ನಿಮ್ಮ ತಂದೆ ಕೂಡ ವಿಪಕ್ಷ ನಾಯಕರಾಗಿದ್ರು, ಅದು ಪುಟಗೋಸಿನಾ? ಎಚ್‌ಡಿಕೆಗೆ ಸಿದ್ದು ಗುದ್ದು

Published : Oct 13, 2021, 04:15 PM ISTUpdated : Oct 13, 2021, 04:18 PM IST
ನಿಮ್ಮ ತಂದೆ ಕೂಡ ವಿಪಕ್ಷ ನಾಯಕರಾಗಿದ್ರು, ಅದು ಪುಟಗೋಸಿನಾ?  ಎಚ್‌ಡಿಕೆಗೆ ಸಿದ್ದು ಗುದ್ದು

ಸಾರಾಂಶ

* ಪುಟಗೋಸಿ ವಿರೋಧ ಪಕ್ಷದ ನಾಯಕ ಎಂದ ಎಚ್‌ಡಿಕೆ * ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ಸಿದ್ದು ತಿರುಗೇಟು * ದೇವೆಗೌಡರು ವಿರೋಧ ಪಕ್ಷದ ನಾಯಕರಾಗಿದ್ರು ಅದು ಫುಟಗೋಸಿನಾ? ಎಂದು ಪ್ರಶ್ನಿಸಿದ ಸಿದ್ದು

ಕಲಬುರಗಿ, (ಅ.13) : ಪುಟಗೋಸಿ ವಿರೋಧ ಪಕ್ಷದ ನಾಯಕ (Opposition leader) ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಮೈತ್ರಿ ಸರ್ಕಾರವನ್ನು ಕಿತ್ತೆಸೆದರು ಎನ್ನುವ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಸಿದ್ದು ತಿರುಗೇಟು ಕೊಟ್ಟಿದ್ದಾರೆ.

ಈ ಬಗ್ಗೆ ಇಂದು (ಅ.13) ಕಲಬುರಗಿಯಲ್ಲಿ (Kalaburagi) ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಎಚ್.ಡಿ. ದೇವೇಗೌಡ (HD Devegowda) ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಹಾಗಾದರೆ ನಿಮ್ಮ ತಂದೆ ಕೂಡ ಪುಟಗೋಸಿ ಹುದ್ದೆಯಲ್ಲಿ ಇದ್ದದ್ದಾ ಎಂದು ಎಚ್.ಡಿ.ಕುಮಾರಸ್ವಾಮಿಗೆ (HD Kumaraswamy) ಪ್ರಶ್ನಿಸಿದರು.

ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎನ್ನುವ ಎಚ್‌ಡಿಕೆ ಹೇಳಿಕೆಗೆ ಸಿದ್ದು ಪುತ್ರ ತಿರುಗೇಟು

ದೇವೆಗೌಡರ ಸಿಎಂ ಆದ್ಮೇಲೆ ಕುಮಾರಸ್ವಾಮಿ ರಾಜಕೀಯಕ್ಕೆ ಬಂದ್ರು. ದೇವೆಗೌಡರು ವಿರೋಧ ಪಕ್ಷದ ನಾಯಕರಾಗಿದ್ರು. ಹಾಗಾದ್ರೆ ಅದು ಫುಟಗೋಷಿನಾ ?. ಸಿಎಂ ಆಗಿದ್ದವರು ಜವಬ್ದಾರಿಯಿಂದ ಮಾತಾಡಬೇಕು. ವೈಯಕ್ತಿಯವಾಗಿ ಮಾತನಾಡಬಾರದು ಎಂದು ಟಾಂಗ್ ಕೊಟ್ಟರು.

ಐಟಿ ರೇಡ್ ಬಗ್ಗೆ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಕುಮಾರಸ್ವಾಮಿ ಬಗ್ಗೆ ನಾನು ಮಾತಾಡಬಾರದು ಅಂದುಕೊಂಡಿದ್ದೆ‌. ಬಿಎಸ್ ವೈ ಬರ್ತ್ ಡೇ ಬಿಟ್ರೆ ನಾನು ಮೀಟಿಂಗ್ ನಲ್ಲಿ ಭೇಟಿ ಆಗಿದ್ದೇನೆ ಹೊರತು ಬೇರೆ ಕಡೆ ಭೇಟಿ ಮಾಡಿಲ್ಲ. ನಾನು ಅಧಿಕಾರದಲ್ಲಿರೋರನ್ನ ವೈಯಕ್ತಿಕವಾಗಿ ನಾನು ಭೇಟಿ ಮಾಡಲ್ಲ. ರಾಜಕೀಯದಲ್ಲಿ ನೀತಿ ನಿಯಮಗಳು ಇರುತ್ತವೆ‌‌‌ ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿದ್ರು ಯಾಕೆ ಸನ್ಯಾಸತ್ವ ಆಗೋದಕ್ಕಾ ?. ಪಾರ್ಟಿ ಹೆಸರು ಜೆಡಿಎಸ್ ಸೆಕ್ಯೂಲರ್, ಸರ್ಕಾರ ಮಾಡೋದು ಕಮ್ಯೂನಲ್ ಬಿಜೆಪಿ. ಇಂತವರಿಂದ ನಾವು ಪಾಠ ಕಲೀಬೇಕಾ ಎಂದು ಕಿಡಿಕಾರಿದರು.

ಒಂದು ನಾಲಿಗೆ ಇರಬೇಕು, ಎರಡು ನಾಲಿಗೆ ಇರಬಾರದು. ಯಡಿಯೂರಪ್ಪ ಆಪರೇಷನ್ ಕಮಲ ಮಾಡಿದ್ರು ಅಂತ ಹೇಳಿದ್ರು. ಈಗ ನನ್ನ ಹೆಸರು ಹೇಳ್ತಿದ್ದಾರೆ. ನನ್ನ ವಿರುದ್ದ ಜನರನ್ನ ಎತ್ತಿಕಟ್ಟೋದಕ್ಕೆ, ಮೈಸೂರು ಜನರನ್ನ ಎತ್ತಿಕಟ್ಟೊಕೆ ಈ ರೀತಿ ಮಾತಾಡ್ತಿದ್ದಾರೆ. ಆಪರೇಷನ್ ಕಮಲಕ್ಕೆ ಒಳಗಾಗ್ತಿದ್ದಾರೆ ಅಂತ ನಾನು ಫೋನ್‌ ಮಾಡಿದ್ರು 9 ದಿನ ಅಮೇರಿಕಾದಲ್ಲಿ ಇದ್ರು ಎಂದರು.

ಇವರು ಸಿಎಂ ಇದ್ದಾಗ ಎಲ್ಲಿದ್ರು, ವೆಸ್ಟೆಂಡ್ ಹೋಟೆಲ್‌ನಲ್ಲಿ. ಒಬ್ಬ ಮಂತ್ರಿಯನ್ನು ಭೇಟಿ ಆಗಿಲ್ಲ, ಶಾಸಕರನ್ನು ಭೇಟಿ ಆಗಿಲ್ಲ. ಈ ಕಾರಣಕ್ಕಾಗಿ ಇವರ ಸರ್ಕಾರ ಹೋಗಿದೆ ಎಂದು ಕುಮಾರಸ್ವಾಮಿಗೆ ತಿರುಗೇಟು ಕೊಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್