
ತುಮಕೂರು, (ಅ.03): 'ಡಾ. ಸಿ.ಎಂ. ರಾಜೇಶ್ ಗೌಡ ಬಿಜೆಪಿ ಸೇರಲು ನಾನು ಕಾರಣ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ, 'ಅವನಂತಹ ಪೆದ್ದ ಯಾರೂ ಇಲ್ಲ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜೇಶ್, ನನ್ನ ಮಗನ ಸ್ನೇಹಿತ. ನನ್ನ ಸ್ನೇಹಿತ ಅಲ್ಲ. ನನ್ನ ವಯಸ್ಸು ಎಷ್ಟು ಆತನ ವಯಸ್ಸು ಎಷ್ಟು? ರಾಜೇಶ್ ತಂದೆ ಸಿ.ಪಿ. ಮೂಡಲಗಿರಿಯಪ್ಪ ಈ ಹಿಂದೆ ಜೆಡಿಎಸ್ನಲ್ಲಿ ಇದ್ದವರು. ಆ ವಿಶ್ವಾಸದಿಂದ ಕುಮಾರಸ್ವಾಮಿಯೇ ರಾಜೇಶ್ನನ್ನು ಬಿಜೆಪಿಗೆ ಕಳುಹಿಸಿದ್ದಾರೆ ಎಂದು ನಾನು ಹೇಳುವೆ' ಎಂದರು.
ರಾಜಕೀಯವೇ ಬೇರೆ ಸ್ನೇಹವೇ ಬೇರೆ. ಕುಮಾರಸ್ವಾಮಿ ಜವಾಬ್ದಾರಿಯಿಂದ ರಾಜಕೀಯ ಹೇಳಿಕೆಗಳನ್ನು ಕೊಡಬೇಕು. ಕುಮಾರಸ್ವಾಮಿ ನೀಡುವ ರಾಜಕೀಯ ಹೇಳಿಕೆಗಳಿಗೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
ಶಿರಾ ಮತ್ತು ರಾಜರಾಜೇಶ್ವರಿ ನಗರದಲ್ಲಿ ನಾವು ಗೆಲವು ಸಾಧಿಸುತ್ತೇವೆ. ಶಿರಾದಲ್ಲಿ ತ್ರಿಕೋನ ಸ್ಪರ್ಧೆ ಇದೆ. ಆದರೆ ಅನುಕಂಪ ಜೆಡಿಎಸ್ನವರ ಕೈ ಹಿಡಿಯುವುದಿಲ್ಲ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳಬೇಕು. ಇದರಿಂದ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಧ್ಯ ಎಂದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.