ಅದ್ಯಾವುದಪ್ಪ ನನಗೆ ಗೊತ್ತಿರದ ಸ್ಟ್ರ್ಯಾಟಜಿ.?: ವಿಜಯೇಂದ್ರಗೆ ಸಿದ್ದರಾಮಯ್ಯ ಪ್ರಶ್ನೆ

Published : Oct 19, 2020, 02:33 PM ISTUpdated : Oct 19, 2020, 02:42 PM IST
ಅದ್ಯಾವುದಪ್ಪ ನನಗೆ ಗೊತ್ತಿರದ ಸ್ಟ್ರ್ಯಾಟಜಿ.?: ವಿಜಯೇಂದ್ರಗೆ ಸಿದ್ದರಾಮಯ್ಯ ಪ್ರಶ್ನೆ

ಸಾರಾಂಶ

ಶಿರಾ ಹಾಗೂ ಆರ್.ಆರ್.ನಗರ ಕ್ಷೇತ್ರಗಳ ಉಪಚುನಾವಣಾ ಕಾವು ಏರತೊಡಗಿದ್ದು, ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದೆ. 

ಬೆಳಗಾವಿ, (ಅ.19): ಶಿರಾ ಕ್ಷೇತ್ರಕ್ಕೂ ಬಿ.ವೈ.ವಿಜಯೇಂದ್ರಗೂ ಏನು ಸಂಬಂಧ..? ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಎಂಬುದನ್ನು ಬಿಟ್ಟರೆ ಬೇರೆ ಏನು ಸಂಬಂಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು (ಸೋಮವಾರ) ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆ.ಆರ್. ಪೇಟೆಯಲ್ಲಿ ಮಾಡಿದ ಸ್ಟ್ರ್ಯಾಟಜಿಯನ್ನು ಶಿರಾದಲ್ಲೂ ಮಾಡ್ತಾರಂತೆ. ಅದ್ಯಾವುದಪ್ಪ ನನಗೆ ಗೊತ್ತಿರದ ಸ್ಟ್ಯ್ರಾಟಜಿ..? ಅದೇನೇ ಮಾಡಿದರೂ ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಹೇಳಿದರು.

ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾದಲ್ಲೂ ಗೆಲ್ಲಲು ವಿಜಯೇಂದ್ರ ತಂತ್ರ

ಶಿರಾ ಕ್ಷೇತ್ರದಲ್ಲಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬೀಡು ಬಿಟ್ಟಿರುವುದಕ್ಕೆ ಕಿಡಿಕಾರಿದರು.

ಶಿರಾ ಕ್ಷೇತ್ರಕ್ಕೂ ವಿಜಯೇಂದ್ರಗೂ ಏನು ಸಂಬಂಧ? ದುಡ್ಡು ಖರ್ಚು ಮಾಡಲು ಹೋಗಿ ಅಲ್ಲಿ ಕುಳಿತಿದ್ದಾರೆ. ಕೆ.ಆರ್. ಪೇಟೆಯಲ್ಲಿ ದುಡ್ಡು ಖರ್ಚು ಮಾಡಿದರು. ಇದೀಗ ಶಿರಾದಲ್ಲಿ ಮಾಡುತ್ತಿದ್ದಾರೆ ಎಂದು ಗುಡುಗಿದರು.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ....

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!