ಥೆ ಇದೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!